AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಸಶಸ್ತ್ರ ಡ್ರೋನ್‌ಗಳನ್ನು ಖರೀದಿಸಲು ಒಪ್ಪಿದ ಭಾರತದ ರಕ್ಷಣಾ ಸಚಿವಾಲಯ

ಬೈಡನ್ ಅವರು ಚೀನಾದ ಬೆಳೆಯುತ್ತಿರುವ ಪ್ರಾಬಲ್ಯವನ್ನು ಎದುರಿಸಲು ಭಾರತದೊಂದಿಗೆ ಗಾಢವಾದ ರಕ್ಷಣಾ ಸಂಬಂಧಗಳನ್ನು ಆದ್ಯತೆ ನೀಡಿದ್ದಾರೆ. ಉಭಯ ದೇಶಗಳು ಔಪಚಾರಿಕ ಭದ್ರತಾ ಮೈತ್ರಿಯನ್ನು ಹೊಂದಿರದಿದ್ದರೂ ಸಹ ಮಿಲಿಟರಿ ತಂತ್ರಜ್ಞಾನದಲ್ಲಿ ಸಹಕರಿಸಲು ಮುಂದಾಗಿದ್ದಾರೆ.

ಅಮೆರಿಕದಿಂದ ಸಶಸ್ತ್ರ ಡ್ರೋನ್‌ಗಳನ್ನು ಖರೀದಿಸಲು ಒಪ್ಪಿದ ಭಾರತದ ರಕ್ಷಣಾ ಸಚಿವಾಲಯ
ಡ್ರೋನ್Image Credit source: www.ga-asi.com
TV9 Web
| Edited By: |

Updated on: Jun 15, 2023 | 8:59 PM

Share

ದೆಹಲಿ: ಯುಎಸ್ ನಿರ್ಮಿತ ಸಶಸ್ತ್ರ MQ-9B ಸೀಗಾರ್ಡಿಯನ್ ಡ್ರೋನ್‌ಗಳ (MQ-9B SeaGuardian drones) ಖರೀದಿಗೆ ರಕ್ಷಣಾ ಸಚಿವಾಲಯ (Defence Ministry )ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. 3 ಬಿಲಿಯನ್ ಡಾಲರ್‌ಗಳಷ್ಟು ಮೌಲ್ಯದ ಜನರಲ್ ಅಟಾಮಿಕ್ಸ್ ತಯಾರಿಸಿದ 31 ಡ್ರೋನ್‌ಗಳನ್ನು ಭಾರತ ಖರೀದಿಸಲಿದೆ ಎಂದು ಮೂಲವೊಂದು ತಿಳಿಸಿದೆ. ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಮೆರಿಕಕ್ಕೆ ಪ್ರವಾಸಕ್ಕೆ ತೆರಳುವ ಕೆಲವೇ ದಿನಗಳ ಮೊದಲು ಡ್ರೋನ್‌ಗಳ ಖರೀದಿಗೆ ರಕ್ಷಣಾ ಸಚಿವಾಲಯದ ಆರಂಭಿಕ ಅನುಮತಿ ಸಿಕ್ಕಿದೆ.

ಎರಡು ಮೂಲಗಳ ಪ್ರಕಾರ ಇಂದು (ಗುರುವಾರ) ರಕ್ಷಣಾ ಸಚಿವಾಲಯದ ಉನ್ನತ ಸಂಸ್ಥೆ ಒಪ್ಪಂದವನ್ನು ಅನುಮೋದಿಸಲು ಸಭೆ ನಡೆಸಿತು. ಮುಂದಿನ ವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾದಾಗ ಅದನ್ನು ಘೋಷಿಸುವ ನಿರೀಕ್ಷೆಯಿದೆ.

ಬೈಡನ್ ಅವರು ಚೀನಾದ ಬೆಳೆಯುತ್ತಿರುವ ಪ್ರಾಬಲ್ಯವನ್ನು ಎದುರಿಸಲು ಭಾರತದೊಂದಿಗೆ ಗಾಢವಾದ ರಕ್ಷಣಾ ಸಂಬಂಧಗಳನ್ನು ಆದ್ಯತೆ ನೀಡಿದ್ದಾರೆ. ಉಭಯ ದೇಶಗಳು ಔಪಚಾರಿಕ ಭದ್ರತಾ ಮೈತ್ರಿಯನ್ನು ಹೊಂದಿರದಿದ್ದರೂ ಸಹ ಮಿಲಿಟರಿ ತಂತ್ರಜ್ಞಾನದಲ್ಲಿ ಸಹಕರಿಸಲು ಮುಂದಾಗಿದ್ದಾರೆ.

ಸಚಿವಾಲಯದ ಅವಶ್ಯಕತೆಯ ಸ್ವೀಕಾರ ಖರೀದಿ ಪ್ರಕ್ರಿಯೆಯ ಮೊದಲ ಹೆಜ್ಜೆಯಾಗಿದ್ದು, ಇದೀಗ ಪ್ರಧಾನಿ ಮೋದಿಯವರ ಕ್ಯಾಬಿನೆಟ್‌ನಿಂದ ಅನುಮತಿ ಪಡೆಯಬೇಕಾಗಿದೆ.

ಇದನ್ನೂ ಓದಿ: ಡ್ರೋನ್ ಮೂಲಕ ಭೂಮಾಪನ, ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ

ಡ್ರೋನ್‌ಗಳನ್ನು ಪ್ರಧಾನವಾಗಿ ಭಾರತೀಯ ನೌಕಾಪಡೆ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಳಸುತ್ತದೆ. ಭಾರತೀಯ ನೌಕಾಪಡೆಯು ಕಣ್ಗಾವಲುಗಾಗಿ ನವೆಂಬರ್ 2020 ರಿಂದ ಎರಡು MQ-9B ಆನ್ ಆರ್ಮ್ಡ್ ಡ್ರೋನ್‌ಗಳನ್ನು ಗುತ್ತಿಗೆಗೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!