AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಜ್ರಿವಾಲ್ ಕರಾಳ ಯೋಜನೆಗಳಿಗೆ ಸೋಲು, ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ: ಧರ್ಮೇಂದ್ರ ಪ್ರಧಾನ್

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವ ದೆಹಲಿ ಸರ್ಕಾರದ ಕರಾಳ ಯೋಜನೆಗಳನ್ನು ಸದನದಲ್ಲಿ ಸೋಲಿಸಲಾಗಿದೆ. ದೆಹಲಿ ಸೇವಾ ಮಸೂದೆಯನ್ನು ರಾಜ್ಯಸಭೆಯಲ್ಲೂ ಅಂಗೀಕರಿಸಿದ ಕೇಂದ್ರ ಸರ್ಕಾರ.

ಕೇಜ್ರಿವಾಲ್ ಕರಾಳ ಯೋಜನೆಗಳಿಗೆ ಸೋಲು, ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ಅಕ್ಷಯ್​ ಪಲ್ಲಮಜಲು​​
|

Updated on:Aug 08, 2023 | 2:53 PM

Share

ದೆಹಲಿ, ಆ.8: ಲೋಕಸಭೆಯಲ್ಲಿ ಅಂಗೀಕರವಾದ ದೆಹಲಿ ಸೇವಾ ಮಸೂದೆಯನ್ನು (Delhi Service Bill) ರಾಜ್ಯಸಭೆಯಲ್ಲೂ ಅಂಗೀಕರಿಸಿದ ಬಳಿಕ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ರಾಷ್ಟ್ರ ರಾಜಧಾನಿಯ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವ ದೆಹಲಿ ಸರ್ಕಾರದ ಕರಾಳ ಯೋಜನೆಗಳನ್ನು ಸದನದಲ್ಲಿ ಸೋಲಿಸಲಾಗಿದೆ ಎಂದು ಟ್ವೀಟ್​​ ಮೂಲಕ ತಿಳಿಸಿದ್ದಾರೆ.

ದೆಹಲಿ ಸೇವಾ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾದ ಬಳಿಕ ರಾಜ್ಯಸಭೆಯಿಂದಲೂ ಅಂಗೀಕರಿಸಲಾಯಿತು. ಈ ಮಸೂದೆಯು ದೆಹಲಿಯ ಪ್ರಗತಿಯನ್ನು ಮತ್ತು ರಾಷ್ಟ್ರ ರಾಜಧಾನಿ ಜನರ ಶಕ್ತಿಯನ್ನು ಹೆಚ್ಚಿಸಿದೆ. ಹಗರಣಗಳಲ್ಲಿ ಮುಳುಗಿದ ದೆಹಲಿ ಸರ್ಕಾರ ಜನರ ಹಕ್ಕುಗಳನ್ನು ಕಿತ್ತುಕೊಂಡಿತ್ತು. ಲೂಟಿ ಮಾಡಿ ಕೋಟಿಗಟ್ಟಲೆ ಬೆಲೆಬಾಳುವ ಭವನವನ್ನು ಕಟ್ಟಿಕೊಂಡ ಕೇಜ್ರಿವಾಲ್ ಸರ್ಕಾರದ ಕರಾಳ ಯೋಜನೆಗಳಿಗೆ ಸದನದಲ್ಲಿ ಸೋಲಾಗಿದೆ. ದೆಹಲಿಯ ಜನತೆಗೆ ಅಭಿನಂದನೆಗಳು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಸರಣಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ದೇಶದ ಇತಿಹಾಸದಲ್ಲಿ ಕರಾಳ ದಿನ; ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆಗೆ ಕೇಜ್ರಿವಾಲ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ಅವರ ಮತ್ತೊಂದು ಟ್ವೀಟ್‌ನಲ್ಲಿ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಅಮಿತ್​​ ಶಾ ಅವರ ಈ ಭಾಷಣದಲ್ಲಿ ದೆಹಲಿ ಸೇವಾ ಮಸೂದೆ ಬಗ್ಗೆ ಮಾತ್ರವಲ್ಲದೆ ಮಣಿಪುರ ವಿಷಯದಲ್ಲಿ ಪ್ರತಿಪಕ್ಷಗಳ ಸುಳ್ಳು ಮತ್ತು ವಂಚನೆಯನ್ನು ಬಹಿರಂಗಪಡಿಸಲಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಸೇವಾ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ

ಲೋಕಸಭೆಯು ಬಹುಚರ್ಚಿತ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ 2023ನ್ನು ಅಂಗೀಕರಿಸಿದ ಒಂದು ವಾರದ ನಂತರ, ರಾಜ್ಯಸಭೆಯು ಶಾಸನಕ್ಕೆ ದಾರಿ ಮಾಡಿಕೊಟ್ಟಿತು. 131 ಮತಗಳು ಮಸೂದೆಗೆ ಒಪ್ಪಿಗೆ ನೀಡಿದರೆ, 102 ಸಂಸದರು ಶಾಸನದ ವಿರುದ್ಧ ಮತ ಚಲಾಯಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 am, Tue, 8 August 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ