AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ

Ayodhya witness grand deepotsav with 2 new Guinness records been made: ಅಯೋಧ್ಯೆಯಲ್ಲಿ ಈ ಬಾರಿ ಸಾವಿರಾರು ಜನರು ಉತ್ಸಾಹದಿಂದ ದೀಪಾರತಿ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಅಯೋಧ್ಯೆಯ ವಿವಿಧ ಘಾಟ್​ಗಳಲ್ಲಿ ಉದ್ದಕ್ಕೂ ಅತಿಹೆಚ್ಚು ದೀಪಗಳನ್ನು ಇಡಲಾಗಿದೆ. ಅತಿಹೆಚ್ಚು ಜನರು ದೀಪಾರತಿ ಮಾಡಿದ್ದಾರೆ. ಈ ಎರಡು ಗಿನ್ನೆಸ್ ವಿಶ್ವದಾಖಲೆಗಳು ಅಧಿಕೃತವಾಗಿ ನಿರ್ಮಾಣವಾಗಿವೆ.

ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ
ದೀಪೋತ್ಸವ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 19, 2025 | 8:22 PM

Share

ನವದೆಹಲಿ, ಅಕ್ಟೋಬರ್ 19: ಉತ್ತರಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ದೀಪಾವಳಿ (Deepavali) ಹಬ್ಬದ ಪ್ರಯುಕ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ವೇಳೆ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್​ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಹಾಗೂ ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ಸ್ಥಾಪನೆಯಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್​​ನಿಂದ (Guinness world records) ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ಕೊಡಲಾಗಿದೆ.

ಅಯೋಧ್ಯೆ ದೀಪೋತ್ಸವದ ಮೆರಗು

ಅಯೋಧ್ಯೆಯಲ್ಲಿ ಪ್ರತೀ ವರ್ಷ ದೀಪೋತ್ಸವ ಆಚರಿಸಲಾಗುತ್ತಿದೆ. ಮರ್ಯಾದಾ ಪುರುಷೋತ್ತಮ ರಾಮ 14 ವರ್ಷ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ್ದ ನೆನಪಿನಲ್ಲಿ ದೀಪೋತ್ಸವ ಆಚರಿಸಲಾಗುತ್ತದೆ. ಈ ಬಾರಿ ಅಯೋಧ್ಯೆಯ ಘಾಟ್​ಗಳಾದ್ಯಂತ 26,17,215 (ಬರೋಬ್ಬರಿ 26 ಲಕ್ಷಕ್ಕೂ ಅಧಿಕ) ದೀಪಗಳನ್ನು ಹಚ್ಚಲಾಯಿತು.

ಇದನ್ನೂ ಓದಿ: ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಹೋಗಿ ವಾಪಸಾದ ಅರ್ಜಿತ್ ಚೌಬೆ

ಹಲವಾರು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸ್ವಯಂಸೇವಕರು ಬಂದು ದೀಪಾರತಿಯಲ್ಲಿ ಭಾಗವಹಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ದೀಪಾರತಿಯ ಹಲವು ವಿಡಿಯೋಗಳು ಶೇರ್ ಆಗುತ್ತಿವೆ.

ಸಾಕಷ್ಟು ಸಂಖ್ಯೆಯಲ್ಲಿ ಸ್ವಯಂಸೇವಕರು ದೀಪಕ್ಕೆ ಎಣ್ಣೆ ಮತ್ತು ಬತ್ತಿಯನ್ನು ಹಾಕಿ ಘಾಟ್​ಗಳ ಉದ್ದಕ್ಕೂ ವಿಶೇಷ ಮಾದರಿಯಲ್ಲಿ ಇಟ್ಟಿದ್ದಾರೆ. ವಿಶ್ವದಾಖಲೆ ಸ್ಥಾಪನೆಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್​ನ ಪ್ರತಿನಿಧಿ ರಿಚರ್ಡ್ ಸ್ಟೆನ್ನಿಂಗ್ ಬಂದಿದ್ದರು. ದೀಪ ಇಡುವ ಪ್ರತಿಯೊಬ್ಬ ವ್ಯಕ್ತಿಯ ಪ್ರವೇಶವನ್ನು ದಾಖಲಿಸಲು ಕ್ಯೂಆರ್ ಕೋಡ್ ಅನ್ನು ಬಳಸಲಾಯಿತು. ಪ್ರತೀ ವಲಯವನ್ನೂ ಎಚ್ಚರಿಕೆಯಿಂದ ಗಮಿಸಲಾಯಿತು ಎಂದು ರಿಚರ್ಡ್ ಸ್ಟೆನ್ನಿಂಗ್ ಮಾಹಿತಿ ನೀಡಿದರು.

ಇದನ್ನೂ ಓದಿ: ಡಿಸ್ಕ್ ಕಟ್ಟರ್ ಹಿಡಿದು ಮ್ಯೂಸಿಯಂಗೆ ನುಗ್ಗಿದ ಖದೀಮರು; ನೆಪೋಲಿಯನ್ ಕಾಲದ ಆಭರಣ ದೋಚಿದ ಕಳ್ಳರು

ಹಣತೆ ಹಚ್ಚಲು ಹಣ ವೆಚ್ಚ ಯಾಕೆ ಎಂದಿದ್ದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅಯೋಧ್ಯೆಯ ದೀಪಾರತಿ ಉತ್ಸವವನ್ನು ಟೀಕಿಸಿ ಬಿಜೆಪಿಯ ದಾಳಿಗೆ ಹೊಸ ಅಸ್ತ್ರ ಕೊಟ್ಟಿದ್ದಾರೆ. ದೀಪ ಮತ್ತು ಕ್ಯಾಂಡಲ್​ಗಳನ್ನು ಹಚ್ಚಲು ಇಷ್ಟು ಹಣ ವ್ಯಯ ಮಾಡುವುದು ಯಾಕೆ ಎಂದು ಅಖಿಲೇಶ್ ಯಾದವ್ ಟೀಕಿಸಿದ್ದರು.

ಬಿಜೆಪಿ ನಾಯಕರು ಅಖಿಲೇಶ್ ಅವರ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಮಾಜವಾದಿ ಪಕ್ಷಕ್ಕೆ ರಾಮಮಂದಿರ ಆಂದೋಲನ ಹತ್ತಿಕ್ಕುವ ಮತ್ತು ಹಿಂದೂ ವಿರೋಧಿ ಭಾವನೆಯನ್ನು ಪ್ರಚುರಪಡಿಸುವ ಪರಂಪರೆಯೇ ಇದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ