AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಾಮರ್ಥ್ಯ ಬಲಗೊಳಿಸಲು 7965 ಕೋಟಿ ರೂ.ಮೌಲ್ಯದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮೋದನೆ

ರಕ್ಷಣಾ ಸ್ವಾಧೀನ ಮಂಡಳಿಯ (DAC)ಸಭೆಯಲ್ಲಿ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ.  12 ಹೆಲಿಕಾಪ್ಟರ್​ಗಳ ಖರೀದಿಗೆ ಒಪ್ಪಿಗೆ ನೀಡಿರುವ ಜತೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು 2 ನೇವಲ್ ಗನ್‌ಫೈರ್ ಕಂಟ್ರೋಲ್​ ಸಿಸ್ಟಂ ಖರೀದಿಗೂ ಇದೀಗ ಅನುಮೋದನೆ ಸಿಕ್ಕಿದೆ.

ಮಿಲಿಟರಿ ಸಾಮರ್ಥ್ಯ ಬಲಗೊಳಿಸಲು 7965 ಕೋಟಿ ರೂ.ಮೌಲ್ಯದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮೋದನೆ
ರಾಜನಾಥ್ ಸಿಂಗ್​
TV9 Web
| Edited By: |

Updated on:Nov 03, 2021 | 3:20 PM

Share

ಮೇಕ್​ ಇನ್​ ಇಂಡಿಯಾ ಅಭಿಯಾನದಡಿ 7965 ಕೋಟಿ ರೂಪಾಯಿ ಮೌಲ್ಯದ ಸಶಸ್ತ್ರ ಮತ್ತು ಮಿಲಿಟರಿ ಉಪಕರಣಗಳು ಮತ್ತು ಸೇನಾ ಹೆಲಿಕಾಪ್ಟರ್​​ಗಳನ್ನು ಖರೀದಿ ಮಾಡಲು ಕೇಂದ್ರ ರಕ್ಷಣಾ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ. ಹಿಂದೂಸ್ತಾನ್​ ಎರೋನಾಟಿಕ್ಸ್​ ಲಿಮಿಟೆಡ್​​​ ನಿಂದ 12 ಲೈಟ್​ ಯುಟಿಲಿಟಿ ಹೆಲಿಕಾಪ್ಟರ್​​​ಗಳ ಖರೀದಿಯನ್ನೂ ಈ ಅನುಮೋದನೆ ಒಳಗೊಂಡಿದೆ.  

ರಕ್ಷಣಾ ಸ್ವಾಧೀನ ಮಂಡಳಿಯ (DAC)ಸಭೆಯಲ್ಲಿ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ.  12 ಹೆಲಿಕಾಪ್ಟರ್​ಗಳ ಖರೀದಿಗೆ ಒಪ್ಪಿಗೆ ನೀಡಿರುವ ಜತೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು 2 ನೇವಲ್ ಗನ್‌ಫೈರ್ ಕಂಟ್ರೋಲ್​ ಸಿಸ್ಟಂ ಖರೀದಿಗೂ ಇದೀಗ ಅನುಮೋದನೆ ಸಿಕ್ಕಿದೆ. ಈ ನೌಕಾ ಗನ್​ಫೈರ್​ಗಳು  ನೌಕಾ ಹಡಗುಗಳ ಟ್ರ್ಯಾಕಿಂಗ್​ ಮತ್ತು ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಎಂದು ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದಹಾಗೆ ರಕ್ಷಣಾ ಸ್ವಾಧೀನ ಮಂಡಳಿ ಸಭೆ ನವೆಂಬರ್​ 2ರಂದು, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅಧ್ಯಕ್ಷತೆಯಲ್ಲಿ ನಡೆದಿತ್ತು. ಈ ಪ್ರಸ್ತಾವನೆ ಸಂಪೂರ್ಣವಾಗಿ ಮೇಕ್​ ಇನ್​ ಇಂಡಿಯಾ ಯೋಜನೆಯಡಿ ಇದೆ. ಭಾರತದಲ್ಲಿಯೇ ತಯಾರಾದ, ವಿನ್ಯಾಸಗೊಂಡ ಮತ್ತು ಅಭಿವೃದ್ಧಿಗೊಂಡಿರುವ ಮಿಲಿಟರಿ ಉಪಕರಣಗಳ ಖರೀದಿಯೇ ಆದ್ಯತೆಯಾಗಲಿದೆ.

ಇದನ್ನೂ ಓದಿ: ಕೋಲಾರ: ಸ್ಮಶಾನ ಹಬ್ಬ; ಸಕಲ ಸಂತರ ದಿನದ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಕೆಜಿಎಫ್

ಕಲಬುರಗಿ ಜಿಲ್ಲೆಯ ವಿವಿಧೆಡೆ ನಡೆದ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವು

Published On - 3:18 pm, Wed, 3 November 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ