AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ
ರಾಕೇಶ್​Image Credit source: DNA
ನಯನಾ ರಾಜೀವ್
|

Updated on: Sep 24, 2024 | 2:58 PM

Share

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ.

ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು ಕಂಡಿತ್ತು, ದೇಹದ ಚಲನೆ ಇರಲಿಲ್ಲ. ಅವರಿಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿತ್ತು ಎಂದು ನಗರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಯಾಸ್ ಪ್ರಸಾದ್ ಹೇಳಿದರು.

ನಾಡಿ ಮಿಡಿತವನ್ನೂ ನೋಡದೆ ವೈದ್ಯರು ಆತ ಸತ್ತಿದ್ದಾನೆಂದು ಘೋಷಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ಆ ಸಮಯದಲ್ಲಿ ಆತ ಎಚ್ಚರಗೊಂಡಿದ್ದು, ಬಳಿಕ ವಿಚಾರಣೆಗೆಂದು ಕರೆದೊಯ್ದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾತ್​ ರೂಂ ಕ್ಲೀನ್ ಮಾಡಲು ಹೋದಾಗ ಈ ವ್ಯಕ್ತಿ ಕ್ಲೀನರ್​ಗೆ ಸಿಕ್ಕಿದ್ದರು, ನಾನು ಔಷಧಿ ಖರೀದಿಸಲು ಹೋಗಿದ್ದೆ, ಏನೂ ತಿಂದಿರಲಿಲ್ಲ ಹಾಗಾಗಿ ತಲೆತಿರುಗಿ ಬಿದ್ದಿದ್ದೆ ಎಂದು ರಾಕೇಶ್​ ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಆಸ್ಪತ್ರೆಗೂ ಕಾಲಿಟ್ಟ ರೀಲ್ಸ್‌ ವೈರಸ್, ಕಫ್ತಾನ್ ತೊಟ್ಟು ರೋಗಿಗಳ ಮುಂದೆ ಸೊಂಟ ಬಳುಕಿಸಿದ ಯುವತಿ

ರಾಕೇಶ್ ಕುಮಾರ್ ಜೆರೋಯಿನ್ ಗ್ರಾಮದ ನಿವಾಸಿ. ಘಟನೆ ನಡೆದ ಬಳಿಕ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಸ್ಟ್ರೆಚರ್​ನಲ್ಲಿ ಕುಳಿತು ನಾನು ಸತ್ತಿಲ್ಲಪ್ಪ ಬದುಕಿದ್ದೇನೆ ಎಂದು ಹೇಳಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು