AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಸಶಸ್ತ್ರ ಡ್ರೋನ್‌ಗಳನ್ನು ಖರೀದಿಸಲು ಒಪ್ಪಿದ ಭಾರತದ ರಕ್ಷಣಾ ಸಚಿವಾಲಯ

ಬೈಡನ್ ಅವರು ಚೀನಾದ ಬೆಳೆಯುತ್ತಿರುವ ಪ್ರಾಬಲ್ಯವನ್ನು ಎದುರಿಸಲು ಭಾರತದೊಂದಿಗೆ ಗಾಢವಾದ ರಕ್ಷಣಾ ಸಂಬಂಧಗಳನ್ನು ಆದ್ಯತೆ ನೀಡಿದ್ದಾರೆ. ಉಭಯ ದೇಶಗಳು ಔಪಚಾರಿಕ ಭದ್ರತಾ ಮೈತ್ರಿಯನ್ನು ಹೊಂದಿರದಿದ್ದರೂ ಸಹ ಮಿಲಿಟರಿ ತಂತ್ರಜ್ಞಾನದಲ್ಲಿ ಸಹಕರಿಸಲು ಮುಂದಾಗಿದ್ದಾರೆ.

ಅಮೆರಿಕದಿಂದ ಸಶಸ್ತ್ರ ಡ್ರೋನ್‌ಗಳನ್ನು ಖರೀದಿಸಲು ಒಪ್ಪಿದ ಭಾರತದ ರಕ್ಷಣಾ ಸಚಿವಾಲಯ
ಡ್ರೋನ್Image Credit source: www.ga-asi.com
TV9 Web
| Edited By: |

Updated on: Jun 15, 2023 | 8:59 PM

Share

ದೆಹಲಿ: ಯುಎಸ್ ನಿರ್ಮಿತ ಸಶಸ್ತ್ರ MQ-9B ಸೀಗಾರ್ಡಿಯನ್ ಡ್ರೋನ್‌ಗಳ (MQ-9B SeaGuardian drones) ಖರೀದಿಗೆ ರಕ್ಷಣಾ ಸಚಿವಾಲಯ (Defence Ministry )ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. 3 ಬಿಲಿಯನ್ ಡಾಲರ್‌ಗಳಷ್ಟು ಮೌಲ್ಯದ ಜನರಲ್ ಅಟಾಮಿಕ್ಸ್ ತಯಾರಿಸಿದ 31 ಡ್ರೋನ್‌ಗಳನ್ನು ಭಾರತ ಖರೀದಿಸಲಿದೆ ಎಂದು ಮೂಲವೊಂದು ತಿಳಿಸಿದೆ. ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಮೆರಿಕಕ್ಕೆ ಪ್ರವಾಸಕ್ಕೆ ತೆರಳುವ ಕೆಲವೇ ದಿನಗಳ ಮೊದಲು ಡ್ರೋನ್‌ಗಳ ಖರೀದಿಗೆ ರಕ್ಷಣಾ ಸಚಿವಾಲಯದ ಆರಂಭಿಕ ಅನುಮತಿ ಸಿಕ್ಕಿದೆ.

ಎರಡು ಮೂಲಗಳ ಪ್ರಕಾರ ಇಂದು (ಗುರುವಾರ) ರಕ್ಷಣಾ ಸಚಿವಾಲಯದ ಉನ್ನತ ಸಂಸ್ಥೆ ಒಪ್ಪಂದವನ್ನು ಅನುಮೋದಿಸಲು ಸಭೆ ನಡೆಸಿತು. ಮುಂದಿನ ವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದಾಗ ಅದನ್ನು ಘೋಷಿಸುವ ನಿರೀಕ್ಷೆಯಿದೆ.

ಬೈಡನ್ ಅವರು ಚೀನಾದ ಬೆಳೆಯುತ್ತಿರುವ ಪ್ರಾಬಲ್ಯವನ್ನು ಎದುರಿಸಲು ಭಾರತದೊಂದಿಗೆ ಗಾಢವಾದ ರಕ್ಷಣಾ ಸಂಬಂಧಗಳನ್ನು ಆದ್ಯತೆ ನೀಡಿದ್ದಾರೆ. ಉಭಯ ದೇಶಗಳು ಔಪಚಾರಿಕ ಭದ್ರತಾ ಮೈತ್ರಿಯನ್ನು ಹೊಂದಿರದಿದ್ದರೂ ಸಹ ಮಿಲಿಟರಿ ತಂತ್ರಜ್ಞಾನದಲ್ಲಿ ಸಹಕರಿಸಲು ಮುಂದಾಗಿದ್ದಾರೆ.

ಸಚಿವಾಲಯದ ಅವಶ್ಯಕತೆಯ ಸ್ವೀಕಾರ ಖರೀದಿ ಪ್ರಕ್ರಿಯೆಯ ಮೊದಲ ಹೆಜ್ಜೆಯಾಗಿದ್ದು, ಇದೀಗ ಪ್ರಧಾನಿ ಮೋದಿಯವರ ಕ್ಯಾಬಿನೆಟ್‌ನಿಂದ ಅನುಮತಿ ಪಡೆಯಬೇಕಾಗಿದೆ.

ಇದನ್ನೂ ಓದಿ: ಡ್ರೋನ್ ಮೂಲಕ ಭೂಮಾಪನ, ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ

ಡ್ರೋನ್‌ಗಳನ್ನು ಪ್ರಧಾನವಾಗಿ ಭಾರತೀಯ ನೌಕಾಪಡೆ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಳಸುತ್ತದೆ. ಭಾರತೀಯ ನೌಕಾಪಡೆಯು ಕಣ್ಗಾವಲುಗಾಗಿ ನವೆಂಬರ್ 2020 ರಿಂದ ಎರಡು MQ-9B ಆನ್ ಆರ್ಮ್ಡ್ ಡ್ರೋನ್‌ಗಳನ್ನು ಗುತ್ತಿಗೆಗೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!