AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corbevax Covid 19 Vaccine: 5-18ವರ್ಷದವರ ಮೇಲೆ ’ಕಾರ್ಬ್​ವ್ಯಾಕ್ಸ್’ ಲಸಿಕೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ

ಬಯಾಲಜಿಕಲ್​ ಇ  ಸಂಸ್ಥೆ ಅಭಿವೃದ್ಧಿ ಪಡಿಸಿರುವ ಕಾರ್ಬ್​ವ್ಯಾಕ್ಸ್​ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, ಇದು ಮೂರು ಡೋಸ್​ಗಳನ್ನು ಪಡೆಯಬೇಕಾಗುತ್ತದೆ. 

Corbevax Covid 19 Vaccine: 5-18ವರ್ಷದವರ ಮೇಲೆ ’ಕಾರ್ಬ್​ವ್ಯಾಕ್ಸ್’ ಲಸಿಕೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ
ಲಸಿಕೆ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 02, 2021 | 9:39 AM

Share

5-18ವರ್ಷದವರ ಮೇಲೆ ಕೊವಿಡ್​ 19 ಲಸಿಕೆ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​ ಮೂಲದ ಔಷಧೀಯ ಕಂಪನಿ ಬಯಾಲಜಿಕಲ್​ ಇ ಲಿಮಿಟೆಡ್​ ಕಂಪನಿಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (DCGI) ಅನುಮತಿ ನೀಡಿದೆ. ಬಯಾಲಜಿಕಲ್​ ಇ ಕಂಪನಿ ಅಭಿವೃದ್ಧಿ ಪಡಿಸಿರುವ ಲಸಿಕೆ ಹೆಸರು ಕಾರ್ಬ್​ವ್ಯಾಕ್ಸ್​(Corbevax) ಎಂದಾಗಿದ್ದು, ಇದು ಮೂರೂ ಹಂತದ ಕ್ಲಿನಿಕಲ್​ ಪ್ರಯೋಗದಲ್ಲಿ ಯಶಸ್ವಿಯಾದರೆ 5ವರ್ಷದ ಮಕ್ಕಳಿಂದ 18 ವರ್ಷದವರೆಗಿನವರಿಗೆ ಈ ಲಸಿಕೆ ನೀಡಬಹುದಾಗಿದೆ. ಅಂದ ಹಾಗೇ, ಈ ಕಾರ್ಬ್​ವ್ಯಾಕ್ಸ್ (Corbevax) ಅಥವಾ ಬಯಾಲಜಿಕಲ್​ ಇ ಲಿಮಿಟೆಡ್ (Biologicals E Limited) ಲಸಿಕೆಯ ಕ್ಲಿನಿಕಲ್​ ಪ್ರಯೋಗ ದೇಶದ 10 ಕಡೆಗಳಲ್ಲಿ ನಡೆಯಲಿದೆ. 

ಬಯಾಲಜಿಕಲ್​ ಇ  ಸಂಸ್ಥೆ ಅಭಿವೃದ್ಧಿ ಪಡಿಸಿರುವ ಕಾರ್ಬ್​ವ್ಯಾಕ್ಸ್​ ಲಸಿಕೆ ಆರ್​ಬಿಡಿ ಪ್ರೋಟಿನ್​ ಸಬ್​ ಯೂನಿಟ್​ ಲಸಿಕೆಯಾಗಿದ್ದು, ಇದು ಮೂರು ಡೋಸ್​ಗಳನ್ನು ಪಡೆಯಬೇಕಾಗುತ್ತದೆ.  ಇದನ್ನು ದೇಹದಲ್ಲಿ ಇಂಜೆಕ್ಟ್​ ಮಾಡಿದಾಗ  SARS-CoV-2 ನ ಸ್ಪೈಕ್​ ಪ್ರೋಟೀನ್​ ಉತ್ಪಾದಿಸುತ್ತದೆ. ಹಾಗೇ, ರೋಗಪ್ರತಿರೋಧಕ ಪ್ರತಿಕ್ರಿಯೆಯನ್ನು ಹೊರಸೂಸುತ್ತದೆ. ಸೋಂಕಿನ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಜೈಡಸ್​ ಕ್ಯಾಡಿಲಾಕ್ಕೆ ಸಿಕ್ಕಿದೆ ಅನುಮೋದನೆ ಸದ್ಯ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ನೀಡಲು ಮೂರ್ನಾಲ್ಕು ಲಸಿಕೆಗಳಿದ್ದರೂ, ಮಕ್ಕಳಿಗೆ ನೀಡಲು ಒಂದೂ ಕೊವಿಡ್ 19 ಲಸಿಕೆಯಿಲ್ಲ. ಸದ್ಯ ಜೈಡಸ್​ ಕ್ಯಾಡಿಲಾ ಸಂಸ್ಥೆಯ ZyCoV-D ಕೊವಿಡ್​ 19 ಲಸಿಕೆಯನ್ನು 12-18ವರ್ಷದವರೆಗಿನವರ ಮೇಲೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಈಗಾಗಲೇ ಡಿಸಿಜಿಐ ಅನುಮೋದನೆ ನೀಡಿದೆ. ಸೆಪ್ಟೆಂಬರ್​ನಿಂದ ಬಳಕೆಗೆ ಲಭ್ಯವಿರಲಿದೆ ಎಂದು ಹೇಳಲಾಗಿತ್ತಾದರೂ ಇನ್ನೂ ಆ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ.  ಇದರೊಂದಿಗೆ ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು 2-18ವರ್ಷದವರ ಮೇಲೆ, 2 ಹಾಗೂ 3ನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲಾಗುತ್ತಿದೆ ಎಂದೂ ಹೇಳಲಾಗಿದೆ. ಹಾಗೇ, ಕೊವ್ಯಾಕ್ಸಿನ್​ ಲಸಿಕೆಯನ್ನು ಅಕ್ಟೋಬರ್​-ನವೆಂಬರ್​​ನಿಂದ ಮಕ್ಕಳಿಗೆ ನೀಡಲು ಶುರು ಮಾಡಲಾಗುತ್ತದೆ ಎಂದು ಈ ಮೊದಲು ತಿಳಿಸಿಲಾಗಿದೆ.

ಇದನ್ನೂ ಓದಿ: ದೇಹಕ್ಕೆ ತಂಪು ನೀಡುವ ಹೆಸರು ಬೇಳೆ ದೋಸೆ ಮಾಡಿ ಸವಿಯಿರಿ; ಮಾಡುವ ವಿಧಾನ ಇಲ್ಲಿದೆ ನೋಡಿ

Chanakya Niti: ಮಾತು, ವರ್ತನೆ, ಸಹವಾಸದ ಬಗ್ಗೆ ಸದಾ ನಿಗಾ ವಹಿಸಿ; ಈ ಸಂಗತಿಯನ್ನು ಮರೆಯಬೇಡಿ

Published On - 9:21 am, Thu, 2 September 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!