Pahalgam Terrorist Attack: ಪಹಲ್ಗಾಮ್ ದಾಳಿಗೂ ಮುನ್ನ ಎಚ್ಚರಿಕೆ ನೀಡಿದ್ದ ಗುಪ್ತಚರ ಸಂಸ್ಥೆಗಳು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಗೂ ಮುನ್ನ ಗುಪ್ತಚರ ಸಂಸ್ಥೆಗಳು ಪ್ರವಾಸಗಿರನ್ನು ಗುರಿಯಾಗಿಸಿ ದಾಳಿ ನಡೆಸಬಹುದು ಎನ್ನುವ ಎಚ್ಚರಿಕೆಯನ್ನು ನೀಡಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಿರುವ ಈ ರೈಲ್ವೆ ಸಂಪರ್ಕದಿಂದ ಪಾಕಿಸ್ತಾನ ಖಂಡಿತವಾಗಿಯೂ ಸಂತೋಷವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Pahalgam Terrorist Attack: ಪಹಲ್ಗಾಮ್ ದಾಳಿಗೂ ಮುನ್ನ ಎಚ್ಚರಿಕೆ ನೀಡಿದ್ದ ಗುಪ್ತಚರ ಸಂಸ್ಥೆಗಳು
ಪಹಲ್ಗಾಮ್
Image Credit source: PTI

Updated on: May 04, 2025 | 8:24 AM

ಶ್ರೀನಗರ, ಮೇ 04: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಗೂ ಮುನ್ನ ಗುಪ್ತಚರ ಸಂಸ್ಥೆಗಳು ಪ್ರವಾಸಗಿರನ್ನು ಗುರಿಯಾಗಿಸಿ ದಾಳಿ ನಡೆಸಬಹುದು ಎನ್ನುವ ಎಚ್ಚರಿಕೆಯನ್ನು ನೀಡಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

ಶ್ರೀನಗರದ ಹೊರವಲಯದಲ್ಲಿರುವ ಜಬರ್ವಾನ್ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಹೋಟೆಲ್‌ಗಳಲ್ಲಿ ತಂಗಿರುವ ಪ್ರವಾಸಿಗರನ್ನು ಗುರಿಯಾಗಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಗುಪ್ತಚರ ಎಚ್ಚರಿಕೆ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಈ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಯಿತು ಮತ್ತು ದಚಿಗಮ್, ನಿಶಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಉನ್ನತ ಪೊಲೀಸ್ ಅಧಿಕಾರಿಗಳು ಶ್ರೀನಗರದಲ್ಲಿ ಮೊಕ್ಕಾಂ ಹೂಡಿದ್ದರು.

ಇದನ್ನೂ ಓದಿ
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಮತ್ತಷ್ಟು ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸೋನಾಮಾರ್ಗ್‌ನ ಗಂಗಾಂಗೀರ್‌ನಲ್ಲಿ ನಿರ್ಮಾಣ ಸ್ಥಳದ ಮೇಲೆ ನಡೆದ ಭಯೋತ್ಪಾದಕ ದಾಳಿಯು ಈ ಪ್ರದೇಶಗಳತ್ತ ಗಮನ ಸೆಳೆದಿತ್ತು ಮತ್ತು ಭದ್ರತಾ ಪಡೆಗಳು ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದವು. ಆ ದಾಳಿಯಲ್ಲಿ ಒಬ್ಬ ವೈದ್ಯ ಸೇರಿದಂತೆ ಏಳು ಜನರು ಸಾವನ್ನಪ್ಪಿದರು. ಈ ಪ್ರದೇಶವು ಶ್ರೀನಗರ ನಗರದ ಮೇಲಿರುವ ಜಬರ್ವಾನ್ ಶ್ರೇಣಿಯ ಇನ್ನೊಂದು ಬದಿಯಲ್ಲಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶ್ರೀನಗರದ ಹೊರವಲಯದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಆದರೆ ಈ ಪ್ರಯತ್ನಗಳು ಯಾವುದೇ ಯಶಸ್ಸನ್ನು ನೀಡಲಿಲ್ಲ ಮತ್ತು ಏಪ್ರಿಲ್ 22 ರಂದು ಕಾರ್ಯಾಚರಣೆಯನ್ನು ರದ್ದುಗೊಳಿಸಲಾಯಿತು.

ಅದೇ ದಿನ, ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದರು. ಕಳೆದ ತಿಂಗಳು ಕತ್ರಾದಿಂದ ಶ್ರೀನಗರಕ್ಕೆ ಮೊದಲ ರೈಲಿಗೆ ಹಸಿರು ನಿಶಾನೆ ತೋರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾಗ ಭಯೋತ್ಪಾದಕರು ಇಂತಹ ದುಷ್ಕೃತ್ಯದ ಪಿತೂರಿ ನಡೆಸಲು ಬಯಸಿದ್ದರು ಎಂದು ತಿಳಿದುಬಂದಿದೆ.

ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಿರುವ ಈ ರೈಲ್ವೆ ಸಂಪರ್ಕದಿಂದ ಪಾಕಿಸ್ತಾನ ಖಂಡಿತವಾಗಿಯೂ ಸಂತೋಷವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ, ಕತ್ರಾ ಪ್ರದೇಶದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆಯ ಪ್ರತಿಕೂಲ ಹವಾಮಾನ ಮುನ್ಸೂಚನೆಯಿಂದಾಗಿ ಏಪ್ರಿಲ್ 19 ರಂದು ನಿಗದಿಯಾಗಿದ್ದ ಪ್ರಧಾನಿಯವರ ಭೇಟಿಯನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us