AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sputnik Vaccine: ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ

ಇದು ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದುಕೊಂಡ 9ನೇ ಲಸಿಕೆಯಾಗಿದೆ. ಈ ಲಸಿಕೆಯ ಬಳಕೆಗೆ ಅನುಮತಿ ಸಿಕ್ಕಿರುವುದು ಕೊರೊನಾ ಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

Sputnik Vaccine: ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ
ಸ್ಪುಟ್ನಿಕ್ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Feb 06, 2022 | 9:46 PM

Share

ದೆಹಲಿ: ರಷ್ಯಾ ರೂಪಿಸಿರುವ ಕೊರೊನಾ ನಿರೋಧಕ ಸಿಂಗಲ್ ಡೋಸ್ ಲಸಿಕೆ ಸ್ಪುಟ್ನಿಕ್​ನ (Sputnik) ತುರ್ತು ಬಳಕೆಗೆ ಭಾರತ ಔಷಧ ಮಹಾ ನಿಯಂತ್ರಕರ (Drugs Controller General of India – DCGI) ಅನುಮತಿ ಸಿಕ್ಕಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ.ಮನ್​ಸುಖ್ ಮಾಂಡವಿಯ (Dr Mansukh Mandaviya) ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದು ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದುಕೊಂಡ 9ನೇ ಲಸಿಕೆಯಾಗಿದೆ. ಈ ಲಸಿಕೆಯ ಬಳಕೆಗೆ ಅನುಮತಿ ಸಿಕ್ಕಿರುವುದು ಕೊರೊನಾ ಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಡಾಕ್ಟರ್ ರೆಡ್ಡೀಸ್ ಲ್ಯಾಬೊರೇಟರೀಸ್ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಬೂಸ್ಟರ್ ಆಗಿ ನೀಡಲು ಅನುಮತಿಸಬೇಕೆಂದು ಔಷಧ ನಿಯಂತ್ರಿಕರಿಗೆ ಪ್ರಸ್ತಾವ ಸಲ್ಲಿಸಿತ್ತು. ಲಸಿಕೆ ಉತ್ಪಾದನೆಗಾಗಿ ಡಾಕ್ಟರ್ ರೆಡ್ಡಿಸ್ ಕಂಪನಿಯು ರಷ್ಯಾದ ಸ್ಪುಟ್ನಿಕ್ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಸೆಪ್ಟೆಂಬರ್ 2020ರಿಂದ ರಷ್ಯಾದ ಅನುದಾನದೊಂದಿಗೆ ಸ್ಪುಟ್ನಿಕ್ ಲಸಿಕೆಯ ಟ್ರಯಲ್​ಗಳು ನಡೆಯುತ್ತಿದ್ದವು.

‘ಸ್ಪುಟ್ನಿಕ್ ಉತ್ಪಾದನೆಗೆ ಬೇಕಿರುವ ಎಲ್ಲ ಸಿದ್ಧತೆಗಳನ್ನು ನಾವು ಮಾಡಿಕೊಂಡಿದ್ದೇವೆ. ಭಾರತ ಸರ್ಕಾರ ಕೇಳಿರುವ ಎಲ್ಲ ಮಾಹಿತಿ ಒದಗಿಸಿದ್ದೇವೆ. ಕೊರೊನಾ ನಿರೋಧಕ ಲಸಿಕೆಯಾಗಿ ಸ್ಪುಟ್ನಿಕ್ ಲೈಟ್​ ಮತ್ತು ಬೂಸ್ಟರ್ ಲಸಿಕೆಯಾಗಿ ಸ್ಪುಟ್ನಿಕ್-V ನೀಡಲು ಅನುಮತಿ ಕೋರುತ್ತಿದ್ದೇವೆ’ ಎಂದು ಡಾಕ್ಟರ್ ರೆಡ್ಡಿಸ್ ಕಂಪನಿಯ ಸಿಇಒ ಎರೆಸ್ ಇಸ್ರೇಲಿ ಹೇಳಿದ್ದರು.

ಇತರ ಲಸಿಕೆಗಳನ್ನು ಈ ಮೊದಲು ಪಡೆದಿದ್ದವರಿಗೆ ಸ್ಪುಟ್ನಿಕ ಲಸಿಕೆಯನ್ನು ಬೂಸ್ಟರ್ ಆಗಿ ಕೊಡುವ ಸಾಧ್ಯತೆಯ ಬಗ್ಗೆ ಪರೀಕ್ಷೆ ನಡೆಸಲು ಡಾಕ್ಟರ್ ರೆಡ್ಡಿಸ್ ಅನುಮತಿ ಕೋರಿತ್ತು. ಭಾರತದಲ್ಲಿ ಉತ್ಪಾದನೆಯಾದ ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡಲು ಯಾವುದೇ ನಿರ್ಬಂಧಗಳು ಇಲ್ಲ. ರಫ್ತ ಸಾಧ್ಯತೆಯನ್ನೂ ಡಾಕ್ಟರ್ ರೆಡ್ಡಿಸ್ ಲ್ಯಾಬೊರೇಟರಿಸ್ ಮುಕ್ತವಾಗಿ ಪರಿಶೀಲಿಸುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ‘ಡೆಲ್ಟಾ ರೂಪಾಂತರಿ ವೈರಾಣು ವಿರುದ್ಧ ಸ್ಪುಟ್ನಿಕ್​ ವಿ ಲಸಿಕೆ ಶೇ.83ರಷ್ಟು ಪ್ರಭಾವಶಾಲಿ..‘

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು

Published On - 9:25 pm, Sun, 6 February 22

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು