AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​

Covid-19 Vaccine: ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​
ಕೊರೊನಾ ಲಸಿಕೆ
TV9 Web
| Edited By: |

Updated on:Sep 04, 2021 | 10:47 AM

Share

ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಔಷಧೀಯ ಸಂಸ್ಥೆಗಳು ಮುಂದಾಗಿದ್ದು, ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿವೆ. ಇದೀಗ ಇನ್ನೊಂದು ಲಸಿಕೆಯ 1ನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ಕೊಟ್ಟಿದೆ. ಈ ಲಸಿಕೆ ಕ್ಲಿನಿಕಲ್​ ಟ್ರಯಲ್​ನಲ್ಲಿ ಯಶಸ್ವಿಯಾದರೆ, ಭಾರತದಲ್ಲಿ ಇನ್ನೊಂದು ಸ್ವದೇಶಿ ಲಸಿಕೆ ಬಳಕೆಗೆ ಸಿಗಲಿದೆ.

ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಆರೋಗ್ಯವಂತ ಸ್ವಯಂಸೇವಕರ ಮೇಲೆ ಈ ರಿಲಯನ್ಸ್​ ಲೈಫ್​ ಸೈನ್ಸ್​ನ SARS-CoV-2 ಮರುಸಂಯೋಜಕ ಪ್ರೊಟೀನ್​​ ಉಪಘಟಕ ಲಸಿಕೆಯ ಪ್ರಯೋಗ ನಡೆಯಲಿದೆ. ಈ ಹಂತದಲ್ಲಿ ಲಸಿಕೆಯ ಸುರಕ್ಷತೆ, ಸಹಿಷ್ಣುತೆ ಮತ್ತು ಪ್ರತಿರೋಧಕ ಶಕ್ತಿಯನ್ನು ಮೌಲ್ಯಮಾಪನವನ್ನು ಶಿಷ್ಟಾಚಾರದ ಅನ್ವಯ ಮಾಡಲಾಗುವುದು ಎಂದು ರಿಲಯನ್ಸ್​ ಲೈಫ್​ ಸೈನ್ಸ್​ ಹೇಳಿದೆ.

ರಿಲಯನ್ಸ್​ ಲೈಫ್​ ಸೈನ್ಸ್​​ ಸಂಸ್ಥೆಯು ತನ್ನ ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಅನುಮೋದನೆ ಕೋರಿ ಆಗಸ್ಟ್​ 26ರಂದು ಡಿಸಿಜಿಐಗೆ ಅರ್ಜಿ ಸಲ್ಲಿಸಿತ್ತು. ಇದೀಗ ಡಿಸಿಜಿಐನ ವಿಷಯ ತಜ್ಞರ ಸಮಿತಿ (SEC-Special Expert Committee) ಶಿಫಾರಸ್ಸಿನ ಅನ್ವಯ ಲಸಿಕೆ ಮೊದಲ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಅನಿಮೋದನೆ ಸಿಕ್ಕಿದೆ. ಹಾಗೇ, ಸಂಸ್ಥೆಯು ಪರಿಷ್ಕೃತ ಕ್ಲಿನಿಕಲ್​ ಪ್ರಯೋಗದ ಪ್ರೊಟೊಕಾಲ್​​ನ್ನು 14 ದಿನದ ಬದಲಾಗಿ, 42ನೇ ದಿನಕ್ಕೆ ಸಲ್ಲಿಸಬೇಕಿದೆ ಎಂದೂ ಹೇಳಲಾಗಿದೆ.   ಹಾಗೇ ಕ್ಲಿನಿಕಲ್​ ಪ್ರಯೋಗ ಮಹಾರಾಷ್ಟ್ರದ ಎಂಟು ಪ್ರದೇಶಗಳಲ್ಲಿ ನಡೆಯಲಿದೆ.

ಸದ್ಯ ದೇಶದಲ್ಲಿ ಎರಡು ಸ್ವದೇಶಿ ಲಸಿಕೆಗಳನ್ನು ನೀಡಲಾಗುತ್ತಿದೆ. ಅದರಲ್ಲಿ ಸೆರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಮುಖ್ಯವಾಗಿ ನೀಡಲಾಗುತ್ತಿರುವ ಲಸಿಕೆ. ಅದು ಬಿಟ್ಟರೆ ರಷ್ಯಾದ ಸ್ಪುಟ್ನಿಕ್​ ವಿ, ಯುಎಸ್​​ನ ಮಾಡೆರ್ನಾ, ಜಾನ್ಸನ್​ ಆ್ಯಂಡ್ ಜಾನ್ಸನ್​ ಮತ್ತು ಜೈಡಸ್​ ಕ್ಯಾಡಿಲಾದ ಜೈಕೊವ್​-ಡಿ ಲಸಿಕೆಗಳಿಗೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಚಿರು ಫೋಟೋ ನೋಡಿದರೆ ಅಳು ನಿಲ್ಲಿಸ್ತಾನೆ ಮೇಘನಾ​ ಪುತ್ರ ರಾಯನ್​ ರಾಜ್​ ಸರ್ಜಾ

Published On - 10:28 am, Sat, 4 September 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್