Sputnik Vaccine: ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ

ಇದು ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದುಕೊಂಡ 9ನೇ ಲಸಿಕೆಯಾಗಿದೆ. ಈ ಲಸಿಕೆಯ ಬಳಕೆಗೆ ಅನುಮತಿ ಸಿಕ್ಕಿರುವುದು ಕೊರೊನಾ ಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

Sputnik Vaccine: ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಕೊವಿಡ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ
ಸ್ಪುಟ್ನಿಕ್ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
| Edited By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 06, 2022 | 9:46 PM

ದೆಹಲಿ: ರಷ್ಯಾ ರೂಪಿಸಿರುವ ಕೊರೊನಾ ನಿರೋಧಕ ಸಿಂಗಲ್ ಡೋಸ್ ಲಸಿಕೆ ಸ್ಪುಟ್ನಿಕ್​ನ (Sputnik) ತುರ್ತು ಬಳಕೆಗೆ ಭಾರತ ಔಷಧ ಮಹಾ ನಿಯಂತ್ರಕರ (Drugs Controller General of India – DCGI) ಅನುಮತಿ ಸಿಕ್ಕಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ.ಮನ್​ಸುಖ್ ಮಾಂಡವಿಯ (Dr Mansukh Mandaviya) ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದು ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದುಕೊಂಡ 9ನೇ ಲಸಿಕೆಯಾಗಿದೆ. ಈ ಲಸಿಕೆಯ ಬಳಕೆಗೆ ಅನುಮತಿ ಸಿಕ್ಕಿರುವುದು ಕೊರೊನಾ ಪಿಡುಗಿನ ವಿರುದ್ಧದ ಹೋರಾಟಕ್ಕೆ ಹೊಸ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಡಾಕ್ಟರ್ ರೆಡ್ಡೀಸ್ ಲ್ಯಾಬೊರೇಟರೀಸ್ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಬೂಸ್ಟರ್ ಆಗಿ ನೀಡಲು ಅನುಮತಿಸಬೇಕೆಂದು ಔಷಧ ನಿಯಂತ್ರಿಕರಿಗೆ ಪ್ರಸ್ತಾವ ಸಲ್ಲಿಸಿತ್ತು. ಲಸಿಕೆ ಉತ್ಪಾದನೆಗಾಗಿ ಡಾಕ್ಟರ್ ರೆಡ್ಡಿಸ್ ಕಂಪನಿಯು ರಷ್ಯಾದ ಸ್ಪುಟ್ನಿಕ್ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಸೆಪ್ಟೆಂಬರ್ 2020ರಿಂದ ರಷ್ಯಾದ ಅನುದಾನದೊಂದಿಗೆ ಸ್ಪುಟ್ನಿಕ್ ಲಸಿಕೆಯ ಟ್ರಯಲ್​ಗಳು ನಡೆಯುತ್ತಿದ್ದವು.

‘ಸ್ಪುಟ್ನಿಕ್ ಉತ್ಪಾದನೆಗೆ ಬೇಕಿರುವ ಎಲ್ಲ ಸಿದ್ಧತೆಗಳನ್ನು ನಾವು ಮಾಡಿಕೊಂಡಿದ್ದೇವೆ. ಭಾರತ ಸರ್ಕಾರ ಕೇಳಿರುವ ಎಲ್ಲ ಮಾಹಿತಿ ಒದಗಿಸಿದ್ದೇವೆ. ಕೊರೊನಾ ನಿರೋಧಕ ಲಸಿಕೆಯಾಗಿ ಸ್ಪುಟ್ನಿಕ್ ಲೈಟ್​ ಮತ್ತು ಬೂಸ್ಟರ್ ಲಸಿಕೆಯಾಗಿ ಸ್ಪುಟ್ನಿಕ್-V ನೀಡಲು ಅನುಮತಿ ಕೋರುತ್ತಿದ್ದೇವೆ’ ಎಂದು ಡಾಕ್ಟರ್ ರೆಡ್ಡಿಸ್ ಕಂಪನಿಯ ಸಿಇಒ ಎರೆಸ್ ಇಸ್ರೇಲಿ ಹೇಳಿದ್ದರು.

ಇತರ ಲಸಿಕೆಗಳನ್ನು ಈ ಮೊದಲು ಪಡೆದಿದ್ದವರಿಗೆ ಸ್ಪುಟ್ನಿಕ ಲಸಿಕೆಯನ್ನು ಬೂಸ್ಟರ್ ಆಗಿ ಕೊಡುವ ಸಾಧ್ಯತೆಯ ಬಗ್ಗೆ ಪರೀಕ್ಷೆ ನಡೆಸಲು ಡಾಕ್ಟರ್ ರೆಡ್ಡಿಸ್ ಅನುಮತಿ ಕೋರಿತ್ತು. ಭಾರತದಲ್ಲಿ ಉತ್ಪಾದನೆಯಾದ ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡಲು ಯಾವುದೇ ನಿರ್ಬಂಧಗಳು ಇಲ್ಲ. ರಫ್ತ ಸಾಧ್ಯತೆಯನ್ನೂ ಡಾಕ್ಟರ್ ರೆಡ್ಡಿಸ್ ಲ್ಯಾಬೊರೇಟರಿಸ್ ಮುಕ್ತವಾಗಿ ಪರಿಶೀಲಿಸುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ‘ಡೆಲ್ಟಾ ರೂಪಾಂತರಿ ವೈರಾಣು ವಿರುದ್ಧ ಸ್ಪುಟ್ನಿಕ್​ ವಿ ಲಸಿಕೆ ಶೇ.83ರಷ್ಟು ಪ್ರಭಾವಶಾಲಿ..‘

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು

Published On - 9:25 pm, Sun, 6 February 22

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ