AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರನ್ನು ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಇ-ಮೇಲ್ ಮಾಡಿದ್ದಾನೆ.

ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ
UP ಸಿಎಂ ಯೋಗಿ ಆದಿತ್ಯನಾಥ್​ (ಎಡಚಿತ್ರ) ಪ್ರಧಾನಿ ನರೇಂದ್ರ ಮೋದಿ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 05, 2023 | 10:16 PM

Share

ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರನ್ನು ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆ ಇ-ಮೇಲ್​
  • ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಇ-ಮೇಲ್ ಮಾಡಿದ ವ್ಯಕ್ತಿ
  • ನೋಯ್ಡಾದ ಸೆಕ್ಟರ್​-20 ಪೊಲೀಸ್​ ಠಾಣೆಯಲ್ಲಿ ದೂರು ದಾಖಲು.

ನವದೆಹಲಿ/ ನೋಯ್ಡಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ (Yogi Adityanath) ಅವರನ್ನು ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಇ-ಮೇಲ್ (E-Mail) ಸಂದೇಶ ಕಳುಹಿಸಿದ್ದಾರೆ. ಈ ಸಂಬಂಧ ವಾಹಿನಿಯ ಸಿಇಓ ನೋಯ್ಡಾದ ಸೆಕ್ಟರ್​-20 ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಇಓ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು, ಎರಡು ತಂಡಗಳಾಗಿ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.

ಏಪ್ರಿಲ್​ 3 ರ ರಾತ್ರಿ 10:23 ಕ್ಕೆ ಕಾರ್ತಿಕ್​ ಸಿಂಗ್​ ಎಂಬ ವ್ಯಕ್ತಿ ಪ್ರಧಾನಿ ಮೋದಿಯವರನ್ನು ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರುನ್ನು ಕೊಲ್ಲುವುದಾಗಿ ಇ-ಮೇಲ್​​ ಮೂಲಕ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಗಾಗಿ ಹುಡುಕಾಟ ನಡೆದಿದ್ದು, ಶೀಘ್ರದಲ್ಲೆ ಬಂದಿಸಲಾಗುವುದು ಎಂದು ಪೊಲೀಸ್​ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: BJP PM Candidate: ಯಾರಾಗಲಿದ್ದಾರೆ ನರೇಂದ್ರ ಮೋದಿ ಉತ್ತರಾಧಿಕಾರಿ?; ಪ್ರಧಾನಿ ಅಭ್ಯರ್ಥಿ ಸ್ಥಾನದ ಬಗ್ಗೆ ಯೋಗಿ ಆದಿತ್ಯನಾಥ್ ಸ್ಪಷ್ಟನೆ

ದೂರಿನ ಆಧಾರದ ಮೇಲೆ ಪೊಲೀಸರು ಎರಡು ತಂಡಗಳೊಂದಿಗೆ ತನಿಖೆ ಆರಂಭಿಸಿದ್ದಾರೆ. ಇನ್ನು ಬೆದರಿಕೆ ಇ-ಮೇಲ್​ಗಳು ಆಗಾಗ ಸುದ್ದಿ ವಾಹನಿಗಳಿಗೆ ಬರುತ್ತಿರುತ್ತವೆ. ಈ ಕುರಿತು ಮಾಧ್ಯಮಗಳು ನಮಗೆ ದೂರು ನೀಡುತ್ತಿದ್ದು, ನಾವು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ ಈ ಬಾರಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್​ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ವಿರುದ್ಧ ಹಲವು ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಎಂದು ಎಸಿಪಿ ರಜನೀಶ್ ವರ್ಮಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Wed, 5 April 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!