AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಇದು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬಂದಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ನ್ಯಾಯಾಧೀಶ ಆರ್‌ಕೆ ದಿವಾಕರ್‌ ಅವರಿಗೆ ವಿಶೇಷ ಭದ್ರತೆಯನ್ನು ನೀಡಬೇಕು ಎಂದು ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದಿದ್ದಾರೆ.

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ
ಜ್ಞಾನವಾಪಿ ಮಸೀದಿ
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2024 | 3:09 PM

Share

ವಿವಾದಿತ ಜ್ಞಾನವಾಪಿ ಮಸೀದಿ (Gyanvapi Masjid) ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲು NIA (National Investigation Agency Government of India) ವಿಶೇಷ ನ್ಯಾಯಾಲಯವು ಅಲಹಾಬಾದ್ ಹೈಕೋರ್ಟ್‌ಗೆ ವಿನಂತಿ ಮಾಡಿಕೊಂಡಿದೆ. ಜ್ಞಾನವಾಪಿ ಮಸೀದಿ ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ದಿನದಿಂದ ಅವರು ಮತ್ತು ಅವರ ಕುಟುಂಬಕ್ಕೆ ಬೆದರಿಕೆಗಳು ಬರುತ್ತಿದೆ ಎಂದು ಹೇಳಲಾಗಿದೆ. ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದು ನ್ಯಾಯಾಧೀಶ ದಿವಾಕರ್‌ಗೆ ಹೆಚ್ಚಿನ ರಕ್ಷಣೆ ನೀಡುವಂತೆ ಕೋರಿದ್ದಾರೆ.

ಈಗಾಗಲೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದಿವಾಕರ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ ಅದ್ನಾನ್ ಖಾನ್ ಎಂಬ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ನಡೆದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಇನ್ನು ನ್ಯಾಯಾಧೀಶ ತ್ರಿಪಾಠಿ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಬರೆದ ಪತ್ರದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ನ್ಯಾಯಾಧೀಶ ದಿವಾಕರ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದು ಸೂಕ್ಷ್ಮ ವಿಷಯವಾಗಿದೆ. ಅದ್ನಾನ್‌ನ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಅದು ಅಹಿತಕರ ಘಟನೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ನ್ಯಾಯಾಧೀಶ ದಿವಾಕರ್ ಈಗ ಬರೇಲಿಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿದ್ದಾರೆ. ಇದಕ್ಕೂ ಮುನ್ನ ಅವರು ಯುಪಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಪ್ರಸ್ತುತ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯಾಯಾಧೀಶ ದಿವಾಕರ್ ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ನನ್ನ ಕುಟುಂಬ ಮತ್ತು ನನಗೆ ಭದ್ರತೆಯನ್ನು ಒದಗಿಸಲಾಯಿತು, ಆದರೆ ಪ್ರಸ್ತುತ ಅದು ಅಸಮರ್ಪಕವಾಗಿದೆ ಎಂದು ತೋರುತ್ತದೆ. ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳಿಂದ ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ. ಹಾಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲು ಈ ಪತ್ರದ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ

25 ಏಪ್ರಿಲ್ 2024 ರಂದು, ನ್ಯಾಯಾಧೀಶ ದಿವಾಕರ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಕೂಡ ಬಂದಿದೆ. ಇನ್ನು ಈ ಬೆದರಿಕೆ ಬಗ್ಗೆ ತನಿಖೆ ನಡೆಸಬೇಕು ಎಂದು ಬರೇಲಿ ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sat, 22 June 24

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್