AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆ; ಕೊವಿಡ್ ಸೋಂಕಿನಿಂದ ಮೃತಪಟ್ಟ ಶಂಕೆ

ಬಿಹಾರದ ಈ ಭಾಗದಲ್ಲಿ ಮೃತದೇಹಗಳನ್ನು ನದಿಗೆ ಎಸೆಯುವ ಪದ್ಧತಿ ಇಲ್ಲ. ಹೀಗಾಗಿ ಈ ಮೃತದೇಹಗಳು ಉತ್ತರ ಪ್ರದೇಶದಿಂದಲೆ ಬಂದಿವೆ. ಆದರೆ ಉತ್ತರ ಪ್ರದೇಶದ ಯಾವ ಭಾಗದಿಂದ ತೇಲಿಬಂದಿವೆ ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ಧಾರೆ.

ಗಂಗಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆ; ಕೊವಿಡ್ ಸೋಂಕಿನಿಂದ ಮೃತಪಟ್ಟ ಶಂಕೆ
ಸಾಂಕೇತಿಕ ಚಿತ್ರ
guruganesh bhat
|

Updated on: May 10, 2021 | 9:30 PM

Share

ಪಾಟ್ನಾ: ಬಿಹಾರದ ಬಕ್ಸರ್ ನಗರದ ಬಳಿಯ ಗಂಗಾ ನದಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೊಳೆತ ಮತ್ತು ಉಬ್ಬಿದ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆಯಾಗಿವೆ. ಕೊವಿಡ್​ನಿಂದ ಮೃತಪಟ್ಟವರ ದೇಹವನ್ನು ಅಂತ್ಯಸಂಸ್ಕಾರ ನಡೆಸದೇ ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ನೆರೆ ರಾಜ್ಯ ಉತ್ತರ ಪ್ರದೇಶದಿಂದ ಕೊವಿಡ್​ನಿಂದ ಮೃತಪಟ್ಟವರ ಮೃತದೇಹಗಳನ್ನು ತೇಲಿಬಿಡಲಾಗಿದೆ ಎಂದು ಸ್ಥಳಿಯ ಆಡಳಿತ ಅಭಿಪ್ರಾಯಪಟ್ಟಿದೆ.

ಸುಮಾರು 40ರಿಂದ 45 ಮೃತದೇಹಗಳು ನದಿಯಲ್ಲಿ ತೇಲುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಚೌಸಾ ಜಿಲ್ಲಾಡಳಿತದ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇನ್ನು ಕೆಲವರ ಪ್ರಕಾರ ನೂರಕ್ಕೆ ಹೆಚ್ಚು ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿವೆ. ಯಾರೋ ದುಷ್ಕರ್ಮಿಗಳು ಈ ಮೃತದೇಹಗಳನ್ನು ನದಿಗೆ ಎಸೆದಿರುವ ಶಂಕೆಯಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಮೃತದೇಹವೊಂದಕ್ಕೆ ತಲಾ ₹ 500 ನೀಡಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದ್ದು ಸುಮಾರು ಐದರಿಂದ ಏಳು ದಿನಗಳಿಂದಲೂ ಮೃತದೇಹಗಳು ನೀರಿನಲ್ಲಿರುವ ಶಂಕೆ ವ್ಯಕ್ತವಾಗಿದೆ.

ಬಿಹಾರದ ಈ ಭಾಗದಲ್ಲಿ ಮೃತದೇಹಗಳನ್ನು ನದಿಗೆ ಎಸೆಯುವ ಪದ್ಧತಿ ಇಲ್ಲ. ಹೀಗಾಗಿ ಈ ಮೃತದೇಹಗಳು ಉತ್ತರ ಪ್ರದೇಶದಿಂದಲೆ ಬಂದಿವೆ. ಆದರೆ ಉತ್ತರ ಪ್ರದೇಶದ ಯಾವ ಭಾಗದಿಂದ ತೇಲಿಬಂದಿವೆ ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಎನ್​ಡಿಟಿವಿಗೆ ಸ್ಥಳೀಯ ಆಡಳಿತದ ಅಧಿಕಾರಿಯೋರ್ವರು ತಿಳಿಸಿದ್ದಾರೆ. ವಾರಣಾಸಿ, ಅಲಹಾಬಾದ್ ಅಥವಾ ಬಹ್ರೇಚ್​ ಭಾಗಗಳಿಂದ ಈ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಹಲವರು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: 16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ 

ಸಮಾಜದಲ್ಲಿನ ದುರ್ಬಲ ವಿಭಾಗದವರ ಮನೆ ಬಾಗಿಲಿಗೆ ತೆರಳಿ ಕೊವಿಡ್ ಲಸಿಕೆ ನೀಡಲು ನಿರ್ದೇಶಿಸಿ: ಸುಪ್ರೀಂಕೋರ್ಟ್​ಗೆ ವೈಬಿಎಐ ಮನವಿ (Dead bodies are found in Ganga river near Bihar)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!