AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ರೇಸ್​ಗೆ ಮತ್ತೊಂದು ಸ್ವದೇಶಿ ಸಂಸ್ಥೆ ಎಂಟ್ರಿ: ಜೆನ್ನೋವಾ ವ್ಯಾಕ್ಸಿನ್​ನ ಮಾನವ ಪ್ರಯೋಗಕ್ಕೆ DCGI ಅಸ್ತು

ಪುಣೆ ಮೂಲದ ಔಷಧ ತಯಾರಿಕಾ ಸಂಸ್ಥೆ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಅಭಿವೃದ್ಧಿಪಡಿಸಿರುವ ಕೊವಿಡ್​ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (DCGI)  ಷರತ್ತುಬದ್ಧ ಅನುಮತಿ  ಸಿಕ್ಕಿದೆ.

ಕೊರೊನಾ ಲಸಿಕೆ ರೇಸ್​ಗೆ ಮತ್ತೊಂದು ಸ್ವದೇಶಿ ಸಂಸ್ಥೆ ಎಂಟ್ರಿ: ಜೆನ್ನೋವಾ ವ್ಯಾಕ್ಸಿನ್​ನ ಮಾನವ ಪ್ರಯೋಗಕ್ಕೆ DCGI ಅಸ್ತು
ಕೊವಿಡ್​ ಲಸಿಕೆಯ ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 10, 2020 | 12:41 PM

Share

ಮುಂಬೈ: ಪುಣೆ ಮೂಲದ ಔಷಧ ತಯಾರಿಕಾ ಸಂಸ್ಥೆ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಅಭಿವೃದ್ಧಿಪಡಿಸಿರುವ ಕೊವಿಡ್​ ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನದಿಂದ (DCGI)  ಷರತ್ತುಬದ್ಧ ಅನುಮತಿ  ಸಿಕ್ಕಿದೆ. ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್​ ಮತ್ತು ಅಮೆರಿಕಾದ HDT ಸಂಸ್ಥೆಯ ಸಹಯೋಗದಲ್ಲಿ ದೇಶದಲ್ಲಿ ತಯಾರಾದ ಮೊದಲ mRNA ಲಸಿಕೆ ಇದಾಗಿದೆ ಎಂದು ತಿಳಿದುಬಂದಿದೆ.

ಮನುಷ್ಯರ ಮೇಲೆ ಪ್ರಯೋಗಿಸಲು ಅನುಮತಿ ಕೋರುವ ಮುನ್ನ ಜೆನ್ನೋವಾ ಸಂಸ್ಥೆಯು ಲಸಿಕೆಯ ಕುರಿತು ಪೂರಕ ಮಾಹಿತಿ ಮತ್ತು ಪ್ರಾಣಿಗಳ ಮೇಲೆ ಬೀರಿದ ಪರಿಣಾಮದ ಫಲಿತಾಂಶವನ್ನು ವಿವರವಾಗಿ ನೀಡಿತ್ತು. ಇದೀಗ, ಸಂಸ್ಥೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ 2ನೇ ಹಂತದ ಪ್ರಯೋಗಕ್ಕೂ ಮುನ್ನ ಮೊದಲ ಹಂತದ ಫಲಿತಾಂಶದ ವಿವರವನ್ನು ನೀಡಿ ಮುಂದುವರಿಯಲು  ಸಂಸ್ಥೆಗೆ ತಿಳಿಸಲಾಗಿದೆ ಎಂದು ತಜ್ಞರು ವಿವರಿಸಿದ್ದಾರೆ.

ಪ್ರಯೋಗದ ನಂತರ ಅಧಿಕೃತ ಅನುಮತಿ ಜೆನ್ನೋವಾ ಸಂಸ್ಥೆ ಸಂಶೋಧಿಸುತ್ತಿರುವ ಲಸಿಕೆಯ ಅಭಿವೃದ್ಧಿಗಾಗಿ ಜೈವಿಕ ತಂತ್ರಜ್ಞಾನ ಇಲಾಖೆಯಿಂದ ಬೆಂಬಲ ದೊರೆತಿದೆ. ಈ ಲಸಿಕೆಯು ವಿಶ್ವಾಸಾರ್ಹ ಎನಿಸಿದ್ದು 2 ಹಂತದ ಪ್ರಯೋಗಗಳನ್ನು ಪರಿಶೀಲಿಸಿ ಅಧಿಕೃತವಾಗಿ ಅನುಮತಿ ನೀಡಲಾಗುವುದು ಎಂದು DCGI ತಜ್ಞರು ಹೇಳಿದ್ದಾರೆ.

ಈ ನಡುವೆ, ನಿನ್ನೆ ಭಾರತ್​ ಬಯೋಟೆಕ್​ ಮತ್ತು ಸೆರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಲಸಿಕಾ ತಯಾರಿಕಾ​ ಸಂಸ್ಥೆಗಳು ಕೊರೊನಾ ಲಸಿಕೆಯ ತುರ್ತು ಅನುಮತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ತಡೆಹಿಡಿಯಲಾಗಿದೆ. ಹೆಚ್ಚಿನ ವಿವರ ಮತ್ತು ಲಸಿಕೆಯಿಂದ ಉಂಟಾಗುವ ಪರಿಣಾಮದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಎರಡೂ ಸಂಸ್ಥೆಗಳಿಗೆ ತಿಳಿಸಲಾಗಿದೆ.

ಭಾರತ್ ಬಯೋಟೆಕ್, ಸೆರಮ್ ಇನ್​ಸ್ಟಿಟ್ಯೂಟ್ ಲಸಿಕೆಗೆ ಅನುಮತಿ ಇಲ್ಲ ಎಂಬ ಸುದ್ದಿ ನಿಜವೇ?

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ