AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ; ಆಘಾತವಾಗಿದೆ ಎಂದ ರಾಹುಲ್ ಗಾಂಧಿ

ತಮಿಳುನಾಡು ಕಾಂಗ್ರೆಸ್ ನಾಯಕರು ತಮಿಳುನಾಡು ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ತಪ್ಪಿತಸ್ಥರನ್ನು ಶೀಘ್ರವಾಗಿ ನ್ಯಾಯದ ಮುಂದೆ ತರುವುದನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಆರು ಮಂದಿಯ ಗ್ಯಾಂಗ್ ಶುಕ್ರವಾರ ಚೆನ್ನೈನಲ್ಲಿ ಅವರ ಮನೆಯ ಸಮೀಪವೇ ಬರ್ಬರವಾಗಿ ಹತ್ಯೆ ಮಾಡಿತ್ತು.

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ; ಆಘಾತವಾಗಿದೆ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Jul 06, 2024 | 3:03 PM

Share

ದೆಹಲಿ ಜುಲೈ 06: ಚೆನ್ನೈನಲ್ಲಿ ಬಹುಜನ ಸಮಾಜ ಪಕ್ಷದ (BSP) ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ (Armstrong) ಅವರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ (LoP) ರಾಹುಲ್ ಗಾಂಧಿ (Rahul Gandhi) ಶನಿವಾರ ಹೇಳಿದ್ದಾರೆ. ಬಹುಜನ ಸಮಾಜ ಪಕ್ಷದ ತಮಿಳುನಾಡು ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಅವj ಹತ್ಯೆಯಿಂದ ತೀವ್ರ ಆಘಾತವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು” ಎಂದು ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ತಮಿಳುನಾಡಿನಲ್ಲಿರುವ ತಮ್ಮ ಪಕ್ಷದ ಘಟಕದ ನಾಯಕರು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ತಮಿಳುನಾಡು ಕಾಂಗ್ರೆಸ್ ನಾಯಕರು ತಮಿಳುನಾಡು ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ತಪ್ಪಿತಸ್ಥರನ್ನು ಶೀಘ್ರವಾಗಿ ನ್ಯಾಯದ ಮುಂದೆ ತರುವುದನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಆರು ಮಂದಿಯ ಗ್ಯಾಂಗ್ ಶುಕ್ರವಾರ ಚೆನ್ನೈನಲ್ಲಿ ಅವರ ಮನೆಯ ಸಮೀಪವೇ ಬರ್ಬರವಾಗಿ ಹತ್ಯೆ ಮಾಡಿತ್ತು.

ರಾಹುಲ್ ಟ್ವೀಟ್

ಚೆನ್ನೈ ಕಾರ್ಪೊರೇಷನ್‌ನ ಮಾಜಿ ಕೌನ್ಸಿಲರ್ ಆಗಿದ್ದ ಆರ್ಮ್‌ಸ್ಟ್ರಾಂಗ್ ಅವರ ಮೇಲೆ ಪೆರಂಬೂರ್‌ನಲ್ಲಿರುವ ಅವರ ಮನೆಯ ಸಮೀಪವೇ ದಾಳಿ ನಡೆಸಿದ ದುಷ್ಕರ್ಮಿಗಳ ತಂಡ ಪರಾರಿಯಾಗಿತ್ತು. ಆರ್ಮ್‌ಸ್ಟ್ರಾಂಗ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಎಂಟು ಶಂಕಿತರನ್ನು ಬಂಧಿಸಿದ್ದಾರೆ.

“ನಾವು ಇದುವರೆಗೆ ಎಂಟು ಶಂಕಿತರನ್ನು ಬಂಧಿಸಿದ್ದೇವೆ. ಇದು ಆರಂಭಿಕ ತನಿಖೆ, ಪ್ರಾಥಮಿಕ ತನಿಖೆ. ಆದ್ದರಿಂದ ಸ್ವಲ್ಪ ಸಮಯದ ನಂತರ, ಹೆಚ್ಚಿನ ಸಂಗತಿಗಳು ಮತ್ತು ಸಂದರ್ಭಗಳು ಬೆಳಕಿಗೆ ಬರುವುದರೊಂದಿಗೆ ಸ್ಪಷ್ಟ ಮತ್ತು ಉತ್ತಮ ಚಿತ್ರಣ ಹೊರಹೊಮ್ಮುತ್ತದೆ” ಎಂದು ಹೆಚ್ಚುವರಿ ಕಮಿಷನರ್ (ಉತ್ತರ) ಆಸ್ರಾ ಗಾರ್ಗ್ ಹೇಳಿದ್ದಾರೆ.

ಆರ್ಮ್‌ಸ್ಟ್ರಾಂಗ್ ಹತ್ಯೆಯ ಹಿಂದೆ ಕೆಲವು “ಎರಡರಿಂದ ಮೂರು ಅನುಮಾನಾಸ್ಪದ ಉದ್ದೇಶಗಳು” ಇವೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಶಂಕಿತರ ವಿಚಾರಣೆಯ ನಂತರವೇ ನಿಖರವಾದ ಕಾರಣ ಬೆಳಕಿಗೆ ಬರಲಿದೆ ಎಂದು ಗಾರ್ಗ್ ಹೇಳಿದರು.

ಇದನ್ನೂ ಓದಿ: Rahul Gandhi: ಅಯೋಧ್ಯೆಯಂತೆಯೇ ಗುಜರಾತ್‌ನಲ್ಲೂ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುತ್ತೇವೆ; ರಾಹುಲ್ ಗಾಂಧಿ ಸವಾಲು

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಆರ್ಮ್‌ಸ್ಟ್ರಾಂಗ್ ಹತ್ಯೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಮತ್ತು ಅಪರಾಧಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಆದೇಶಿಸಿರುವುದಾಗಿ ಹೇಳಿದ್ದಾರೆ. ದುಃಖತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ