AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali Gift: ದೀಪಾವಳಿಗೆ ಕೇಂದ್ರ ಉದ್ಯೋಗಿಗಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್

ಕೇಂದ್ರ ಉದ್ಯೋಗಿಗಳಿಗೆ ಲಭ್ಯವಿರುವ ರಜೆಯಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯಕ್ಕೆ ಭೇಟಿ ನೀಡುವಾಗ ಅವರ ಪ್ರಯಾಣದಲ್ಲಿ ರಿಯಾಯಿತಿ (ಎಲ್‌ಟಿಸಿ) ಸೌಲಭ್ಯವನ್ನು ಕೇಂದ್ರವು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಿದೆ.

Deepavali Gift: ದೀಪಾವಳಿಗೆ ಕೇಂದ್ರ ಉದ್ಯೋಗಿಗಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್
TV9 Web
| Edited By: |

Updated on:Oct 12, 2022 | 2:22 PM

Share

ದೆಹಲಿ: ಮೋದಿ ಸರ್ಕಾರ ದೀಪಾವಳಿಗೆ ತನ್ನ ಉದ್ಯೋಗಿಗಳಿಗೆ ಬಂಪರ್ ಆಫರ್​ಗಳನ್ನು ನೀಡಿದೆ. ಕೇಂದ್ರ ಉದ್ಯೋಗಿಗಳಿಗೆ ಲಭ್ಯವಿರುವ ರಜೆಯಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯಕ್ಕೆ ಭೇಟಿ ನೀಡುವಾಗ ಅವರ ಪ್ರಯಾಣದಲ್ಲಿ ರಿಯಾಯಿತಿ (ಎಲ್‌ಟಿಸಿ) ಸೌಲಭ್ಯವನ್ನು ಕೇಂದ್ರವು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಿದೆ.

ಎಲ್‌ಟಿಸಿ ಯೋಜನೆಯನ್ನು ಸೆಪ್ಟೆಂಬರ್ 26, 2022 ರಿಂದ ಸೆಪ್ಟೆಂಬರ್ 25, 2024 ರವರೆಗೆ ಎರಡು ವರ್ಷಗಳ ಅವಧಿಗೆ ವಿಸ್ತರಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯವು ಆದೇಶವನ್ನು ಹೊರಡಿಸಿದೆ.

ಯೋಜನೆಯಡಿಯಲ್ಲಿ, ಅರ್ಹ ಕೇಂದ್ರ ಸರ್ಕಾರಿ ನೌಕರರು ಎಲ್‌ಟಿಸಿಯನ್ನು ಪಡೆದಾಗ ಪಾವತಿಸಿದ ರಜೆಯ ಜೊತೆಗೆ ಪ್ರಯಾಣಕ್ಕಾಗಿ ಮತ್ತು ತಾವು ಪ್ರಯಾಣಿಸಿದ ಸ್ಥಳದಿಂದ ಪ್ರಯಾಣ ಟಿಕೆಟ್‌ಗಳ ಮರುಪಾವತಿಯನ್ನು ಪಡೆಯುತ್ತಾರೆ.

ಅಷ್ಟೇ ಅಲ್ಲ, ವಿಮಾನ ಪ್ರಯಾಣಕ್ಕೆ ಅರ್ಹರಲ್ಲದ ಸರ್ಕಾರಿ ನೌಕರರಿಗೂ ಈ ರಾಜ್ಯಗಳಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅವರು ತಮ್ಮ ಪ್ರಧಾನ ಕಛೇರಿಯಿಂದ ನೇರವಾಗಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯಕ್ಕೆ ಯಾವುದೇ ವಿಮಾನಯಾನ ವರ್ಗದಲ್ಲಿ ಪ್ರಯಾಣಿಸಬಹುದು.

ಇದನ್ನು ಓದಿ: ಇಂದಿನಿಂದ ದ್ರೌಪದಿ ಮುರ್ಮು ತ್ರಿಪುರಾ ಪ್ರವಾಸ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಆದರೆ ನೌಕರರು ಎಲ್‌ಟಿಸಿ ದುರ್ಬಳಕೆ ಮಾಡಿದರೆ ಅವರ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಮತ್ತು ನೌಕರರ ನಿಯಮಗಳ ಅಡಿಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೌಕರರಿಗೆ ಎಚ್ಚರಿಕೆ ನೀಡಲಾಗಿದೆ. 2020 ರಲ್ಲಿ ಕೇಂದ್ರ ಸರ್ಕಾರವು ಈ ಸೌಲಭ್ಯದ ಅವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಿದೆ ಎಂಬುದು ಗಮನಿಸಬೇಕಾದ ಸಂಗತಿ.

Published On - 2:20 pm, Wed, 12 October 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ