AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Deepotsav 2021: ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ; ಸರಯೂ ನದಿ ತಟದಲ್ಲಿ ಬೆಳಗಲಿವೆ 9 ಲಕ್ಷ ಹಣತೆಗಳು

ಅಯೋಧ್ಯೆಯಲ್ಲಿ ದೀಪೋತ್ಸವ ನಿಮಿತ್ತ ಇಂದು ಶೋಭಾ ಯಾತ್ರೆ ಶುರುವಾಗಿದ್ದು ಉತ್ತರಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ ಚಾಲನೆ ನೀಡಿದ್ದಾರೆ. ಅವಧ್​ ಯೂನಿರ್ವಸಿಟಿಯ ವಿದ್ಯಾರ್ಥಿಗಳು ಅಯೋಧ್ಯೆಯಲ್ಲಿ ರಂಗೋಲಿಗಳನ್ನು ಹಾಕಿ ಸಂಭ್ರಮಿಸಿದ್ದಾರೆ.

Ayodhya Deepotsav 2021: ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ; ಸರಯೂ ನದಿ ತಟದಲ್ಲಿ ಬೆಳಗಲಿವೆ 9 ಲಕ್ಷ ಹಣತೆಗಳು
ದೀಪೋತ್ಸವಕ್ಕೆ ಆಗಮಿಸಿದ ರಾಮ-ಲಕ್ಷ್ಮಣ ಸೀತಾ ಪಾತ್ರಧಾರಿಗಳನ್ನು ಸ್ವಾಗತಿಸಿದ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Nov 03, 2021 | 4:41 PM

Share

ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ದೀಪೋತ್ಸವದ ಸಂಭ್ರಮ ಶುರುವಾಗಿದ್ದು, ಅದ್ದೂರಿಯಾಗಿ ಚಾಲನೆ ಸಿಕ್ಕಿದೆ.  ಈ ಬಾರಿ ರಾಜ್ಯದಲ್ಲಿ ಒಟ್ಟು 12 ಲಕ್ಷ ಹಣತೆಗಳನ್ನು ಬೆಳಗಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಸಿದ್ಧವಾಗಿದ್ದು, ಅದರಲ್ಲಿ 9 ಲಕ್ಷ ಮಣ್ಣಿನ ದೀಪಗಳನ್ನು ಸರಯೂ ನದಿ ತಟದಲ್ಲಿ ಬೆಳಗಲಾಗುವುದು ಎಂದು ಸರ್ಕಾರವೇ ಮಾಹಿತಿ ನೀಡಿದೆ. ಈ ಮೂಲಕ ಕಳೆದ ದೀಪಾವಳಿಗಿಂತಲೂ ಹೆಚ್ಚಿನ ದೀಪಗಳನ್ನು ಈ ಬಾರಿ ಹಚ್ಚಲಾಗುತ್ತಿದೆ.  

ದೀಪೋತ್ಸವ ನಿಮಿತ್ತ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪಟ್ಟಣದ ಹೊರವಲಯದಿಂದ ಒಳಗಿನ ವೃತ್ತದವರೆಗೆ ಒಟ್ಟು ಏಳುಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಅದರ ಹೊರತಾಗಿ ಕೂಡ ಪೊಲೀಸರು ಮಾರುವೇಷದಲ್ಲಿ ಅಂದರೆ ಸಮವಸ್ತ್ರವಿಲ್ಲದೆ ಅಯೋಧ್ಯೆಯಲ್ಲಿ ಗಸ್ತು ತಿರುಗುತ್ತಿದ್ದಾರೆ.  ಈ ಬಗ್ಗೆ ಅಯೋಧ್ಯೆ ಎಸ್​ಎಸ್​ಪಿ ಶೈಲೇಶ್​ ಪಾಂಡೆ ಮಾಹಿತಿ ನೀಡಿದ್ದಾರೆ.  ಕಳೆದ ವರ್ಷ ಒಟ್ಟು 5,84,572 ಹಣತೆಗಳನ್ನು ಸರಯೂ ನದಿ ತಟದಲ್ಲಿ ಬೆಳಗಲಾಗಿತ್ತು. ಅದು ಗಿನ್ನೀಸ್​ ದಾಖಲೆ ನಿರ್ಮಿಸಿತ್ತು. ಆದರೆ ಈ ಬಾರಿ ಆ ದಾಖಲೆಯನ್ನೂ ಮುರಿಯಲಾಗುತ್ತಿದೆ.

ಅಯೋದ್ಯೆಯಲ್ಲಿ ದೀಪೋತ್ಸವ ನಿಮಿತ್ತ ಶ್ರೀರಾಮಾಯಣ ಕಥೆಯನ್ನು ಪ್ರಸ್ತುತಪಡಿಸಲಾಗುವುದು. ತನ್ನಿಮಿತ್ತ ಭಗವಾನ್​ ರಾಮ, ಲಕ್ಷ್ಮಣ, ಸೀತಾ ದೇವಿ ಪಾತ್ರಧಾರಿಗಳು ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ಆಗಮಿಸಿದ್ದಾರೆ. ಈಗಾಗಲೇ ಇಲ್ಲಿಗೆ ಆಗಮಿಸಿರುವ ಸಿಎಂ ಆದಿತ್ಯನಾಥ್​, ಪಾತ್ರಧಾರಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದ್ದಾರೆ. ಹಾಗೇ ದೀಪೋತ್ಸವದ ಎಲ್ಲ ಸಿದ್ಧತೆಗಳನ್ನೂ ಪರಿಶೀಲನೆ ನಡೆಸಿದ್ದಾರೆ.

ಹಾಗೇ, ಅಯೋಧ್ಯೆಯಲ್ಲಿ ದೀಪೋತ್ಸವ ನಿಮಿತ್ತ ಇಂದು ಶೋಭಾ ಯಾತ್ರೆ ಶುರುವಾಗಿದ್ದು ಉತ್ತರಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ ಚಾಲನೆ ನೀಡಿದ್ದಾರೆ. ಅವಧ್​ ಯೂನಿರ್ವಸಿಟಿಯ ವಿದ್ಯಾರ್ಥಿಗಳು ಅಯೋಧ್ಯೆಯಲ್ಲಿ ರಂಗೋಲಿಗಳನ್ನು ಹಾಕಿ ಸಂಭ್ರಮಿಸಿದ್ದಾರೆ.  ಅದಕ್ಕೂ ಪೂರ್ವ  ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ ಸಿಎಂ ಯೋಗಿ, ಈ ಬಾರಿ ಬಡಕುಟುಂಬದವರೊಂದಿಗೆ ಹಬ್ಬ ಆಚರಣೆ ಮಾಡುವಂತೆ ಕರೆ ನೀಡಿದ್ದಾರೆ. ಬಡಕುಟುಂಬಗಳಿಗೂ ಸಿಹಿ, ಹಂಚಿ ಅವರೊಂದಿಗೆ ದೀಪ ಬೆಳಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಫಿಸಿಯೊಥೆರಪಿಗೆ ಬಂದಾಗ ಪುನೀತ್ ರಾಜಕುಮಾರ್​ಗೆ ಹೃದಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರಲಿಲ: ಪಳನಿವೇಲ್, ಫಿಸಿಯೊಥೆರಪಿಸ್ಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!