AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​

Covid-19 Vaccine: ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​
ಕೊರೊನಾ ಲಸಿಕೆ
Follow us
TV9 Web
| Updated By: Lakshmi Hegde

Updated on:Sep 04, 2021 | 10:47 AM

ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಔಷಧೀಯ ಸಂಸ್ಥೆಗಳು ಮುಂದಾಗಿದ್ದು, ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿವೆ. ಇದೀಗ ಇನ್ನೊಂದು ಲಸಿಕೆಯ 1ನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ಕೊಟ್ಟಿದೆ. ಈ ಲಸಿಕೆ ಕ್ಲಿನಿಕಲ್​ ಟ್ರಯಲ್​ನಲ್ಲಿ ಯಶಸ್ವಿಯಾದರೆ, ಭಾರತದಲ್ಲಿ ಇನ್ನೊಂದು ಸ್ವದೇಶಿ ಲಸಿಕೆ ಬಳಕೆಗೆ ಸಿಗಲಿದೆ.

ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಆರೋಗ್ಯವಂತ ಸ್ವಯಂಸೇವಕರ ಮೇಲೆ ಈ ರಿಲಯನ್ಸ್​ ಲೈಫ್​ ಸೈನ್ಸ್​ನ SARS-CoV-2 ಮರುಸಂಯೋಜಕ ಪ್ರೊಟೀನ್​​ ಉಪಘಟಕ ಲಸಿಕೆಯ ಪ್ರಯೋಗ ನಡೆಯಲಿದೆ. ಈ ಹಂತದಲ್ಲಿ ಲಸಿಕೆಯ ಸುರಕ್ಷತೆ, ಸಹಿಷ್ಣುತೆ ಮತ್ತು ಪ್ರತಿರೋಧಕ ಶಕ್ತಿಯನ್ನು ಮೌಲ್ಯಮಾಪನವನ್ನು ಶಿಷ್ಟಾಚಾರದ ಅನ್ವಯ ಮಾಡಲಾಗುವುದು ಎಂದು ರಿಲಯನ್ಸ್​ ಲೈಫ್​ ಸೈನ್ಸ್​ ಹೇಳಿದೆ.

ರಿಲಯನ್ಸ್​ ಲೈಫ್​ ಸೈನ್ಸ್​​ ಸಂಸ್ಥೆಯು ತನ್ನ ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಅನುಮೋದನೆ ಕೋರಿ ಆಗಸ್ಟ್​ 26ರಂದು ಡಿಸಿಜಿಐಗೆ ಅರ್ಜಿ ಸಲ್ಲಿಸಿತ್ತು. ಇದೀಗ ಡಿಸಿಜಿಐನ ವಿಷಯ ತಜ್ಞರ ಸಮಿತಿ (SEC-Special Expert Committee) ಶಿಫಾರಸ್ಸಿನ ಅನ್ವಯ ಲಸಿಕೆ ಮೊದಲ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಅನಿಮೋದನೆ ಸಿಕ್ಕಿದೆ. ಹಾಗೇ, ಸಂಸ್ಥೆಯು ಪರಿಷ್ಕೃತ ಕ್ಲಿನಿಕಲ್​ ಪ್ರಯೋಗದ ಪ್ರೊಟೊಕಾಲ್​​ನ್ನು 14 ದಿನದ ಬದಲಾಗಿ, 42ನೇ ದಿನಕ್ಕೆ ಸಲ್ಲಿಸಬೇಕಿದೆ ಎಂದೂ ಹೇಳಲಾಗಿದೆ.   ಹಾಗೇ ಕ್ಲಿನಿಕಲ್​ ಪ್ರಯೋಗ ಮಹಾರಾಷ್ಟ್ರದ ಎಂಟು ಪ್ರದೇಶಗಳಲ್ಲಿ ನಡೆಯಲಿದೆ.

ಸದ್ಯ ದೇಶದಲ್ಲಿ ಎರಡು ಸ್ವದೇಶಿ ಲಸಿಕೆಗಳನ್ನು ನೀಡಲಾಗುತ್ತಿದೆ. ಅದರಲ್ಲಿ ಸೆರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಮುಖ್ಯವಾಗಿ ನೀಡಲಾಗುತ್ತಿರುವ ಲಸಿಕೆ. ಅದು ಬಿಟ್ಟರೆ ರಷ್ಯಾದ ಸ್ಪುಟ್ನಿಕ್​ ವಿ, ಯುಎಸ್​​ನ ಮಾಡೆರ್ನಾ, ಜಾನ್ಸನ್​ ಆ್ಯಂಡ್ ಜಾನ್ಸನ್​ ಮತ್ತು ಜೈಡಸ್​ ಕ್ಯಾಡಿಲಾದ ಜೈಕೊವ್​-ಡಿ ಲಸಿಕೆಗಳಿಗೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಚಿರು ಫೋಟೋ ನೋಡಿದರೆ ಅಳು ನಿಲ್ಲಿಸ್ತಾನೆ ಮೇಘನಾ​ ಪುತ್ರ ರಾಯನ್​ ರಾಜ್​ ಸರ್ಜಾ

Published On - 10:28 am, Sat, 4 September 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ