AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಮುಂಬೈ ಪೊಲೀಸರಿಗೆ ಐಎಸ್‌ಐ ಸಂಚಿನ ಬಗ್ಗೆ ಮೆಸೇಜ್

ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಪಾಕಿಸ್ತಾನಿ ಏಜೆಂಟರು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಅನಾಮಿಕರು ಸಂದೇಶ ಕಳುಹಿಸಿದ್ದಾರೆ.

ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಮುಂಬೈ ಪೊಲೀಸರಿಗೆ ಐಎಸ್‌ಐ ಸಂಚಿನ ಬಗ್ಗೆ ಮೆಸೇಜ್
ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Dec 07, 2024 | 3:51 PM

Share

ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಾಂಬ್ ಸ್ಫೋಟದ ಮೂಲಕ ಮೋದಿಯ ಹತ್ಯೆ ನಡೆಸಬಹುದು ಎಂದು ಮೆಸೇಜ್ ಕಳುಹಿಸುವವರು ಆರೋಪಿಸಿದ್ದಾರೆ. ಈ ಸಂದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹೆಸರಿಸಲಾಗಿದ್ದು, ಅವರು ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಮೆಸೇಜ್ ಕಳುಹಿಸಿದವರ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಕಳೆದ 10 ದಿನಗಳಲ್ಲಿ ಪ್ರಧಾನಿ ಮೋದಿಗೆ ಬರುತ್ತಿರುವ ಎರಡನೇ ಕೊಲೆ ಬೆದರಿಕೆ ಇದಾಗಿದೆ.

ಪ್ರಧಾನಿ ಮೋದಿಗೆ ಜೀವ ಬೆದರಿಕೆ ಇದೆ ಎಂಬ ಮೆಸೇಜ್ ಮುಂಬೈ ಪೊಲೀಸರಿಗೆ ಈ ಮೊದಲು ಕೂಡ ಬಂದಿತ್ತು. ನವೆಂಬರ್ 27ರಂದು ಪೊಲೀಸರಿಗೆ ಅನಾಮಧೇಯ ಕರೆ ಬಂದಿದ್ದು, ಪ್ರಧಾನಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದಾರೆ ಎನ್ನಲಾದ 34 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಆಕೆಯ ಹಿನ್ನೆಲೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗಿಫ್ಟ್: ಬಳ್ಳಾರಿಗೆ ಹೊಸ ನವೋದಯ ವಿದ್ಯಾಲಯ

ಪೊಲೀಸರ ಪ್ರಕಾರ, ನಿಯಂತ್ರಣ ಕೊಠಡಿಗೆ ಬೆಳಿಗ್ಗೆ 9.13 ಕ್ಕೆ ಕರೆ ಬಂದಿತು, ಮೋದಿಯನ್ನು ಕೊಲ್ಲಲು ಸಂಚು ರೂಪಿಸಲಾಗಿದೆ, ಅದಕ್ಕೆ ಆಯುಧವು ಸಿದ್ಧವಾಗಿದೆ ಎಂದು ಮಹಿಳೆ ಹೇಳಿದ್ದರು.

ಕರೆ ಮಾಡಿದ ಮಹಿಳೆ ಕೊನೆಯದಾಗಿ ಮೊಬೈಲ್ ಬಳಸಿದ ಸ್ಥಳವನ್ನು ಅಂಧೇರಿಯಲ್ಲಿ ಪತ್ತೆಹಚ್ಚಲಾಗಿತ್ತು. ಅಂಬೋಲಿ ಪೊಲೀಸ್ ಠಾಣೆಯ ಪೊಲೀಸರು ಹುಡುಕಾಟವನ್ನು ಪ್ರಾರಂಭಿಸಿದರು. ಆದರೆ, ಫೋನ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿತ್ತು..

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!