AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ

ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಧರಣಿ ಕೃಷಿ ಕಾಯ್ದೆಗಳ ವಿರುದ್ಧ ಯಾವುದೇ ನ್ಯಾಯಾಲಯದಲ್ಲಿ ವಾದಿಸಲು ಸಹ ಸಿದ್ಧ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ಜಂಟಿ ಕಾರ್ಯದರ್ಶಿ ಹನ್ನನ್ ಮೊಲ್ಲಾಹ್ ತಿಳಿಸಿದ್ದಾರೆ.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
guruganesh bhat
|

Updated on:Jan 08, 2021 | 5:56 PM

Share

ದೆಹಲಿ: ರೈತ ಮುಖಂಡರ ಜೊತೆಗಿನ ಕೇಂದ್ರ ಸರ್ಕಾರದ 8ನೇ ಸಭೆಯೂ ವಿಫಲಗೊಂಡಿದ್ದು, ಜನವರಿ 15ರಂದು ಇನ್ನೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.

ದೆಹಲಿ ಚಲೋ ಚಳುವಳಿಯ 44ನೇ ದಿನ ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ಎರಡು ತಾಸಿಗೂ ಹೆಚ್ಚು ಕಾಲ ಸಭೆ ನಡೆಯಿತು. ಮಧ್ಯಾಹ್ನ ಎರಡು ಘಂಟೆಯ ಹೊತ್ತಿಗೆ ಸಭೆಗೆ ಆಗಮಿಸಿದ ರೈತ ಪ್ರತಿನಿಧಿಗಳು ವಿಜ್ಞಾನ ಭವನದ ಹೊರಗೆ ಸ್ವತಃ ತಾವೇ ತಂದಿದ್ದ ಆಹಾರವನ್ನು ಸೇವಿಸಿದರು.

ಪಟ್ಟು ಬಿಡದ ರೈತರು ಸಭೆಯುದ್ದಕ್ಕೂ ಬಿರುಸಿನ ಚರ್ಚೆ ನಡೆಯಿತು. ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ನ್ಯಾಯಾಲಯದಲ್ಲಿ ವಾದಿಸಲು ಸಹ ಸಿದ್ಧ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ಜಂಟಿ ಕಾರ್ಯದರ್ಶಿ ಹನ್ನನ್ ಮೊಲ್ಲಾಹ್ ತಿಳಿಸಿದರು. ಅಲ್ಲದೇ, ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪರೇಡ್ ಸಹ ನಡೆಸುತ್ತೇವೆ ಎಂದು ಸಭೆಯಲ್ಲಿ ಘೋಷಿಸಿದರು.

ರೈತರು ಕೃಷಿ ಕಾಯ್ದೆ ಬಿಟ್ಟು ಬೇರೆ ಆಯ್ಕೆ ನೀಡಿಲ್ಲ ಕೃಷಿ ಕಾಯ್ದೆ ರದ್ದತಿ ಬಿಟ್ಟು ಇನ್ಯಾವುದೇ ಆಯ್ಕೆ ನೀಡಿದರೂ ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ರೈತರು ಕೃಷಿ ಕಾಯ್ದೆ ರದ್ದುಗೊಳಿಸುವುದನ್ನು ಬಿಟ್ಟು ಬೇರಾವ ಆಯ್ಕೆಯನ್ನು ನೀಡಿಲ್ಲ. ಹೀಗಾಗಿ ಇಂದಿನ ಸಭೆ ವಿಫಲಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯ ನಂತರ ಹೇಳಿದ್ದಾರೆ.

Delhi Chalo ವಿಶ್ಲೇಷಣೆ | ಇದು ಈ ಕಾಲದ ಚಳವಳಿ; ಬೀದಿಗೂ ಸೈ, ಸೋಷಿಯಲ್ ಮೀಡಿಯಾಗೂ ಜೈ ಎಂದ ಪಂಜಾಬ್ ಯುವಜನರು

Published On - 5:52 pm, Fri, 8 January 21

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ