AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ

Mizoram CM Zoramthanga: "ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ" ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ
ಮಿಜೊರಾಂ ಹೌಸ್ ಮುಂದೆ ಬಿಗಿಭದ್ರತೆ
TV9 Web
| Edited By: |

Updated on: Aug 02, 2021 | 11:18 PM

Share

ಗುವಾಹಟಿ: ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿದ್ದು ಮಿಜೋರಾಂ ಮುಖ್ಯಮಂತ್ರಿ ಜೊರಮ್ತಂಗಾ ಅವರು ಜುಲೈ 26 ಘರ್ಷಣೆಗೆ ಸಂಬಂಧಿಸಿದಂತೆ ಅಸ್ಸಾಂ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆಯ ನಂತರ ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇಬ್ಬರೂ ಮುಖ್ಯಮಂತ್ರಿಗಳು ಪ್ರಯತ್ನಿಸಿದ ಒಂದು ದಿನದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾನುವಾರ ಮಿಜೋರಾಂ ಸರ್ಕಾರವು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೆಸರನ್ನು ಜುಲೈ 26 ರಂದು ಎಫ್‌ಐಆರ್‌ನಿಂದ ಕೈಬಿಡುವುದಾಗಿ ಹೇಳಿತ್ತು. ಅದರ ನಂತರ ಮಿಜೋರಾಂನ ರಾಜ್ಯಸಭಾ ಸಂಸದ ಕೆ ವನ್​​ಲಾಲ್ವೇನಾ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾಗಿ ಶರ್ಮಾ ಘೋಷಿಸಿದರು. ಮಾಧ್ಯಮ ಸಂದರ್ಶನಕ್ಕೆ ಸಂಬಂಧಿಸಿದಂತೆ ವನ್​​ಲಾಲ್ವೇನಾ ವಿರುದ್ಧ ಪ್ರಕರಣ ದಾಖಲಾಗಿತ್ತು.

“ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ” ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಸೋಮವಾರ ಸಂಜೆ ಟ್ವೀಟ್ ಮಾಡಿದ ಅವರು ಮಿಜೋರಾಂ- ಅಸ್ಸಾಂ ಗಡಿ ವಿವಾದಕ್ಕೆ ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸಲು ಮತ್ತು ನಾಗರಿಕರ ಸಂಕಷ್ಟವನ್ನು ಕಡಿಮೆ ಮಾಡಲು, ನಾನು 26.07.2021ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ ವೈರೆಂಗ್ಟೆಯಲ್ಲಿ ದಾಖಲಾಗಿರುವ ಎಲ್ಲಾ ಆರೋಪಿಗಳ ವಿರುದ್ಧದ ಎಫ್ಐಆರ್ ಹಿಂಪಡೆಯುವಂತೆ ಮಿಜೋರಾಂ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಮಿಜೊರಾಂ ಅಧಿಕಾರಿಗಳ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮೂಲಕ ಜೊರಮ್ತಂಗಾ ಅವರ “ಧನಾತ್ಮಕ ಗೌರವಕ್ಕೆ ಮನ್ನಣೆ ನೀಡುವುದಾಗಿ ಹೇಳಿದ್ದಾರೆ.

ಕಳೆದ ಸೋಮವಾರ ಗಡಿ ಘರ್ಷಣೆಯಲ್ಲಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರಿಂದ, ಬಿಕ್ಕಟ್ಟು ಉಂಟಾಗಿತ್ತು. ಎರಡೂ ರಾಜ್ಯಗಳು ಸಿಎಪಿಎಫ್ ಜೊತೆಗೆ ಗಡಿಯಲ್ಲಿ ತಮ್ಮ ಪಡೆಗಳನ್ನು ನಿಯೋಜಿಸಿವೆ. ಯಾವುದೇ ರಾಜ್ಯವು ಹಿಂದೆ ಸರಿಯಲು ಸಿದ್ಧವಿರಲಿಲ್ಲ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳು ಆಯಾ ಪೊಲೀಸ್ ಠಾಣೆಗಳಲ್ಲಿ (ಅಸ್ಸಾಂನ ಧೋಲೈ ಮತ್ತು ಮಿಜೋರಾಂನ ವೈರೆಂಗ್ಟೆ) ಪರಸ್ಪರ ಆರೋಪಗಳನ್ನು ಸಲ್ಲಿಸಿವೆ. ಸೋಮವಾರದ ಹೊತ್ತಿಗೆ, ಮಿಜೋರಾಂ ಎಲ್ಲಾ ಆರೋಪಗಳನ್ನು ಕೈಬಿಟ್ಟರೆ, ಮಿಜೋರಾಂನ ವೈರೆಂಗ್ಟೆ ಜಿಲ್ಲೆಯ ಆರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಸ್ಸಾಂ ಸರ್ಕಾರದ ಪ್ರಕರಣ ಇನ್ನೂ ಉಳಿದಿದೆ.

ಇದನ್ನೂ ಓದಿ:  ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?