AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ( Deep Sidhu), ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ.

Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು
ದೀಪ್​ ಸಿಧು
Lakshmi Hegde
|

Updated on:Feb 13, 2021 | 4:10 PM

Share

ದೆಹಲಿ: ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಇಂದು ಆರೋಪಿಗಳಾದ ನಟ ದೀಪ್​ ಸಿಧು(Deep Sidhu) ಹಾಗೂ ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆಯ ಬಳಿ ಕರೆದೊಯ್ದಿದ್ದಾರೆ. ಅಂದು ಗಣರಾಜ್ಯೋತ್ಸವದಂದು ರೈತರ ಹೋರಾಟ ಹಿಂಸಾಚಾರವಾಗಿ ಬದಲಾಗಿತ್ತು. ಕೆಂಪುಕೋಟೆಯ ಬಳಿ ಗಲಭೆ ನಡೆಯುತ್ತಿರುವ ಬೆನ್ನಲ್ಲೇ, ಒಳನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಲಾಗಿತ್ತು. ಇದರಲ್ಲಿ ದೀಪ್ ಸಿಧು ಪ್ರಮುಖ ಆರೋಪಿಯಾಗಿದ್ದರು. ಅಂದಿನಿಂದಲೂ ನಾಪತ್ತೆಯಾಗಿದ್ದ ದೀಪ್​​ರನ್ನು ಫೆಬ್ರವರಿ 9ರಂದು ಹರ್ಯಾಣಾದ ಕರ್ನಲ್​ ಬೈಪಾಸ್​ ಬಳಿ ಬಂಧಿಸಲಾಗಿತ್ತು.

ಪ್ರಕರಣದ ವಿಚಾರಣೆ, ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ದೀಪ್ ಸಿಧು, ಇಕ್ಬಾಲ್​ ಸಿಂಗ್​ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ಇನ್ನು ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್​ ತಾವು ಗಣರಾಜ್ಯೋತ್ಸವದಂದು ಕೆಂಪುಕೋಟೆ ಪ್ರವೇಶಿಸಿದ ಮಾರ್ಗವನ್ನು ಪೊಲೀಸರಿಗೆ ತೋರಿಸಿದ್ದಾರೆ.

ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ದೀಪ್ ಸಿಧು ಮತ್ತು ಆತನ ಸಹಚರರಾದ ಜುಗ್ರಾಜ್​ ಸಿಂಗ್, ಗುರ್​ಜೋತ್​ ಸಿಂಗ್, ಗುರ್​ಜಂತ್​ ಸಿಂಗ್​, ಜಗ್​ಬೀರ್ ಸಿಂಗ್, ಬುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದರು. ಇವರೆಲ್ಲರೂ ಹಿಂಸಾಚಾರ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದವರ ಪಟ್ಟಿಯಲ್ಲಿ ಸೇರಿದ್ದು, ಸುಳಿವು ಕೊಟ್ಟವರಿಗೆ ನಗದು ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ: Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Published On - 4:08 pm, Sat, 13 February 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು