Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹ..ಭೂಕುಸಿತ; ಸಹಾಯಕ್ಕೆ ಧಾವಿಸಿದ ಭಾರತೀಯ ವಾಯುಸೇನೆ

ಮಹಾರಾಷ್ಟ್ರದಲ್ಲಿ ಸದ್ಯ 1,35,313 ಮಂದಿಯನ್ನು ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಳಿಸಲಾಗಿದೆ. ಇದರಲ್ಲಿ 78,111 ಜನರನ್ನು ಸಾಂಗ್ಲಿಗೆ 40,882 ಮಂದಿಯನ್ನು ಕೊಲ್ಲಾಪುರಕ್ಕೆ ಶಿಫ್ಟ್​ ಮಾಡಲಾಗಿದೆ.

Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹ..ಭೂಕುಸಿತ; ಸಹಾಯಕ್ಕೆ ಧಾವಿಸಿದ ಭಾರತೀಯ ವಾಯುಸೇನೆ
ಮಹಾರಾಷ್ಟ್ರ ಪ್ರವಾಹ
Follow us
| Updated By: Lakshmi Hegde

Updated on:Jul 25, 2021 | 10:02 AM

ಕಳೆದ ಮೂರು ದಿನಗಳಿಂದಲೂ ಮಹಾರಾಷ್ಟ್ರ(Maharashtra Rain) ದ ಪುಣೆ ಮತ್ತು ಕೊಂಕಣ ವಿಭಾಗದಲ್ಲಿ ಮಿತಿಮೀರಿ ಮಳೆಯಾಗುತ್ತಿದ್ದು, ಭೂಕುಸಿತ, ಪ್ರವಾಹ ಉಂಟಾಗಿದೆ. ಮಳೆ ಸಂಬಂಧಿತ ಸಾವಿನ ಸಂಖ್ಯೆಯೀಗ 112ಕ್ಕೆ ಏರಿಕೆಯಾಗಿದೆ. 99 ಜನರು ನಾಪತ್ತೆಯಾಗಿದ್ದಾರೆ. 3000ಕ್ಕೂ ಅಧಿಕ ಜಾನುವಾರು (Cattle)ಗಳು ಸಾವನ್ನಪ್ಪಿದ್ದು, ಅದರಲ್ಲಿ ಸತಾರಾ ಜಿಲ್ಲೆಯಲ್ಲೇ ಜಾಸ್ತಿ ಸಾವಾಗಿದೆ ಎಂದು ಮಹಾ ಸರ್ಕಾರ ತಿಳಿಸಿದೆ. ಹಾಗೇ, ಮೃತರ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣಕಾಸಿನ ನೆರವು ನೀಡಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

1.35 ಲಕ್ಷ ಜನರ ಸ್ಥಳಾಂತರ ಮಹಾರಾಷ್ಟ್ರದಲ್ಲಿ ಸದ್ಯ 1,35,313 ಮಂದಿಯನ್ನು ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಳಿಸಲಾಗಿದೆ. ಇದರಲ್ಲಿ 78,111 ಜನರನ್ನು ಸಾಂಗ್ಲಿಗೆ 40,882 ಮಂದಿಯನ್ನು ಕೊಲ್ಲಾಪುರಕ್ಕೆ ಶಿಫ್ಟ್​ ಮಾಡಲಾಗಿದೆ. ಪ್ರವಾಹ ಪೀಡಿತ ಕೊಂಕಣದ ಪಟ್ಟಣಗಳಾದ ಚಿಪ್ಲುನ್​, ಖೇದ್​, ಮಹಾದ್​​​ಗಳಲ್ಲಿ ಕುಡಿಯುವ ನೀರು, ವಿದ್ಯುತ್​ ಪೂರೈಕೆ ವ್ಯವಸ್ಥೆ ಮಾಡಲಾಗುತ್ತಿದ್ದು. ಆಹಾರ, ಔಷಧಗಳನ್ನೂ ನೀಡಲಾಗುತ್ತಿದೆ. ಒಟ್ಟು 34 ಎನ್​​ಡಿಆರ್​ಎಫ್​ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

ತಾಲಿಯೆ ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರು ಶನಿವಾರ ರಾಯ್​ಗಡ್​ ಜಿಲ್ಲೆಯ ತಾಲಿಯೆ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ. ಪ್ರವಾಹದಿಂದ ತತ್ತರಿಸಿದ ಜನರ ಕಾಳಜಿಯನ್ನು ಸರ್ಕಾರ ತೆಗೆದುಕೊಳ್ಳುತ್ತದೆಂದು ಭರವಸೆ ನೀಡಿದ್ದಾರೆ. ಹಾಗೇ ಏರ್​ಫೋರ್ಸ್​ ಕೂಡ ಇಲ್ಲಿನ ಸಂತ್ರಸ್ತರ ನೆರವಿಗೆ ನಿಂತಿದ್ದು, ಈಗಾಗಲೇ ನೂರಾರು ಜನರನ್ನು ಏರ್​ಲಿಫ್ಟ್​ ಮಾಡಿದೆ.

ಇದನ್ನೂ ಓದಿ: Viral Video: ನೀರಿನೊಳಗೆ ದೈತ್ಯಾಕಾರದ ಅನಕೊಂಡಾ ನೋಡಿ ಬೆರಗಾದ ನೆಟ್ಟಿಗರು! ವಿಡಿಯೋ 1 ಮಿಲಿಯನ್ ವ್ಯೂವ್ಸ್

Tokyo Olympic 2020: ಇದೇ ಮೊದಲ ಬಾರಿಗೆ ಒಲಿಂಪಿಕ್ ಜ್ಯೋತಿ ಉರಿಸಲು ಹೈಡ್ರೋಜನ್ ಬಳಕೆ

Published On - 9:59 am, Sun, 25 July 21

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ