AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಚರ್ಚಿಸುವುದು ಸಮರ್ಥನೀಯವಾಗಿದ್ದರೂ, ಉಳಿದಂತೆ ಭದ್ರತೆ ಮತ್ತು ರಾಷ್ಟ್ರನಿರ್ಮಾಣದ ಇತರ ಕ್ಷೇತ್ರಗಳಲ್ಲೂ ಸ್ತ್ರೀಯರ ಪಾತ್ರವನ್ನು ಗುರುತಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹೇಳಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ರಕ್ಷಣಾ ಸಚಿವ ರಾಜನಾಥ್​ ಸಿಂಗ್​
TV9 Web
| Edited By: |

Updated on: Oct 14, 2021 | 6:06 PM

Share

ಶಾಂಘೈ ಸಹಕಾರ ಸಂಸ್ಥೆಯ ಸೆಮಿನಾರ್​ನಲ್ಲಿ ಇಂದು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮಾಜಿ ಪ್ರಧಾನಿ ಇಂದಿರಾಗಾಂಧಿ (Indira Gandhi)ಯವರನ್ನು ಹೊಗಳಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದ ರಾಜನಾಥ್​ ಸಿಂಗ್(Rajnath Singh)​, ನಮ್ಮ ದೇಶದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಹಲವು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದಲ್ಲದೆ, ಇಂಡೋ-ಪಾಕ್​ ಯುದ್ಧದ ಸಮಯದಲ್ಲೂ ಗಟ್ಟಿಯಾಗಿ ನಿರ್ಧಾರವನ್ನು ಕೈಗೊಂಡು, ಆ ಕಠಿಣ ಸಮಯವನ್ನೂ ಎದುರಿಸಿದರು ಎಂದು ಹೇಳಿದರು. ಅಷ್ಟೇ ಅಲ್ಲ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಬಗ್ಗೆಯೂ ಮಾತನಾಡಿದರು. ಹಾಗೇ, ರಾಷ್ಟ್ರೀಯ ಅಭಿವೃದ್ಧಿಗಾಗಿ ಮಹಿಳಾಶಕ್ತಿಯನ್ನು ಸಕಾರಾತ್ಮಕ ಬಳಸಿಕೊಳ್ಳುವಲ್ಲಿ ಭಾರತ ಅಪಾರ ಅನುಭವ ಹೊಂದಿದೆ ಎಂದೂ ಹೇಳಿದ್ದಾರೆ.  

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಚರ್ಚಿಸುವುದು ಸಮರ್ಥನೀಯವಾಗಿದ್ದರೂ, ಉಳಿದಂತೆ ಭದ್ರತೆ ಮತ್ತು ರಾಷ್ಟ್ರನಿರ್ಮಾಣದ ಇತರ ಕ್ಷೇತ್ರಗಳಲ್ಲೂ ಸ್ತ್ರೀಯರ ಪಾತ್ರವನ್ನು ಗುರುತಿಸಬೇಕು ಮತ್ತು ಅವರ ಪಾಲ್ಗೊಳ್ಳುವಿಕೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ರಾಜನಾಥ್​ ಸಿಂಗ್​ ಹೇಳಿದರು. ಹಾಗೇ, ನಮ್ಮ ರಾಷ್ಟ್ರಪತಿಗಳಾಗಿದ್ದ ಪ್ರತಿಭಾ ಪಟೇಲ್​ ಸಶಸ್ತ್ರಪಡೆಯ ಸರ್ವೋಚ್ಛ ಕಮಾಂಡರ್​ ಆಗಿದ್ದರು. ಒಮ್ಮೆ ಅವಲೋಕಿಸಿದರೆ ಇಂತ ಹಲವು ಉದಾಹರಣೆಗಳು ಸಿಗುತ್ತವೆ. ನಮ್ಮ ದೇಶವನ್ನು ರಕ್ಷಿಸಲು ಕೈಯಿಗೆ ಶಸ್ತ್ರ ತೆಗೆದುಕೊಂಡ ಸ್ತ್ರೀಯರು ಅನೇಕರಿದ್ದಾರೆ. ಅವರಲ್ಲಿ ಪ್ರಮುಖವಾಗಿ ರಾಣಿ ಲಕ್ಷ್ಮೀಬಾಯಿ ಸದಾ ಸ್ಮರಣೀಯರು, ಗೌರವಾರ್ಹರು ಎಂದು ಹೇಳಿದ್ದಾರೆ.

ಸರಸ್ವತಿ ಜ್ಞಾನ ದೇವತೆಯಾಗಿದ್ದರೆ, ತಾಯಿ ದುರ್ಗಾ ರಕ್ಷಣೆ, ಬಲದ ಪ್ರತೀಕವಾಗಿದ್ದಾಳೆ. ಈ ತಾಯಿ ವಿನಾಶ ಮತ್ತು ಯುದ್ಧದ ಸಂಕೇತವೂ ಹೌದು ಎಂದು ಹೇಳಿದ ರಾಜನಾಥ್​ ಸಿಂಗ್, ಸಶಸ್ತ್ರಪಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಗೆ ಮುಕ್ತ ಅವಕಾಶ ನೀಡಿದ ಕೆಲವೇ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಈಗಂತೂ ಭಾರತೀಯ ಸೇನೆಯಲ್ಲಿ ಮಹಿಳಾ ಸೈನಿಕರಿಗೆ ಶಾಶ್ವತ ಆಯೋಗ ರಚನೆಯಾಗಿದೆ ಎಂದು ತಿಳಿಸಿದರು. ಇನ್ನು ಶತಮಾನಗಳಿಂದಲೂ ಭಾರತೀಯ ಸೇನೆಯ ನರ್ಸಿಂಗ್​ ಸೇವೆ ವಿಭಾಗದಲ್ಲಿ ಮಹಿಳೆಯರು ತೊಡಗಿಸಿಕೊಂಡಿದ್ದು ಹೆಮ್ಮೆಯ ವಿಷಯ ಎಂದರು.

ಇದನ್ನೂ ಓದಿ: Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

ಸಲಗಕ್ಕೆ ಫ್ಯಾನ್ಸ್​ ಜೈಕಾರ; ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಅಭಿಮಾನಿಗಳು ಏನ್​ ಹೇಳಿದ್ರು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ