chandrayaan-3: ಚಂದ್ರನನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಿ: ಸ್ವಾಮಿ ಚಕ್ರಪಾಣಿ ಮಹಾರಾಜ್

Moon Hindu Rashtra: ಚಂದ್ರಯಾನ-3 (chandrayaan-3) ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ತನ್ನ ಕಾರ್ಯಚರಣೆಯನ್ನು ನಡೆಸುತ್ತಿದೆ. ಲ್ಯಾಂಡಿಂಗ್​​​ ಪಾಯಿಂಟ್​​ನ್ನು ಶಿವಶಕ್ತಿ ಎಂದು ಪ್ರಧಾನಿ ಮೋದಿ ಅವರು ಹೆಸರಿಸಿದ್ದಾರೆ. ಇದೀಗ ಅದನ್ನು ಹಿಂದೂ ರಾಷ್ಟ್ರ ಎಂದು ಘೋಷಣೆ ಮಾಡಿ ಎಂದು ಸ್ವಾಮಿ ಚಕ್ರಪಾಣಿ ಮಹಾರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

chandrayaan-3: ಚಂದ್ರನನ್ನು 'ಹಿಂದೂ ರಾಷ್ಟ್ರ' ಎಂದು ಘೋಷಿಸಿ: ಸ್ವಾಮಿ ಚಕ್ರಪಾಣಿ ಮಹಾರಾಜ್
ಸ್ವಾಮಿ ಚಕ್ರಪಾಣಿ ಮಹಾರಾಜ್
Follow us
|

Updated on:Aug 28, 2023 | 12:40 PM

ಚಂದ್ರಯಾನ-3 (chandrayaan-3) ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ತನ್ನ ಕಾರ್ಯಚರಣೆಯನ್ನು ನಡೆಸುತ್ತಿದೆ. ಈ ಸಾಧನೆಯ ಮೂಲಕ ವಿಶ್ವದಲ್ಲೇ ದೊಡ್ಡಮಟ್ಟದ ಇತಿಹಾಸವನ್ನು ಭಾರತ ನಿರ್ಮಿಸಿದೆ. ಇಸ್ರೋ ಸಾಧನೆಯ ಬಗ್ಗೆ ವಿಜ್ಞಾನಿಗಳನ್ನು ಅಭಿನಂದಿಸಲು ಶನಿವಾರದಂದು (ಆ.26) ಬೆಂಗಳೂರಿನಲ್ಲಿರುವ ಇಸ್ರೋ ಮುಖ್ಯಕಚೇರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ವಿಕ್ರಮ್​​​ ಲ್ಯಾಂಡಿಂಗ್​​​ ಪಾಯಿಂಟ್​​ನ್ನು ಶಿವಶಕ್ತಿ ಹೆಸರಿಸಿದ್ದಾರೆ. ಇನ್ನು ಆಗಸ್ಟ್​​ 23ನ್ನು ರಾಷ್ಟ್ರೀಯ ಬಾಹ್ಯಕಾಶ ದಿನ ಎಂದು ಆಚರಣೆ ಮಾಡಲು ಕರೆ ನೀಡಿದ್ದಾರೆ. ಇನ್ನು ಈ ಬಗ್ಗೆಯು ವಾದ-ವಿವಾದಗಳು ಕೂಡ ಸೃಷ್ಟಿಯಾಗಿತ್ತು. ಇದೀಗ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಅವರು ಚಂದ್ರನನ್ನು ‘ಹಿಂದೂ ರಾಷ್ಟ್ರ’ (Moon Hindu Rashtra) ಎಂದು ಘೋಷಿಸಲು ಮತ್ತು ಚಂದ್ರಯಾನ -3 ರ ಲ್ಯಾಂಡಿಂಗ್ ಸ್ಪಾಟ್​​ನ್ನು ಅದರ ರಾಜಧಾನಿಯನ್ನಾಗಿ ಮಾಡಬೇಕೆಂದು ಕರೆ ನೀಡಿದರು.

ಸ್ವಾಮಿ ಚಕ್ರಪಾಣಿ ಮಹಾರಾಜ್ ಅವರ ಇಂತಹ ವಿವಾದತ್ಮಕ ಹೇಳಿಕೆಗಳು ಹೊಸದೇನಲ್ಲ, ಇತರ ಧರ್ಮಗಳಿಗಿಂತ ಮೊದಲು ಭಾರತ ಸರ್ಕಾರವು ಚಂದ್ರನ ಮೇಲೆ ತನ್ನ ಮಾಲೀಕತ್ವವನ್ನು ಸ್ಥಾಪಿಸಿಬೇಕು ಮತ್ತು ಇದನ್ನು ಸಂಸತ್ತಿನ ನಿರ್ಣಯವಾಗಿ ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಸ್ವಾಮಿ ಚಕ್ರಪಾಣಿ ಮಹಾರಾಜ್ ಟ್ವೀಟ್​​

ಸಂಸತ್ತಿನಲ್ಲಿ ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು. ಚಂದ್ರಯಾನ 3 ಇಳಿದ ಸ್ಥಳವನ್ನು ಅದರ ರಾಜಧಾನಿ ‘ಶಿವಶಕ್ತಿ ಪಾಯಿಂಟ್’ ಆಗಿ ನಿರ್ಮಾಣ ಮಾಡಬೇಕು. ಇನ್ನು ಅಲ್ಲಿಗೆ ಜಿಹಾದಿ ಮನಸ್ಥಿತಿಯ ಯಾವುದೇ ಭಯೋತ್ಪಾದಕರು ಹೋಗಬಾರದು ಎಂದು ಹೇಳಿರುವ ವೀಡಿಯೊವನ್ನು ಟ್ವಿಟರ್​​​ನಲ್ಲಿ ಪೋಸ್ಟ್​​ ಮಾಡಲಾಗಿದೆ.

ಇದನ್ನೂ ಓದಿ:ಅಲ್ಲಿ ಶಿವಶಕ್ತಿ ಸ್ಥಳ ಎಂದು ನಾಮಕರಣ; ಇಲ್ಲಿ ಯಾದಗಿರಿಯಲ್ಲಿ ನವಜಾತ ಶಿಶುಗಳಿಗೆ ವಿಕ್ರಮ, ಪ್ರಗ್ಯಾನ್ ಹೆಸರಿಟ್ಟು ಸಂಭ್ರಮ!

ಚಕ್ರಪಾಣಿ ಅವರು ಈ ಹಿಂದೆ ಕರೋನವೈರಸ್ ಸಮಯದಲ್ಲಿ ದೆಹಲಿಯಲ್ಲಿ ‘ ಗೋಮುತ್ರ ಪಾರ್ಟಿ ನಡೆಸುವ ಮೂಲಕ ಎಲ್ಲ ಗಮನ ಸೆಳೆದಿದ್ದರು. ಅಖಿಲ ಭಾರತ ಹಿಂದೂ ಮಹಾಸಭಾ ಸದಸ್ಯರು ಸೇರಿ ಕೋವಿಡ್ -19 ಅನ್ನು ನಿವಾರಿಸಲು ಗೋಮೂತ್ರವನ್ನು ಸೇವಿಸಿದರು.

2018ರಲ್ಲಿ ಕೇರಳದಲ್ಲಿ ಸಂಭವಿಸಿದ ಪ್ರವಾಹಕ್ಕೆ ಸಂಬಂಧಿಸಿದಂತೆ ಚಕ್ರಪಾಣಿ ಅವರು ಒಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದರು. ರಾಜ್ಯದಲ್ಲಿ ಗೋಮಾಂಸ ತಿನ್ನುವವರಿಗೆ ಯಾರು ಸಹಾಯವನ್ನು ಮಾಡಬಾರದು ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Mon, 28 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!