AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ

ಎರಡೂ ಸಂಸ್ಥೆಗಳು ಅವುಗಳಿಗೆ ನೀಡಲಾದ ಮಾರ್ಗಸೂಚಿಯ ಪ್ರಕಾರವೇ ಕೊರೊನಾ ಲಸಿಕೆ ವಿತರಣೆ ಮಾಡಬೇಕಿದೆ. ಅಷ್ಟಕ್ಕೂ ಅವುಗಳಿಗೆ ನೀಡಲಾದ ಮಾರ್ಗಸೂಚಿಯಲ್ಲಿ ಏನೇನಿದೆ? ಯಾವೆಲ್ಲಾ ರೀತಿಯ ನಿಯಮಗಳನ್ನು ಪಾಲಿಸಬೇಕಿದೆ ಎನ್ನುವ ಕುರಿತಾದ ಸಂಕ್ಷಿಪ್ತ ವಿವರ ಇಲ್ಲಿದೆ..

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊವಿಶೀಲ್ಡ್​ ಲಸಿಕೆ.. DCGI ಮಾರ್ಗಸೂಚಿ
ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​
Skanda
|

Updated on:Jan 04, 2021 | 5:31 PM

Share

ಭಾರತೀಯ ಔಷಧ ನಿಯಂತ್ರಣಾ ಪ್ರಾಧಿಕಾರದ ಅಧ್ಯಕ್ಷ ವಿ.ಜಿ. ಸೋಮಾನಿ ಭಾರತದಲ್ಲಿ 2 ಸಂಸ್ಥೆಗಳ ಕೊರೊನಾ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ್ದಾರೆ. ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್​ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಜ. 3ರಂದು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಅದರ ಪ್ರಕಾರವಾಗಿ ಎರಡೂ ಸಂಸ್ಥೆಗಳು ಅವುಗಳಿಗೆ ನೀಡಲಾದ ಮಾರ್ಗಸೂಚಿಯ ಪ್ರಕಾರವೇ ಕೊರೊನಾ ಲಸಿಕೆ ವಿತರಣೆ ಮಾಡಬೇಕಿದೆ. ಅಷ್ಟಕ್ಕೂ ಅವುಗಳಿಗೆ ನೀಡಲಾದ ಮಾರ್ಗಸೂಚಿಯಲ್ಲಿ ಏನೇನಿದೆ? ಯಾವೆಲ್ಲಾ ರೀತಿಯ ನಿಯಮಗಳನ್ನು ಪಾಲಿಸಬೇಕಿದೆ ಎನ್ನುವ ಕುರಿತಾದ ಸಂಕ್ಷಿಪ್ತ ವಿವರ ಇಲ್ಲಿದೆ.

ಸೆರಮ್​ ಸಂಸ್ಥೆಗೆ ನೀಡಿರುವ ಮಾರ್ಗಸೂಚಿ: 1. 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕು.. 2. ಮೊದಲ ಡೋಸ್ ಲಸಿಕೆ ನೀಡಿದ 4-6 ವಾರದೊಳಗೆ 2ನೇ ಡೋಸ್ ಲಸಿಕೆ ನೀಡಬೇಕು. (ವಿದೇಶಗಳಲ್ಲಿ ಮೊದಲ ಡೋಸ್ ನೀಡಿದ 12 ವಾರದೊಳಗೆ ಎರಡನೇ ಡೋಸ್ ಲಸಿಕೆ ನೀಡುತ್ತಿದ್ದಾರೆ) 3. ಲಸಿಕೆ ಪಡೆಯುವವರಿಗೆ ಲಸಿಕೆಯ ಕುರಿತಾಗಿ ಮಾಹಿತಿ ಪತ್ರ ನೀಡಬೇಕು ಮತ್ತು ಲಸಿಕೆ ಪಡೆಯುವ ಮೊದಲು ಸಂಪೂರ್ಣ ಮಾಹಿತಿ ಕೊಡಬೇಕು. 4. ಸಂಸ್ಥೆಯು ಲಸಿಕೆಯ ಸುರಕ್ಷತೆ, ಪರಿಣಾಮ, ರೋಗನಿರೋಧಕ ಶಕ್ತಿ ವೃದ್ಧಿ ಬಗ್ಗೆ ಪ್ರಯೋಗದ ಮಾಹಿತಿಯನ್ನು ಎರಡು ತಿಂಗಳ ತನಕ ಪ್ರತಿ 15 ದಿನಕ್ಕೊಮ್ಮೆ ನೀಡಬೇಕು. 5. ಆದಾದ ಬಳಿಕ ವೈದ್ಯಕೀಯ ಪ್ರಯೋಗ ಮುಗಿಯುವವರೆಗೂ ಪ್ರತಿ ತಿಂಗಳು ಮಾಹಿತಿ ನೀಡಬೇಕು. 6. ಲಸಿಕೆಯನ್ನ 2-8 ಡಿಗ್ರಿ ಉಷ್ಣಾಂಶದಲ್ಲಿ ಆರು ತಿಂಗಳವರೆಗೆ ಸಂಗ್ರಹಿಸಿಡಬಹುದು. ಆದರೆ, ಫ್ರಿಡ್ಜ್ ನಿಂದ ತೆಗೆದ ಬಳಿಕ ಲಸಿಕೆಯನ್ನ 6 ಗಂಟೆಯೊಳಗೆ ಬಳಸಬೇಕು.

ಭಾರತ್ ಬಯೋಟೆಕ್​ ಸಂಸ್ಥೆಗೆ ನೀಡಿರುವ ಮಾರ್ಗಸೂಚಿ: 1. 12 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕು. 2. ಮೊದಲ ಡೋಸ್ ಲಸಿಕೆ ನೀಡಿದ 28 ದಿನದೊಳಗೆ ಎರಡನೇ ಡೋಸ್ ಲಸಿಕೆ ನೀಡಬೇಕು.

ಈ ಎರಡು ನಿಯಮಗಳ ಹೊರತಾಗಿ ಮಿಕ್ಕೆಲ್ಲವೂ ಎರಡೂ ಸಂಸ್ಥೆಗೆ ಏಕರೂಪದಲ್ಲಿದೆ.

ಅಮೆರಿಕಾದಲ್ಲಿ ಒಬ್ಬರಿಗೆ ಒಂದೇ ಇಂಜೆಕ್ಷನ್.. ಹೆಚ್ಚು ಜನರಿಗೆ ಲಸಿಕೆ ಹಂಚುವ ‘ದೊಡ್ಡ’ಣ್ಣನ ತಂತ್ರ

Published On - 5:25 pm, Mon, 4 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!