AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ

ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಧರಣಿ ಕೃಷಿ ಕಾಯ್ದೆಗಳ ವಿರುದ್ಧ ಯಾವುದೇ ನ್ಯಾಯಾಲಯದಲ್ಲಿ ವಾದಿಸಲು ಸಹ ಸಿದ್ಧ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ಜಂಟಿ ಕಾರ್ಯದರ್ಶಿ ಹನ್ನನ್ ಮೊಲ್ಲಾಹ್ ತಿಳಿಸಿದ್ದಾರೆ.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on:Jan 08, 2021 | 5:56 PM

ದೆಹಲಿ: ರೈತ ಮುಖಂಡರ ಜೊತೆಗಿನ ಕೇಂದ್ರ ಸರ್ಕಾರದ 8ನೇ ಸಭೆಯೂ ವಿಫಲಗೊಂಡಿದ್ದು, ಜನವರಿ 15ರಂದು ಇನ್ನೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.

ದೆಹಲಿ ಚಲೋ ಚಳುವಳಿಯ 44ನೇ ದಿನ ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ಎರಡು ತಾಸಿಗೂ ಹೆಚ್ಚು ಕಾಲ ಸಭೆ ನಡೆಯಿತು. ಮಧ್ಯಾಹ್ನ ಎರಡು ಘಂಟೆಯ ಹೊತ್ತಿಗೆ ಸಭೆಗೆ ಆಗಮಿಸಿದ ರೈತ ಪ್ರತಿನಿಧಿಗಳು ವಿಜ್ಞಾನ ಭವನದ ಹೊರಗೆ ಸ್ವತಃ ತಾವೇ ತಂದಿದ್ದ ಆಹಾರವನ್ನು ಸೇವಿಸಿದರು.

ಪಟ್ಟು ಬಿಡದ ರೈತರು ಸಭೆಯುದ್ದಕ್ಕೂ ಬಿರುಸಿನ ಚರ್ಚೆ ನಡೆಯಿತು. ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ನ್ಯಾಯಾಲಯದಲ್ಲಿ ವಾದಿಸಲು ಸಹ ಸಿದ್ಧ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ಜಂಟಿ ಕಾರ್ಯದರ್ಶಿ ಹನ್ನನ್ ಮೊಲ್ಲಾಹ್ ತಿಳಿಸಿದರು. ಅಲ್ಲದೇ, ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪರೇಡ್ ಸಹ ನಡೆಸುತ್ತೇವೆ ಎಂದು ಸಭೆಯಲ್ಲಿ ಘೋಷಿಸಿದರು.

ರೈತರು ಕೃಷಿ ಕಾಯ್ದೆ ಬಿಟ್ಟು ಬೇರೆ ಆಯ್ಕೆ ನೀಡಿಲ್ಲ ಕೃಷಿ ಕಾಯ್ದೆ ರದ್ದತಿ ಬಿಟ್ಟು ಇನ್ಯಾವುದೇ ಆಯ್ಕೆ ನೀಡಿದರೂ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ರೈತರು ಕೃಷಿ ಕಾಯ್ದೆ ರದ್ದುಗೊಳಿಸುವುದನ್ನು ಬಿಟ್ಟು ಬೇರಾವ ಆಯ್ಕೆಯನ್ನು ನೀಡಿಲ್ಲ. ಹೀಗಾಗಿ ಇಂದಿನ ಸಭೆ ವಿಫಲಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ಹೇಳಿದ್ದಾರೆ.

Delhi Chalo ವಿಶ್ಲೇಷಣೆ | ಇದು ಈ ಕಾಲದ ಚಳವಳಿ; ಬೀದಿಗೂ ಸೈ, ಸೋಷಿಯಲ್ ಮೀಡಿಯಾಗೂ ಜೈ ಎಂದ ಪಂಜಾಬ್ ಯುವಜನರು

Published On - 5:52 pm, Fri, 8 January 21

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ