AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರ ಪೂಜಿಸುವ ಏಕೈಕ ದೇಶ ನಮ್ಮದು, ದೇಶ ಸುರಕ್ಷಿತ ಕೈಗಳಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Rajnath Singh: ವಿಡಿಯೋದಲ್ಲಿ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸಮ್ಮುಖದಲ್ಲಿ ಮಂತ್ರಗಳ ಪಠಣಗಳ ನಡುವೆ ಧಾರ್ಮಿಕ ಕ್ರಿಯೆಗಳನ್ನು ನಡೆಸುತ್ತಿರುವುದನ್ನು ತೋರಿಸಿದೆ. ಮತ್ತೊಂದು ಕ್ಲಿಪ್ ಸೈನಿಕರು ದೇಶಭಕ್ತಿ ಗೀತೆಗಳನ್ನು ಹಾಡುವುದನ್ನು ತೋರಿಸಿದೆ.

ಶಸ್ತ್ರ ಪೂಜಿಸುವ ಏಕೈಕ ದೇಶ ನಮ್ಮದು, ದೇಶ ಸುರಕ್ಷಿತ ಕೈಗಳಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಚಮೋಲಿಯಲ್ಲಿ ಯೋಧರೊಂದಿಗೆ ದಸರಾ ಆಚರಣೆ, ಶಸ್ತ್ರಾಸ್ತ್ರಗಳಿಗೆ ಪೂಜೆ- ‘ದೇಶ ಸುರಕ್ಷಿತವಾದ ಕೈಯಲ್ಲಿದೆ’ ಎಂದರು
TV9 Web
| Edited By: |

Updated on: Oct 05, 2022 | 11:56 AM

Share

ಉತ್ತರಾಖಂಡ್ (Uttarakhand)​​ ರಾಜ್ಯದ ಚಮೋಲಿಯಲ್ಲಿ ಸೇನೆಯಿಂದ ಆಯುಧ ಪೂಜೆ ಆಚರಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು (Defense Minister Rajnath Singh) ಯೋಧರೊಂದಿಗೆ ದಸರಾ ಆಚರಿಸಿದ್ದಾರೆ. ವಿಜಯದಶಮಿ ಹಿನ್ನೆಲೆ ಯೋಧರು ಸಾಮೂಹಿಕವಾಗಿ ಸೇನಾ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಲಾಗಿದೆ (Shastra Puja).

ಈ ವೇಳೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶಸ್ತ್ರಾಸ್ತ್ರ ಆಯುಧ ಪೂಜೆ ಮಾಡುವ ಏಕೈಕ ದೇಶ ಭಾರತ. ನಮ್ಮ ದೇಶವು ನಮ್ಮ ಸಶಸ್ತ್ರ ಪಡೆಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದು ನಮಗೆ ವಿಶ್ವಾಸವಿದೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳ ಯೋಧರು ನಮ್ಮ ದೇಶದ ಹೆಮ್ಮೆ ಎಂದು ಅವರು ಹೇಳಿದರು.

ಸುದ್ದಿ ಸಂಸ್ಥೆ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸಮ್ಮುಖದಲ್ಲಿ ಮಂತ್ರಗಳ ಪಠಣಗಳ ನಡುವೆ ಧಾರ್ಮಿಕ ಕ್ರಿಯೆಗಳನ್ನು ನಡೆಸುತ್ತಿರುವುದನ್ನು ತೋರಿಸಿದೆ. ಮತ್ತೊಂದು ಕ್ಲಿಪ್ ಸೈನಿಕರು ದೇಶಭಕ್ತಿ ಗೀತೆಗಳನ್ನು ಹಾಡುವುದನ್ನು ತೋರಿಸಿದೆ.

ನಿನ್ನೆ ಮಂಗಳವಾರವೇ ಉತ್ತರಾಖಂಡ್ ಗೆ ಆಗಮಿಸಿರುವ ರಾಜನಾಥ್ ಸಿಂಗ್ 2 ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ. ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್​ನಲ್ಲಿಯೂ ಸೇನಾವತಿಯಿಂದ ಆಯುಧ ಪೂಜೆ ನಡೆದಿದೆ. ರಾಜನಾಥ್ ಸಿಂಗ್ ಅವರು ದೇಶದ ರಕ್ಷಣಾ ಸಚಿವರಾದಾಗಿನಿಂದಲೂ ಪ್ರತಿ ವರ್ಷ ವಿಜಯದಶಮಿ ದಿನದಂದು ಯೋಧರ ಜೊತೆ ಸಮಯ ಕಳೆಯುತ್ತಾರೆ. ಅವರೊಂದಿಗೆ ಬೆರೆತು ಮಾತುಕತೆ ನಡೆಸುತ್ತಾರೆ. ಈ ವೇಳೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ಪೂಜೆ ನಡೆಯುತ್ತದೆ. ಇನ್ನು ಚೀನಾ ಗಡಿಗೆ ಹೊಂದಿಕೊಂಡಿರುವ ಅವಲಿ ಮತ್ತು ಮನಾ ಗ್ರಾಮಗಳಿಗೆ ತೆರಳಿ ಯೋಧರ ಜೊತೆ ಸಂವಾದ ನಡೆಸಿದ್ದಾರೆ.

ಗಮನಾರ್ಹವೆಂದರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಳೆದ ವರ್ಷ ಕೋವಿಡ್ ನಿರ್ಬಂಧದ ಮಧ್ಯೆ ದಸರಾ ಆಯುಧ ಪೂಜೆಯನ್ನು ದೆಹಲಿಯಲ್ಲಿ ಡಿಆರ್​ಡಿಒ ಸಂಸ್ಥೆಯಲ್ಲಿ (Defense Research and Development Organization -DRDO) ಕಟ್ಟುನಿಟ್ಟಾಗಿ ಆಚರಿಸಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್​ ಜಾಲತಾಣ ವರದಿ ಮಾಡಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ