AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ( Deep Sidhu), ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು
ದೀಪ್​ ಸಿಧು
Lakshmi Hegde
|

Updated on:Feb 13, 2021 | 4:10 PM

Share

ದೆಹಲಿ: ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಇಂದು ಆರೋಪಿಗಳಾದ ನಟ ದೀಪ್​ ಸಿಧು(Deep Sidhu) ಹಾಗೂ ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆಯ ಬಳಿ ಕರೆದೊಯ್ದಿದ್ದಾರೆ. ಅಂದು ಗಣರಾಜ್ಯೋತ್ಸವದಂದು ರೈತರ ಹೋರಾಟ ಹಿಂಸಾಚಾರವಾಗಿ ಬದಲಾಗಿತ್ತು. ಕೆಂಪುಕೋಟೆಯ ಬಳಿ ಗಲಭೆ ನಡೆಯುತ್ತಿರುವ ಬೆನ್ನಲ್ಲೇ, ಒಳನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಲಾಗಿತ್ತು. ಇದರಲ್ಲಿ ದೀಪ್ ಸಿಧು ಪ್ರಮುಖ ಆರೋಪಿಯಾಗಿದ್ದರು. ಅಂದಿನಿಂದಲೂ ನಾಪತ್ತೆಯಾಗಿದ್ದ ದೀಪ್​​ರನ್ನು ಫೆಬ್ರವರಿ 9ರಂದು ಹರ್ಯಾಣಾದ ಕರ್ನಲ್​ ಬೈಪಾಸ್​ ಬಳಿ ಬಂಧಿಸಲಾಗಿತ್ತು.

ಪ್ರಕರಣದ ವಿಚಾರಣೆ, ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ದೀಪ್ ಸಿಧು, ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ಇನ್ನು ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್​ ತಾವು ಗಣರಾಜ್ಯೋತ್ಸವದಂದು ಕೆಂಪುಕೋಟೆ ಪ್ರವೇಶಿಸಿದ ಮಾರ್ಗವನ್ನು ಪೊಲೀಸರಿಗೆ ತೋರಿಸಿದ್ದಾರೆ.

ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ದೀಪ್ ಸಿಧು ಮತ್ತು ಆತನ ಸಹಚರರಾದ ಜುಗ್ರಾಜ್​ ಸಿಂಗ್, ಗುರ್​ಜೋತ್​ ಸಿಂಗ್, ಗುರ್​ಜಂತ್​ ಸಿಂಗ್​, ಜಗ್​ಬೀರ್ ಸಿಂಗ್, ಬುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದರು. ಇವರೆಲ್ಲರೂ ಹಿಂಸಾಚಾರ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದವರ ಪಟ್ಟಿಯಲ್ಲಿ ಸೇರಿದ್ದು, ಸುಳಿವು ಕೊಟ್ಟವರಿಗೆ ನಗದು ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ: Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Published On - 4:08 pm, Sat, 13 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್