AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ರೇಸ್​ಗೆ ಮತ್ತೊಂದು ಸ್ವದೇಶಿ ಸಂಸ್ಥೆ ಎಂಟ್ರಿ: ಜೆನ್ನೋವಾ ವ್ಯಾಕ್ಸಿನ್​ನ ಮಾನವ ಪ್ರಯೋಗಕ್ಕೆ DCGI ಅಸ್ತು

ಪುಣೆ ಮೂಲದ ಔಷಧ ತಯಾರಿಕಾ ಸಂಸ್ಥೆ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಅಭಿವೃದ್ಧಿಪಡಿಸಿರುವ ಕೊವಿಡ್​ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (DCGI)  ಷರತ್ತುಬದ್ಧ ಅನುಮತಿ  ಸಿಕ್ಕಿದೆ.

ಕೊರೊನಾ ಲಸಿಕೆ ರೇಸ್​ಗೆ ಮತ್ತೊಂದು ಸ್ವದೇಶಿ ಸಂಸ್ಥೆ ಎಂಟ್ರಿ: ಜೆನ್ನೋವಾ ವ್ಯಾಕ್ಸಿನ್​ನ ಮಾನವ ಪ್ರಯೋಗಕ್ಕೆ DCGI ಅಸ್ತು
ಕೊವಿಡ್​ ಲಸಿಕೆಯ ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 10, 2020 | 12:41 PM

Share

ಮುಂಬೈ: ಪುಣೆ ಮೂಲದ ಔಷಧ ತಯಾರಿಕಾ ಸಂಸ್ಥೆ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಅಭಿವೃದ್ಧಿಪಡಿಸಿರುವ ಕೊವಿಡ್​ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (DCGI)  ಷರತ್ತುಬದ್ಧ ಅನುಮತಿ  ಸಿಕ್ಕಿದೆ. ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಮತ್ತು ಅಮೆರಿಕಾದ HDT ಸಂಸ್ಥೆಯ ಸಹಯೋಗದಲ್ಲಿ ದೇಶದಲ್ಲಿ ತಯಾರಾದ ಮೊದಲ mRNA ಲಸಿಕೆ ಇದಾಗಿದೆ ಎಂದು ತಿಳಿದುಬಂದಿದೆ.

ಮನುಷ್ಯರ ಮೇಲೆ ಪ್ರಯೋಗಿಸಲು ಅನುಮತಿ ಕೋರುವ ಮುನ್ನ ಜೆನ್ನೋವಾ ಸಂಸ್ಥೆಯು ಲಸಿಕೆಯ ಕುರಿತು ಪೂರಕ ಮಾಹಿತಿ ಮತ್ತು ಪ್ರಾಣಿಗಳ ಮೇಲೆ ಬೀರಿದ ಪರಿಣಾಮದ ಫಲಿತಾಂಶವನ್ನು ವಿವರವಾಗಿ ನೀಡಿತ್ತು. ಇದೀಗ, ಸಂಸ್ಥೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ 2ನೇ ಹಂತದ ಪ್ರಯೋಗಕ್ಕೂ ಮುನ್ನ ಮೊದಲ ಹಂತದ ಫಲಿತಾಂಶದ ವಿವರವನ್ನು ನೀಡಿ ಮುಂದುವರಿಯಲು  ಸಂಸ್ಥೆಗೆ ತಿಳಿಸಲಾಗಿದೆ ಎಂದು ತಜ್ಞರು ವಿವರಿಸಿದ್ದಾರೆ.

ಪ್ರಯೋಗದ ನಂತರ ಅಧಿಕೃತ ಅನುಮತಿ ಜೆನ್ನೋವಾ ಸಂಸ್ಥೆ ಸಂಶೋಧಿಸುತ್ತಿರುವ ಲಸಿಕೆಯ ಅಭಿವೃದ್ಧಿಗಾಗಿ ಜೈವಿಕ ತಂತ್ರಜ್ಞಾನ ಇಲಾಖೆಯಿಂದ ಬೆಂಬಲ ದೊರೆತಿದೆ. ಈ ಲಸಿಕೆಯು ವಿಶ್ವಾಸಾರ್ಹ ಎನಿಸಿದ್ದು 2 ಹಂತದ ಪ್ರಯೋಗಗಳನ್ನು ಪರಿಶೀಲಿಸಿ ಅಧಿಕೃತವಾಗಿ ಅನುಮತಿ ನೀಡಲಾಗುವುದು ಎಂದು DCGI ತಜ್ಞರು ಹೇಳಿದ್ದಾರೆ.

ಈ ನಡುವೆ, ನಿನ್ನೆ ಭಾರತ್​ ಬಯೋಟೆಕ್​ ಮತ್ತು ಸೆರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಲಸಿಕಾ ತಯಾರಿಕಾ​ ಸಂಸ್ಥೆಗಳು ಕೊರೊನಾ ಲಸಿಕೆಯ ತುರ್ತು ಅನುಮತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ತಡೆಹಿಡಿಯಲಾಗಿದೆ. ಹೆಚ್ಚಿನ ವಿವರ ಮತ್ತು ಲಸಿಕೆಯಿಂದ ಉಂಟಾಗುವ ಪರಿಣಾಮದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಎರಡೂ ಸಂಸ್ಥೆಗಳಿಗೆ ತಿಳಿಸಲಾಗಿದೆ.

ಭಾರತ್ ಬಯೋಟೆಕ್, ಸೆರಮ್ ಇನ್​ಸ್ಟಿಟ್ಯೂಟ್ ಲಸಿಕೆಗೆ ಅನುಮತಿ ಇಲ್ಲ ಎಂಬ ಸುದ್ದಿ ನಿಜವೇ?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ