AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಮತ್ತೆ ‘ಡಿಸ್ಟರ್ಬ್ಡ್ ಏರಿಯಾ’ ಎಂದು ಘೋಷಣೆ

ರಾಜ್ಯವನ್ನು ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಡಿಯಲ್ಲಿ ಇರಿಸಲಾಗಿದೆ. ಅಕ್ಟೋಬರ್​​ ಒಂದರಿಂದ ಮಣಿಪುರದಲ್ಲಿ ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಜಾರಿ ಮಾಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಣಿಪುರ ಮತ್ತೆ 'ಡಿಸ್ಟರ್ಬ್ಡ್ ಏರಿಯಾ' ಎಂದು ಘೋಷಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 27, 2023 | 5:23 PM

Share

ಇಂಫಾಲ್, ಸೆ.27: ಮಣಿಪುರ (Manipur) ತನ್ನ ಮೂಲ ಸ್ಥಿತಿಗೆ ಮರುಳುತ್ತಿರುವ ಸಮಯದಲ್ಲೇ ಮತ್ತೆ ರಾಜ್ಯವನ್ನು ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಡಿಯಲ್ಲಿ ಇರಿಸಲಾಗಿದೆ. ಅಕ್ಟೋಬರ್​​ ಒಂದರಿಂದ ಮಣಿಪುರದಲ್ಲಿ ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಜಾರಿ ಮಾಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಣಿಪುರದಲ್ಲಿ ಆರು ತಿಂಗಳವರೆಗೆ ಎಎಫ್​ಎಸ್​​ಪಿಎ(Armed Forces Special Powers Act) ಜಾರಿಯಲ್ಲಿರುತ್ತದೆ. ಇನ್ನು ಈ ಕಾಯಿದೆಯಿಂದ ಕಣಿವೆ ಪ್ರದೇಶಗಳನ್ನು ಒಳಗೊಂಡಿರುವ 19 ಪೊಲೀಸ್ ಠಾಣೆಗಳನ್ನು ಹೊರಗಿಡಲಾಗಿದೆ.

ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ ಇಡೀ ಮಣಿಪುರ ರಾಜ್ಯವನ್ನು ಆರು ತಿಂಗಳವರೆಗೆ ‘ಡಿಸ್ಟರ್ಬ್ಡ್ ಏರಿಯಾ’ (ತೊಂದರೆಗೊಳಗಾದ ಪ್ರದೇಶ) ಎಂದು ಘೋಷಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಒಪ್ಪಿಕೊಂಡಿದ್ದಾರೆ ಎಂದು ಈ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಅಕ್ಟೋಬರ್ 1, 2023 ರಿಂದ ಜಾರಿಗೆ ಬರುವಂತೆ ಇನ್ನು ಆರು ತಿಂಗಳು ಈ ಅಧಿಸೂಚನೆಯನ್ನು ಪಾಲನೆ ಮಾಡಲಾಗುತ್ತದೆ ಎಂದು ಹೇಳಿದೆ. ಈ ಕಾಯಿದೆಯಡಿ ಬರದ ಪೊಲೀಸ್​​ ಠಾಣೆಗಳೆಂದರೆ: ಇಂಫಾಲ್, ಲ್ಯಾಂಫೆಲ್, ಸಿಟಿ, ಸಿಂಗ್ಜಮೇ, ಸೆಕ್ಮಾಯಿ, ಲಮ್ಸಾಂಗ್, ಪಾಸ್ಟೋಲ್, ವಾಂಗೋಯ್, ಪೊರಂಪಾಟ್, ಹೀಂಗಾಂಗ್, ಲಾಮ್ಲೈ, ಇರಿಬಂಗ್, ಲೈಮಾಖೋಂಗ್, ತೌಬಲ್, ಬಿಷ್ಣುಪುರ್, ನಂಬೋಲ್, ಮೊಯಿರಾಂಗ್, ಕಕ್ಚ್ ಜಿರ್ಬಾಮ್.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ