AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರ ಪೂಜಿಸುವ ಏಕೈಕ ದೇಶ ನಮ್ಮದು, ದೇಶ ಸುರಕ್ಷಿತ ಕೈಗಳಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Rajnath Singh: ವಿಡಿಯೋದಲ್ಲಿ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸಮ್ಮುಖದಲ್ಲಿ ಮಂತ್ರಗಳ ಪಠಣಗಳ ನಡುವೆ ಧಾರ್ಮಿಕ ಕ್ರಿಯೆಗಳನ್ನು ನಡೆಸುತ್ತಿರುವುದನ್ನು ತೋರಿಸಿದೆ. ಮತ್ತೊಂದು ಕ್ಲಿಪ್ ಸೈನಿಕರು ದೇಶಭಕ್ತಿ ಗೀತೆಗಳನ್ನು ಹಾಡುವುದನ್ನು ತೋರಿಸಿದೆ.

ಶಸ್ತ್ರ ಪೂಜಿಸುವ ಏಕೈಕ ದೇಶ ನಮ್ಮದು, ದೇಶ ಸುರಕ್ಷಿತ ಕೈಗಳಲ್ಲಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಚಮೋಲಿಯಲ್ಲಿ ಯೋಧರೊಂದಿಗೆ ದಸರಾ ಆಚರಣೆ, ಶಸ್ತ್ರಾಸ್ತ್ರಗಳಿಗೆ ಪೂಜೆ- ‘ದೇಶ ಸುರಕ್ಷಿತವಾದ ಕೈಯಲ್ಲಿದೆ’ ಎಂದರು
TV9 Web
| Edited By: |

Updated on: Oct 05, 2022 | 11:56 AM

Share

ಉತ್ತರಾಖಂಡ್ (Uttarakhand)​​ ರಾಜ್ಯದ ಚಮೋಲಿಯಲ್ಲಿ ಸೇನೆಯಿಂದ ಆಯುಧ ಪೂಜೆ ಆಚರಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು (Defense Minister Rajnath Singh) ಯೋಧರೊಂದಿಗೆ ದಸರಾ ಆಚರಿಸಿದ್ದಾರೆ. ವಿಜಯದಶಮಿ ಹಿನ್ನೆಲೆ ಯೋಧರು ಸಾಮೂಹಿಕವಾಗಿ ಸೇನಾ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಲಾಗಿದೆ (Shastra Puja).

ಈ ವೇಳೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶಸ್ತ್ರಾಸ್ತ್ರ ಆಯುಧ ಪೂಜೆ ಮಾಡುವ ಏಕೈಕ ದೇಶ ಭಾರತ. ನಮ್ಮ ದೇಶವು ನಮ್ಮ ಸಶಸ್ತ್ರ ಪಡೆಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದು ನಮಗೆ ವಿಶ್ವಾಸವಿದೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳ ಯೋಧರು ನಮ್ಮ ದೇಶದ ಹೆಮ್ಮೆ ಎಂದು ಅವರು ಹೇಳಿದರು.

ಸುದ್ದಿ ಸಂಸ್ಥೆ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ರಾಜನಾಥ್ ಸಿಂಗ್ ಅವರು ಸಶಸ್ತ್ರ ಪಡೆಗಳ ಸಮ್ಮುಖದಲ್ಲಿ ಮಂತ್ರಗಳ ಪಠಣಗಳ ನಡುವೆ ಧಾರ್ಮಿಕ ಕ್ರಿಯೆಗಳನ್ನು ನಡೆಸುತ್ತಿರುವುದನ್ನು ತೋರಿಸಿದೆ. ಮತ್ತೊಂದು ಕ್ಲಿಪ್ ಸೈನಿಕರು ದೇಶಭಕ್ತಿ ಗೀತೆಗಳನ್ನು ಹಾಡುವುದನ್ನು ತೋರಿಸಿದೆ.

ನಿನ್ನೆ ಮಂಗಳವಾರವೇ ಉತ್ತರಾಖಂಡ್ ಗೆ ಆಗಮಿಸಿರುವ ರಾಜನಾಥ್ ಸಿಂಗ್ 2 ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ. ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್​ನಲ್ಲಿಯೂ ಸೇನಾವತಿಯಿಂದ ಆಯುಧ ಪೂಜೆ ನಡೆದಿದೆ. ರಾಜನಾಥ್ ಸಿಂಗ್ ಅವರು ದೇಶದ ರಕ್ಷಣಾ ಸಚಿವರಾದಾಗಿನಿಂದಲೂ ಪ್ರತಿ ವರ್ಷ ವಿಜಯದಶಮಿ ದಿನದಂದು ಯೋಧರ ಜೊತೆ ಸಮಯ ಕಳೆಯುತ್ತಾರೆ. ಅವರೊಂದಿಗೆ ಬೆರೆತು ಮಾತುಕತೆ ನಡೆಸುತ್ತಾರೆ. ಈ ವೇಳೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಗೆ ಪೂಜೆ ನಡೆಯುತ್ತದೆ. ಇನ್ನು ಚೀನಾ ಗಡಿಗೆ ಹೊಂದಿಕೊಂಡಿರುವ ಅವಲಿ ಮತ್ತು ಮನಾ ಗ್ರಾಮಗಳಿಗೆ ತೆರಳಿ ಯೋಧರ ಜೊತೆ ಸಂವಾದ ನಡೆಸಿದ್ದಾರೆ.

ಗಮನಾರ್ಹವೆಂದರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಳೆದ ವರ್ಷ ಕೋವಿಡ್ ನಿರ್ಬಂಧದ ಮಧ್ಯೆ ದಸರಾ ಆಯುಧ ಪೂಜೆಯನ್ನು ದೆಹಲಿಯಲ್ಲಿ ಡಿಆರ್​ಡಿಒ ಸಂಸ್ಥೆಯಲ್ಲಿ (Defense Research and Development Organization -DRDO) ಕಟ್ಟುನಿಟ್ಟಾಗಿ ಆಚರಿಸಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್​ ಜಾಲತಾಣ ವರದಿ ಮಾಡಿದೆ.

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?