AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್​ ಕೇಸ್​​ನ ಪ್ರಮುಖ ಸಾಕ್ಷಿ ಪ್ರಭಾಕರ್ ಸೇಲ್ ಸಾವಿನ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಗೃಹ ಸಚಿವರಿಂದ ಆದೇಶ !

ಪ್ರಭಾಕರ್ ಸೇಲ್ ಸಾವಿನ ಬಗ್ಗೆ ಕುಟುಂಬ ಯಾವುದೇ ರೀತಿಯ ಅನುಮಾನವನ್ನೂ ವ್ಯಕ್ತಪಡಿಸಿಲ್ಲ ಎಂದು ವಕೀಲರಾದ ತುಷಾರ್​ ಖಂಡಾರೆ ತಿಳಿಸಿದ್ದಾರೆ.  ಹಾಗಿದ್ದಾಗ್ಯೂ ತನಿಖೆ ಪ್ರಾರಂಭವಾಗಲಿದೆ.

ಆರ್ಯನ್ ಖಾನ್​ ಕೇಸ್​​ನ ಪ್ರಮುಖ ಸಾಕ್ಷಿ ಪ್ರಭಾಕರ್ ಸೇಲ್ ಸಾವಿನ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಗೃಹ ಸಚಿವರಿಂದ ಆದೇಶ !
ಪ್ರಭಾಕರ್ ಸೇಲ್​
TV9 Web
| Edited By: |

Updated on:Apr 03, 2022 | 3:56 PM

Share

ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​  ಮುಹುಲ್​ ಏರಿಯಾದಲ್ಲಿರುವ ಚೆಂಬೂರ್​​ನಲ್ಲಿರುವ ಅವರ ನಿವಾಸದಲ್ಲಿ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು. ಅವರ ನಿಧನವೀಗ ಬಹುವಾಗಿ ಚರ್ಚೆಯಾಗುತ್ತಿದೆ. ಇದು ಸಹಜವಾದ ಸಾವಲ್ಲ ಎಂಬ ಮಾತುಗಳೂ ಕೇಳಿಬರುತ್ತಿದೆ.  ಇದರ ಬೆನ್ನಲ್ಲೇ ಪ್ರಭಾಕರ್ ಸೇಲ್​ ನಿಧನದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್​ ವಾಲ್ಸೆ ಪಾಟೀಲ್ ಆದೇಶಿಸಿದ್ದಾರೆ. ಹೀಗಾಗಿ ಪ್ರಭಾಕರ್ ಸೇಲ್​ ಸಾವಿನ ತನಿಖೆ ಡಿಜಿಪಿ ನೇತೃತ್ವದ ತಂಡದಿಂದ ನಡೆಯಲಿದೆ. ಇನ್ನು ಪ್ರಭಾಕರ್ ಸೇಲ್ ಸಾವಿನ ಬಗ್ಗೆ ಕುಟುಂಬ ಯಾವುದೇ ರೀತಿಯ ಅನುಮಾನವನ್ನೂ ವ್ಯಕ್ತಪಡಿಸಿಲ್ಲ ಎಂದು ವಕೀಲರಾದ ತುಷಾರ್​ ಖಂಡಾರೆ ತಿಳಿಸಿದ್ದಾರೆ.  

ಆರ್ಯನ್​ ಖಾನ್​ ಸಿಕ್ಕಿಬಿದ್ದ ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಭಾಕರ್​ ಅವರನ್ನೂ ಎನ್​ಸಿಬಿ ಅಧಿಕಾರಿಗಳು ಈಗಾಗಲೇ ವಿಚಾರಣೆಗೆ ಒಳಪಡಿಸಿದ್ದರು.  ಇವರೊಬ್ಬ ಸ್ವತಂತ್ರ ಸಾಕ್ಷಿಯಾಗಿದ್ದಿದ್ದು, ಇನ್ನೊಬ್ಬ ಸಾಕ್ಷಿದಾರ ಕಿರಣ್​ ಗೋಸಾವಿ ಮತ್ತು ಈ ಪ್ರಕರಣ ಬೇಧಿಸುವಲ್ಲಿ ಪ್ರಮುಖ ರೂವಾರಿಯಾಗಿದ್ದ  ಸಮೀರ್ ವಾಂಖೆಡೆ (ಆಗ ಎನ್​ಸಿಬಿಯ ಅಧಿಕಾರಿಯಾಗಿದ್ದರು) ವಿರುದ್ಧವೂ ಆರೋಪ ಮಾಡಿದ್ದರು. ಎನ್​ಸಿಬಿ ಅಧಿಕಾರಿಗಳು ಸುಮಾರು 10 ಖಾಲಿ ಪೇಪರ್​ಗಳಿಗೆ ನನ್ನಿಂದ ಸಹಿ ಮಾಡಿಸಿಕೊಂಡಿದ್ದಾರೆ. ಸುಮಾರು 25 ಕೋಟಿ ರೂಪಾಯಿ ವಸೂಲಿ ಮಾಡಿದ ಬಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನೂ ನಾನು ಕೇಳಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲ, ಕಿರಣ್​ ಗೋಸಾವಿಗೆ ತಾನು ಬಾಡಿಗಾರ್ಡ್ ಆಗಿದ್ದೆ, ಆದರೆ ಅವರ ಬಳಿ ಕೆಲಸ ಮಾಡುತ್ತಿದ್ದ ಇನ್ನಿತರರ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಭಾಕರ್ ಹೇಳಿಕೊಂಡಿದ್ದರು.

ಕಿರಣ್​ ಗೋಸಾವಿ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು. ಆದರೆ ನಂತರ ಇವರ ವರುದ್ಧವೇ ಹಣ ಪಡೆದ ಆರೋಪ ಕೇಳಿಬಂದಿತ್ತು. ಮುಂಬೈ ಐಷಾರಾಮಿ ಹಡಗಿನ ಮೇಲೆ ದಾಳಿಯಾಗುತ್ತಿದ್ದಂತೆ ಕಿರಣ್​ ಗೋಸಾವಿ 50 ಲಕ್ಷ ರೂಪಾಯಿ ಪಡೆದಿದ್ದಾಗಿ ಇದೇ ಪ್ರಭಾಕರ್ ಸೇಲ್​ ಆರೋಪ ಮಾಡಿದ್ದರು. ಹೀಗಾಗಿ ಎನ್​ಸಿಬಿ ಪ್ರಭಾಕರ್​ ಅವರನ್ನು ಒಂದು ಪ್ರತಿಕೂಲ ಸಾಕ್ಷಿಯನ್ನಾಗಿ ಪರಿಗಣಿಸಿಕೊಂಡಿತ್ತು. ಅಂದರೆ ಈ ಪ್ರಕರಣದಲ್ಲಿ ಪ್ರಭಾಕರ್​ ಸೇಲ್​ ತಮ್ಮ ಪರವಾಗಿ ನಿಲ್ಲುತ್ತಾರೆ ಎಂದು ಭಾವಿಸಿದ್ದ ಎನ್​ಸಿಬಿಗೆ ಇವರು ಉಲ್ಟಾ ಹೊಡೆದಿದ್ದರು. ಎನ್​ಸಿಬಿ ವಿರುದ್ಧವೇ ಆರೋಪವನ್ನು ಮಾಡಿದ್ದರು.

ಇದನ್ನೂ ಓದಿ: ಲಷ್ಕರ್​ ಇ ತೊಯ್ಬಾ ಉಗ್ರರಿಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು !

Published On - 3:54 pm, Sun, 3 April 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ