AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ( Deep Sidhu), ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು
ದೀಪ್​ ಸಿಧು
Lakshmi Hegde
|

Updated on:Feb 13, 2021 | 4:10 PM

Share

ದೆಹಲಿ: ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಇಂದು ಆರೋಪಿಗಳಾದ ನಟ ದೀಪ್​ ಸಿಧು(Deep Sidhu) ಹಾಗೂ ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆಯ ಬಳಿ ಕರೆದೊಯ್ದಿದ್ದಾರೆ. ಅಂದು ಗಣರಾಜ್ಯೋತ್ಸವದಂದು ರೈತರ ಹೋರಾಟ ಹಿಂಸಾಚಾರವಾಗಿ ಬದಲಾಗಿತ್ತು. ಕೆಂಪುಕೋಟೆಯ ಬಳಿ ಗಲಭೆ ನಡೆಯುತ್ತಿರುವ ಬೆನ್ನಲ್ಲೇ, ಒಳನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಲಾಗಿತ್ತು. ಇದರಲ್ಲಿ ದೀಪ್ ಸಿಧು ಪ್ರಮುಖ ಆರೋಪಿಯಾಗಿದ್ದರು. ಅಂದಿನಿಂದಲೂ ನಾಪತ್ತೆಯಾಗಿದ್ದ ದೀಪ್​​ರನ್ನು ಫೆಬ್ರವರಿ 9ರಂದು ಹರ್ಯಾಣಾದ ಕರ್ನಲ್​ ಬೈಪಾಸ್​ ಬಳಿ ಬಂಧಿಸಲಾಗಿತ್ತು.

ಪ್ರಕರಣದ ವಿಚಾರಣೆ, ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ದೀಪ್ ಸಿಧು, ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ಇನ್ನು ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್​ ತಾವು ಗಣರಾಜ್ಯೋತ್ಸವದಂದು ಕೆಂಪುಕೋಟೆ ಪ್ರವೇಶಿಸಿದ ಮಾರ್ಗವನ್ನು ಪೊಲೀಸರಿಗೆ ತೋರಿಸಿದ್ದಾರೆ.

ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ದೀಪ್ ಸಿಧು ಮತ್ತು ಆತನ ಸಹಚರರಾದ ಜುಗ್ರಾಜ್​ ಸಿಂಗ್, ಗುರ್​ಜೋತ್​ ಸಿಂಗ್, ಗುರ್​ಜಂತ್​ ಸಿಂಗ್​, ಜಗ್​ಬೀರ್ ಸಿಂಗ್, ಬುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದರು. ಇವರೆಲ್ಲರೂ ಹಿಂಸಾಚಾರ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದವರ ಪಟ್ಟಿಯಲ್ಲಿ ಸೇರಿದ್ದು, ಸುಳಿವು ಕೊಟ್ಟವರಿಗೆ ನಗದು ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ: Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Published On - 4:08 pm, Sat, 13 February 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!