AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ

Mizoram CM Zoramthanga: "ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ" ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ
ಮಿಜೊರಾಂ ಹೌಸ್ ಮುಂದೆ ಬಿಗಿಭದ್ರತೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 02, 2021 | 11:18 PM

Share

ಗುವಾಹಟಿ: ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿದ್ದು ಮಿಜೋರಾಂ ಮುಖ್ಯಮಂತ್ರಿ ಜೊರಮ್ತಂಗಾ ಅವರು ಜುಲೈ 26 ಘರ್ಷಣೆಗೆ ಸಂಬಂಧಿಸಿದಂತೆ ಅಸ್ಸಾಂ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆಯ ನಂತರ ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇಬ್ಬರೂ ಮುಖ್ಯಮಂತ್ರಿಗಳು ಪ್ರಯತ್ನಿಸಿದ ಒಂದು ದಿನದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾನುವಾರ ಮಿಜೋರಾಂ ಸರ್ಕಾರವು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೆಸರನ್ನು ಜುಲೈ 26 ರಂದು ಎಫ್‌ಐಆರ್‌ನಿಂದ ಕೈಬಿಡುವುದಾಗಿ ಹೇಳಿತ್ತು. ಅದರ ನಂತರ ಮಿಜೋರಾಂನ ರಾಜ್ಯಸಭಾ ಸಂಸದ ಕೆ ವನ್​​ಲಾಲ್ವೇನಾ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾಗಿ ಶರ್ಮಾ ಘೋಷಿಸಿದರು. ಮಾಧ್ಯಮ ಸಂದರ್ಶನಕ್ಕೆ ಸಂಬಂಧಿಸಿದಂತೆ ವನ್​​ಲಾಲ್ವೇನಾ ವಿರುದ್ಧ ಪ್ರಕರಣ ದಾಖಲಾಗಿತ್ತು.

“ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ” ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಸೋಮವಾರ ಸಂಜೆ ಟ್ವೀಟ್ ಮಾಡಿದ ಅವರು ಮಿಜೋರಾಂ- ಅಸ್ಸಾಂ ಗಡಿ ವಿವಾದಕ್ಕೆ ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸಲು ಮತ್ತು ನಾಗರಿಕರ ಸಂಕಷ್ಟವನ್ನು ಕಡಿಮೆ ಮಾಡಲು, ನಾನು 26.07.2021ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ ವೈರೆಂಗ್ಟೆಯಲ್ಲಿ ದಾಖಲಾಗಿರುವ ಎಲ್ಲಾ ಆರೋಪಿಗಳ ವಿರುದ್ಧದ ಎಫ್ಐಆರ್ ಹಿಂಪಡೆಯುವಂತೆ ಮಿಜೋರಾಂ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಮಿಜೊರಾಂ ಅಧಿಕಾರಿಗಳ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮೂಲಕ ಜೊರಮ್ತಂಗಾ ಅವರ “ಧನಾತ್ಮಕ ಗೌರವಕ್ಕೆ ಮನ್ನಣೆ ನೀಡುವುದಾಗಿ ಹೇಳಿದ್ದಾರೆ.

ಕಳೆದ ಸೋಮವಾರ ಗಡಿ ಘರ್ಷಣೆಯಲ್ಲಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರಿಂದ, ಬಿಕ್ಕಟ್ಟು ಉಂಟಾಗಿತ್ತು. ಎರಡೂ ರಾಜ್ಯಗಳು ಸಿಎಪಿಎಫ್ ಜೊತೆಗೆ ಗಡಿಯಲ್ಲಿ ತಮ್ಮ ಪಡೆಗಳನ್ನು ನಿಯೋಜಿಸಿವೆ. ಯಾವುದೇ ರಾಜ್ಯವು ಹಿಂದೆ ಸರಿಯಲು ಸಿದ್ಧವಿರಲಿಲ್ಲ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳು ಆಯಾ ಪೊಲೀಸ್ ಠಾಣೆಗಳಲ್ಲಿ (ಅಸ್ಸಾಂನ ಧೋಲೈ ಮತ್ತು ಮಿಜೋರಾಂನ ವೈರೆಂಗ್ಟೆ) ಪರಸ್ಪರ ಆರೋಪಗಳನ್ನು ಸಲ್ಲಿಸಿವೆ. ಸೋಮವಾರದ ಹೊತ್ತಿಗೆ, ಮಿಜೋರಾಂ ಎಲ್ಲಾ ಆರೋಪಗಳನ್ನು ಕೈಬಿಟ್ಟರೆ, ಮಿಜೋರಾಂನ ವೈರೆಂಗ್ಟೆ ಜಿಲ್ಲೆಯ ಆರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಸ್ಸಾಂ ಸರ್ಕಾರದ ಪ್ರಕರಣ ಇನ್ನೂ ಉಳಿದಿದೆ.

ಇದನ್ನೂ ಓದಿ:  ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?