AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​

Covid-19 Vaccine: ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ಇನ್ನೊಂದು ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಡಿಸಿಜಿಐ ಅನುಮತಿ; ಇದು ರಿಲಯನ್ಸ್ ಲೈಫ್​ ಸೈನ್ಸ್​ ಸಂಸ್ಥೆಯ ವ್ಯಾಕ್ಸಿನ್​
ಕೊರೊನಾ ಲಸಿಕೆ
TV9 Web
| Edited By: |

Updated on:Sep 04, 2021 | 10:47 AM

Share

ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಔಷಧೀಯ ಸಂಸ್ಥೆಗಳು ಮುಂದಾಗಿದ್ದು, ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿವೆ. ಇದೀಗ ಇನ್ನೊಂದು ಲಸಿಕೆಯ 1ನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮೋದನೆ ಕೊಟ್ಟಿದೆ. ಈ ಲಸಿಕೆ ಕ್ಲಿನಿಕಲ್​ ಟ್ರಯಲ್​ನಲ್ಲಿ ಯಶಸ್ವಿಯಾದರೆ, ಭಾರತದಲ್ಲಿ ಇನ್ನೊಂದು ಸ್ವದೇಶಿ ಲಸಿಕೆ ಬಳಕೆಗೆ ಸಿಗಲಿದೆ.

ರಿಲಯನ್ಸ್​ ಲೈಫ್​ ಸೈನ್ಸ್​ ಸಂಸ್ಥೆ ಅಭಿವೃದ್ಧಿ ಪಡಿಸಿದ ಕೊರೊನಾ ಲಸಿಕೆಯ ಮೊದಲನೇ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಶುಕ್ರವಾರ ಸಂಜೆ ಡಿಸಿಜಿಐ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಆರೋಗ್ಯವಂತ ಸ್ವಯಂಸೇವಕರ ಮೇಲೆ ಈ ರಿಲಯನ್ಸ್​ ಲೈಫ್​ ಸೈನ್ಸ್​ನ SARS-CoV-2 ಮರುಸಂಯೋಜಕ ಪ್ರೊಟೀನ್​​ ಉಪಘಟಕ ಲಸಿಕೆಯ ಪ್ರಯೋಗ ನಡೆಯಲಿದೆ. ಈ ಹಂತದಲ್ಲಿ ಲಸಿಕೆಯ ಸುರಕ್ಷತೆ, ಸಹಿಷ್ಣುತೆ ಮತ್ತು ಪ್ರತಿರೋಧಕ ಶಕ್ತಿಯನ್ನು ಮೌಲ್ಯಮಾಪನವನ್ನು ಶಿಷ್ಟಾಚಾರದ ಅನ್ವಯ ಮಾಡಲಾಗುವುದು ಎಂದು ರಿಲಯನ್ಸ್​ ಲೈಫ್​ ಸೈನ್ಸ್​ ಹೇಳಿದೆ.

ರಿಲಯನ್ಸ್​ ಲೈಫ್​ ಸೈನ್ಸ್​​ ಸಂಸ್ಥೆಯು ತನ್ನ ಸ್ವದೇಶಿ ಲಸಿಕೆ ಕ್ಲಿನಿಕಲ್​ ಟ್ರಯಲ್​ಗೆ ಅನುಮೋದನೆ ಕೋರಿ ಆಗಸ್ಟ್​ 26ರಂದು ಡಿಸಿಜಿಐಗೆ ಅರ್ಜಿ ಸಲ್ಲಿಸಿತ್ತು. ಇದೀಗ ಡಿಸಿಜಿಐನ ವಿಷಯ ತಜ್ಞರ ಸಮಿತಿ (SEC-Special Expert Committee) ಶಿಫಾರಸ್ಸಿನ ಅನ್ವಯ ಲಸಿಕೆ ಮೊದಲ ಹಂತದ ಕ್ಲಿನಿಕಲ್​ ಟ್ರಯಲ್​​ಗೆ ಅನಿಮೋದನೆ ಸಿಕ್ಕಿದೆ. ಹಾಗೇ, ಸಂಸ್ಥೆಯು ಪರಿಷ್ಕೃತ ಕ್ಲಿನಿಕಲ್​ ಪ್ರಯೋಗದ ಪ್ರೊಟೊಕಾಲ್​​ನ್ನು 14 ದಿನದ ಬದಲಾಗಿ, 42ನೇ ದಿನಕ್ಕೆ ಸಲ್ಲಿಸಬೇಕಿದೆ ಎಂದೂ ಹೇಳಲಾಗಿದೆ.   ಹಾಗೇ ಕ್ಲಿನಿಕಲ್​ ಪ್ರಯೋಗ ಮಹಾರಾಷ್ಟ್ರದ ಎಂಟು ಪ್ರದೇಶಗಳಲ್ಲಿ ನಡೆಯಲಿದೆ.

ಸದ್ಯ ದೇಶದಲ್ಲಿ ಎರಡು ಸ್ವದೇಶಿ ಲಸಿಕೆಗಳನ್ನು ನೀಡಲಾಗುತ್ತಿದೆ. ಅದರಲ್ಲಿ ಸೆರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಮುಖ್ಯವಾಗಿ ನೀಡಲಾಗುತ್ತಿರುವ ಲಸಿಕೆ. ಅದು ಬಿಟ್ಟರೆ ರಷ್ಯಾದ ಸ್ಪುಟ್ನಿಕ್​ ವಿ, ಯುಎಸ್​​ನ ಮಾಡೆರ್ನಾ, ಜಾನ್ಸನ್​ ಆ್ಯಂಡ್ ಜಾನ್ಸನ್​ ಮತ್ತು ಜೈಡಸ್​ ಕ್ಯಾಡಿಲಾದ ಜೈಕೊವ್​-ಡಿ ಲಸಿಕೆಗಳಿಗೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

ಚಿರು ಫೋಟೋ ನೋಡಿದರೆ ಅಳು ನಿಲ್ಲಿಸ್ತಾನೆ ಮೇಘನಾ​ ಪುತ್ರ ರಾಯನ್​ ರಾಜ್​ ಸರ್ಜಾ

Published On - 10:28 am, Sat, 4 September 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ