AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವಾರಗಳ ಗದ್ದಲ, ಪ್ರತಿಭಟನೆಗಳ ನಂತರ ಸೋಮವಾರ ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ

ಮುಂಗಾರು ಅಧಿವೇಶನದ ಮೊದಲ ಎರಡು ವಾರಗಳ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ  ಪ್ರತಿಭಟನೆಗಳು ನಡೆದ ನಂತರ  ಆಗಸ್ಟ್ 1ರಂದು ಬೆಲೆ ಏರಿಕೆ  ಚರ್ಚೆಯಾಗಲಿದೆ.

2 ವಾರಗಳ ಗದ್ದಲ, ಪ್ರತಿಭಟನೆಗಳ ನಂತರ ಸೋಮವಾರ ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ
ವಿಪಕ್ಷಗಳ ಪ್ರತಿಭಟನೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 29, 2022 | 9:00 PM

Share

ದೆಹಲಿ: ಸೋಮವಾರ ಲೋಕಸಭೆಯಲ್ಲಿ (Loksabha) ಬೆಲೆ ಏರಿಕೆ (Price hike) ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆ ಚರ್ಚೆಗಳಲ್ಲಿ ಕೇಳುವ ಪ್ರಶ್ನೆಗೆ ಉತ್ತರಿಸಲಿದ್ದಾರೆ. ಮುಂಗಾರು ಅಧಿವೇಶನದ ಮೊದಲ ಎರಡು ವಾರಗಳ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ  ಪ್ರತಿಭಟನೆಗಳು ನಡೆದ ನಂತರ  ಆಗಸ್ಟ್ 1ರಂದು ಬೆಲೆ ಏರಿಕೆ  ಚರ್ಚೆಯಾಗಲಿದೆ.  ಮುಂಗಾರು ಅಧಿವೇಶನ ಆರಂಭವಾದದಿಂದಿನಿಂದ ವಿಪಕ್ಷಗಳು ಹಣದುಬ್ಬರದ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಲೇ ಇದ್ದವು. ಜೂನ್‌ನಲ್ಲಿ ಭಾರತದ ವಾರ್ಷಿಕ ಚಿಲ್ಲರೆ ಹಣದುಬ್ಬರವು ಕಳೆದ ವರ್ಷ ಶೇ 6.26 ರಿಂದ ಈ ವರ್ಷ ಜೂನ್‌ನಲ್ಲಿ ಶೇ7.01 ಕ್ಕೆ ಏರಿದೆ. ಇದಕ್ಕಿಂತ ಮುನ್ನ ದಿನಬಳಕೆ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (GST) ವಿಧಿಸುವುದರ ವಿರುದ್ಧವೂ ಪ್ರತಿಭಟನೆಗಳು ನಡೆದಿವೆ. ಸಂಸತ್ತಿನಲ್ಲಿ ಈ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಉಳಿದೆಲ್ಲವನ್ನೂ ಬದಿಗಿಡಬೇಕು ಎಂದು ವಿಪಕ್ಷಗಳು ಹೇಳಿವೆ. ಸರ್ಕಾರವು “ಎಲ್ಲಾ ಸಮಸ್ಯೆಗಳ” ಚರ್ಚೆಗೆ ಸಿದ್ಧ ಎಂದು ಪದೇ ಪದೇ ಹೇಳಿಕೊಂಡಿದೆ. ಆದರೆ ನಿರ್ಮಲಾ ಸೀತಾರಾಮನ್ ಅವರ ಅನುಪಸ್ಥಿತಿಯು ಸರ್ಕಾರ ನುಣುಚಿಕೊಳ್ಳುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ವಿಪಕ್ಷಗಳು ಹೇಳಿವೆ.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿ ಮತ್ತು ಫಲಕಗಳನ್ನು ಸದನದೊಳಗೆ ತಂದು ಸರ್ಕಾರವು ನೈಜ ಸಮಸ್ಯೆಗಳನ್ನು ಚರ್ಚಿಸುವುದಿಲ್ಲ ಎಂದು ಆರೋಪಿಸಿದ್ದರು. ವಿಪಕ್ಷ ಸದಸ್ಯರ ವಿರುದ್ದ ಸಭಾಪತಿ ಓಂ ಬಿರ್ಲಾ ಕ್ರಮ ತೆಗೆದುಕೊಂಡಿದ್ದು ಹಲವಾರು ಸಂಸದರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

Published On - 8:54 pm, Fri, 29 July 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು