AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿ ಸೇವೆಗಳ ಜಂಟಿ ಥಿಯೇಟರ್ ಕಮಾಂಡ್‌ಗಳ ಸ್ಥಾಪನೆ: ರಾಜನಾಥ್ ಸಿಂಗ್ ಘೋಷಣೆ

ಹುತಾತ್ಮರಿಗೆ ನಮನ ಸಲ್ಲಿಸಿದ ಸಿಂಗ್, ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಅವರ ಅತ್ಯುನ್ನತ ತ್ಯಾಗವನ್ನು ದೇಶವು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ತ್ರಿ ಸೇವೆಗಳ ಜಂಟಿ ಥಿಯೇಟರ್ ಕಮಾಂಡ್‌ಗಳ ಸ್ಥಾಪನೆ: ರಾಜನಾಥ್ ಸಿಂಗ್ ಘೋಷಣೆ
ರಾಜನಾಥ ಸಿಂಗ್
TV9 Web
| Edited By: |

Updated on:Jul 24, 2022 | 8:20 PM

Share

ಸಶಸ್ತ್ರ ಪಡೆಗಳ (Armed forces)ನಡುವೆ ಸಮನ್ವಯವನ್ನು ಹೆಚ್ಚಿಸುವುದಕ್ಕಾಗಿ ತ್ರಿ-ಸೇವೆಗಳ ಜಂಟಿ ಥಿಯೇಟರ್ ಕಮಾಂಡ್‌ಗಳನ್ನು ಸ್ಥಾಪಿಸುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ ಘೋಷಿಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಜಮ್ಮುನಲ್ಲಿ ಜಮ್ಮು ಕಾಶ್ಮೀರ್ ಪೀಪಲ್ಸ್ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಗ್ ಈ ಘೋಷಣೆ ಮಾಡಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. “ಕಾರ್ಗಿಲ್‌ನಲ್ಲಿ ಆಪರೇಷನ್ ವಿಜಯ್‌ನಲ್ಲಿ ಮಾಡಿದಂತೆ ಜಂಟಿ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿ  ಜಂಟಿ ಥಿಯೇಟರ್ ಕಮಾಂಡ್‌ಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ” ಎಂದು ಸಿಂಗ್ ಹೇಳಿದರು.  ಜೂನ್ 2021 ರಲ್ಲಿ, ಥಿಯೇಟರೀಕರಣದ ಯೋಜನೆಗಳನ್ನು ಉತ್ತಮಗೊಳಿಸಲು ಮತ್ತು ಹೊಸ ಜಂಟಿ ರಚನೆಗಳ ತ್ವರಿತ ಆರಂಭಕ್ಕಾಗಿ ಎಲ್ಲಾ ಪಾಲುದಾರರನ್ನು ಅದರಲ್ಲೂ ವಿಶೇಷವಾಗಿ ಭಾರತೀಯ ವಾಯುಪಡೆಯನ್ನು ಮಂಡಳಿಯಲ್ಲಿ ತರಲು ಸರ್ಕಾರವು ಎಂಟು ಸದಸ್ಯರ ಸಮಿತಿಯನ್ನು ರಚಿಸಿತು.

ಭಾರತೀಯ ಸೇನೆಯ ಥಿಯೇಟರೈಸೇಶನ್ ಮಾದರಿ, ಬಹುನಿರೀಕ್ಷಿತ ಸುಧಾರಣೆ, ಪರಿವರ್ತನೆಯ ಹಂತದಲ್ಲಿ ಯಾವುದೇ ಅನಿಶ್ಚಿತತೆಯನ್ನು ಎದುರಿಸಲು ಪ್ರಸ್ತುತ ಕಮಾಂಡ್ ಮತ್ತು ಕಂಟ್ರೋಲ್ ರಚನೆಗಳಿಗೆ ಹಿಂತಿರುಗಲು ಅಂತರ್ಗತ ನಮ್ಯತೆಯನ್ನು ಹೊಂದಿರುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಥಿಯೇಟರ್ ಕಮಾಂಡ್‌ಗಳ ಸ್ಥಿರೀಕರಣವು ಐದು ವರ್ಷಗಳವರೆಗೆ ತೆಗೆದುಕೊಳ್ಳಬಹುದು. ಪುನರ್ರಚನೆ ನಡೆಯುತ್ತಿರುವಾಗ ಬಿಕ್ಕಟ್ಟು ಉಂಟಾದರೆ ಥಿಯೇಟರೀಕರಣದ ಪೂರ್ವದ ಸ್ಥಿತಿಗೆ ತ್ವರಿತವಾಗಿ ಮರಳಲು ಯಾಂತ್ರಿಕ ವ್ಯವಸ್ಥೆ ಇದೆ ಎಂದು ಖಚಿತಪಡಿಸಿಕೊಳ್ಳುವುದು ನಿರ್ಣಾಯಕವಾಗಿದೆ.

ಹುತಾತ್ಮರಿಗೆ ನಮನ ಸಲ್ಲಿಸಿದ ಸಿಂಗ್, ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಅವರ ಅತ್ಯುನ್ನತ ತ್ಯಾಗವನ್ನು ದೇಶವು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. “ನೀವು ನೀಡಬಹುದಾದ ಯಾವುದೇ ಬೆಂಬಲವನ್ನು ಅವರ ಕುಟುಂಬಗಳಿಗೆ ಮಾಡಿ. ಇದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದರು.

ಭಾರತವು ವಿಶ್ವದ ಅತಿದೊಡ್ಡ ರಕ್ಷಣಾ ಸಾಧನಗಳನ್ನು ಆಮದು ಮಾಡಿಕೊಳ್ಳುವ ದೇಶದಿಂದ ರಫ್ತುದಾರರಾಗುವತ್ತ ವೇಗವಾಗಿ ಚಲಿಸುತ್ತಿದೆ ಎಂದು ರಕ್ಷಣಾ ಸಚಿವರು ಹೇಳಿದರು. “ಭಾರತವು ವಿಶ್ವದ ಅತಿದೊಡ್ಡ ರಕ್ಷಣಾ ಉತ್ಪನ್ನಗಳ ಆಮದುದಾರ ಆಗಿತ್ತು. ಇಂದು, ಭಾರತವು ವಿಶ್ವದ ಅತಿದೊಡ್ಡ ಆಮದುದಾರನಲ್ಲ. ಆದರೆ ರಕ್ಷಣಾ ಉತ್ಪನ್ನಗಳ ರಫ್ತುಗಳಲ್ಲಿ ತೊಡಗಿರುವ ಅಗ್ರ 25 ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ. ದೇಶವು ₹ 13,000 ಕೋಟಿ ಮೌಲ್ಯದ ರಕ್ಷಣಾ ರಫ್ತುಗಳನ್ನು ಪ್ರಾರಂಭಿಸಿದೆ. 2025-26 ರ ವೇಳೆಗೆ ಅದನ್ನು ₹ 35,000 ರಿಂದ ₹ 40,000 ಕೋಟಿಗೆ ಹೆಚ್ಚಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಂಗ್ ಹೇಳಿದರು.

Published On - 8:17 pm, Sun, 24 July 22

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ