AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ; 2 ಲಕ್ಷ ರೂ. ಪರಿಹಾರ ಘೋಷಣೆ

ಗುಜರಾತ್​​ನ ವಡೋದರಾದಲ್ಲಿ ಸೇತುವೆ ಕುಸಿತವಾಗಿ ವಾಹನಗಳು ನದಿಗೆ ಬಿದ್ದ ಹಿನ್ನೆಲೆಯಲ್ಲಿ 9 ಜನರು ಮೃತಪಟ್ಟಿದ್ದರು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. 'ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿದು ಸಂಭವಿಸಿದ ಸಾವು-ನೋವು ಬಹಳ ದುಃಖಕರವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು' ಎಂದು ಮೋದಿ ಹೇಳಿದ್ದಾರೆ.

ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ; 2 ಲಕ್ಷ ರೂ. ಪರಿಹಾರ ಘೋಷಣೆ
Narendra Modi
ಸುಷ್ಮಾ ಚಕ್ರೆ
|

Updated on: Jul 09, 2025 | 3:18 PM

Share

ನವದೆಹಲಿ, ಜುಲೈ 9: ಗುಜರಾತಿನ ವಡೋದರಾ (Vadodara) ಮತ್ತು ಆನಂದ್ ಅನ್ನು ಸಂಪರ್ಕಿಸುವ ಗಂಭೀರ ಸೇತುವೆಯ ಮಧ್ಯ ಭಾಗ ಕುಸಿದು ಇಂದು 9 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಅವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯನ್ನು ನೀಡಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿರುವ ಪ್ರಧಾನಿ ಮೋದಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. “ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿದು ಸಂಭವಿಸಿದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಪ್ರಧಾನಿ ಕಚೇರಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಭಾರೀ ಮಳೆ; ಸೇತುವೆ ಕೊಚ್ಚಿಹೋಗಿ ಯಮುನೋತ್ರಿ ಮಾರ್ಗ ಬಂದ್

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 4 ದಶಕಗಳಷ್ಟು ಹಳೆಯದಾದ ಸೇತುವೆಯ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಗುಜರಾತ್ ಅನ್ನು ರಾಜ್ಯದ ಸೌರಾಷ್ಟ್ರ ಪ್ರದೇಶಕ್ಕೆ ಸಂಪರ್ಕಿಸುವ ಮಹಿಸಾಗರ್ ನದಿಯ ಮೇಲಿರುವ ಗಂಭೀರ ಸೇತುವೆಯ ಸ್ಲ್ಯಾಬ್ ಕುಸಿದು 9 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ವಡೋದರಾ ಗ್ರಾಮೀಣ) ರೋಹನ್ ಆನಂದ್ ಖಚಿತಪಡಿಸಿದ್ದಾರೆ. ಈ ಸೇತುವೆ ಜಿಲ್ಲೆಯ ಪದ್ರಾ ಪಟ್ಟಣದ ಬಳಿ ಇತ್ತು.

“ಲಭ್ಯವಿರುವ ವಿವರಗಳ ಪ್ರಕಾರ, ಸುಮಾರು 9 ಜನರು ಸಾವನ್ನಪ್ಪಿದ್ದಾರೆ. ಇನ್ನೂ 9 ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಐವರನ್ನು ವಡೋದರಾದ ಎಸ್‌ಎಸ್‌ಜಿ ಆಸ್ಪತ್ರೆಗೆ ಕಳುಹಿಸಲಾಗಿದೆ. ರಕ್ಷಿಸಲ್ಪಟ್ಟ ಯಾರ ಸ್ಥಿತಿಯೂ ಗಂಭೀರವಾಗಿಲ್ಲ. ಅವರು ಅಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ” ಎಂದು ರೋಹನ್ ಆನಂದ್ ಪಿಟಿಐಗೆ ತಿಳಿಸಿದ್ದಾರೆ. ಬೆಳಿಗ್ಗೆ 7.30ರ ಸುಮಾರಿಗೆ ಸೇತುವೆಯ 10ರಿಂದ 15 ಮೀಟರ್ ಉದ್ದದ ಸ್ಲ್ಯಾಬ್ ಕುಸಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್​​ನಲ್ಲಿ ಸೇತುವೆ ಕುಸಿತ: ಭಯಾನಕ ದೃಶ್ಯ ನೋಡಿ

ಸೇತುವೆ ಕುಸಿದ ನಂತರ 5 ವಾಹನಗಳು, ಎರಡು ಟ್ರಕ್‌ಗಳು, ಎರಡು ವ್ಯಾನ್‌ಗಳು ಮತ್ತು ಒಂದು ಆಟೋರಿಕ್ಷಾ ನದಿಗೆ ಬಿದ್ದವು ಎಂದು ವಡೋದರಾ ಕಲೆಕ್ಟರ್ ಅನಿಲ್ ಧಮೇಲಿಯಾ ಹೇಳಿದರು. ಅಪಾಯಕಾರಿಯಾಗಿ ಬೀಳುವ ಸಮೀಪಕ್ಕೆ ಬಂದ ಇತರ ಎರಡು ವಾಹನಗಳನ್ನು ಸುರಕ್ಷಿತ ಸ್ಥಳಕ್ಕೆ ಎಳೆದೊಯ್ಯಲಾಯಿತು. ನದಿಗೆ ಬಿದ್ದ ದ್ವಿಚಕ್ರ ವಾಹನದಲ್ಲಿದ್ದ ಮೂವರು ಈಜಿಕೊಂಡು ಸುರಕ್ಷಿತವಾಗಿ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ