AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹ 43,000 ಕೋಟಿ ವೆಚ್ಚದಲ್ಲಿ ಆರು ಹೈಟೆಕ್ ಜಲಾಂತರ್ಗಾಮಿಗಳ ನಿರ್ಮಾಣ: ಬೃಹತ್ ಯೋಜನೆಗೆ ರಕ್ಷಣಾ ಸಚಿವಾಲಯ ಅನುಮೋದನೆ

High Tech Submarines: 2020ರ ಜನವರಿಯಲ್ಲಿ ರಕ್ಷಣಾ ಸಚಿವಾಲಯವು ಎರಡು ಭಾರತೀಯ ಮತ್ತು ಐದು ವಿದೇಶಿ ಹಡಗು ನಿರ್ಮಾಣಗಾರರನ್ನು ದೇಶದಲ್ಲಿ ಹೈಟೆಕ್ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಯೋಜನೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತು.

₹ 43,000 ಕೋಟಿ ವೆಚ್ಚದಲ್ಲಿ ಆರು ಹೈಟೆಕ್ ಜಲಾಂತರ್ಗಾಮಿಗಳ ನಿರ್ಮಾಣ: ಬೃಹತ್ ಯೋಜನೆಗೆ ರಕ್ಷಣಾ ಸಚಿವಾಲಯ ಅನುಮೋದನೆ
ಜಲಂತರ್ಗಾಮಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 04, 2021 | 7:02 PM

Share

ದೆಹಲಿ: ಭಾರತೀಯ ನೌಕಾಪಡೆಗಾಗಿ ಸುಮಾರು ₹ 43,000 ಕೋಟಿ ವೆಚ್ಚದಲ್ಲಿ ಆರು ಸುಧಾರಿತ ಜಲಾಂತರ್ಗಾಮಿಗಳನ್ನು ನಿರ್ಮಿಸುವ ಬೃಹತ್‌ ಯೋಜನೆಗೆ ರಕ್ಷಣಾ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ. ನೌಕಾ ಕ್ಷೇತ್ರದಲ್ಲಿ ಚೀನಾದ ಪರಾಕ್ರಮ ಹೆಚ್ಚಾಗುತ್ತಿದ್ದು, ಅದನ್ನು ಎದುರಿಸುವ ಉದ್ದೇಶದಿಂದ ಭಾರತೀಯ ನೌಕಾಪಡೆಯನ್ನು ಬಲಪಡಿಸಲು ಭಾರತ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಭಾರತದ ಅತ್ಯುನ್ನತ ಸಂಸ್ಥೆಯಾದ ರಕ್ಷಣಾ ಉಪಕರಣಗಳ ಖರೀದಿ ಮಂಡಳಿಯ (ಡಿಎಸಿ) ಶುಕ್ರವಾರ ನಡೆದ ಸಭೆಯಲ್ಲಿ ಈ ಪ್ರಸ್ತಾಪವನ್ನು ಅಂಗೀಕರಿಸಲ್ಪಟ್ಟಿದೆ.ನೌಕಾಪಡೆಯು ಪಿ -75 ಇಂಡಿಯಾ ಎಂದು ಕರೆಯಲ್ಪಡುವ ಯೋಜನೆಯ ಪ್ರಸ್ತಾವನೆಗೆ ಕೋರಿಕೆ (ಆರ್‌ಎಫ್‌ಪಿ) ಶೀಘ್ರ ಸಲ್ಲಿಕೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ  ಹಿಂದೂಸ್ತಾನ್ ಟೈಮ್ಸ್  ಪತ್ರಿಕೆ  ವರದಿ ಮಾಡಿದೆ.

ಕಾರ್ಯತಂತ್ರದ ಸಹಭಾಗಿತ್ವ ಮಾದರಿಯಲ್ಲಿ ನೀಡಲಾಗುವ ಮೊದಲ ಆರ್‌ಎಫ್‌ಪಿ ಇದಾಗಿದ್ದು, ಇದು ಸರ್ಕಾರದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಪ್ರಯತ್ನಿಸುತ್ತದೆ ಎಂದು ಮೇಲೆ ಉಲ್ಲೇಖಿಸಿದ ಅಧಿಕಾರಿಗಳಲ್ಲಿ ಒಬ್ಬರು ಹೇಳಿದರು. ದೇಶದಲ್ಲಿ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ವಿದೇಶಿ ಮೂಲ ಸಲಕರಣೆಗಳ ತಯಾರಕರೊಂದಿಗೆ (OEM) ಸಹಭಾಗಿತ್ವ ವಹಿಸುವ ಭಾರತೀಯ ಕಾರ್ಯತಂತ್ರದ ಪಾಲುದಾರರಿಂದ ಪ್ರಮುಖ ರಕ್ಷಣಾ ವೇದಿಕೆಗಳ ಸ್ಥಳೀಯ ಉತ್ಪಾದನೆಯನ್ನು ಈ ಮಾದರಿ ರೂಪಿಸಿದೆ. ಹೊಸ ಜಲಾಂತರ್ಗಾಮಿ ನೌಕೆಗಳಲ್ಲಿ ಏರ್ ಇಂಡಿಪೆಂಡೆಂಟ್ ಪ್ರೊಪಲ್ಷನ್ (ಎಐಪಿ) ವ್ಯವಸ್ಥೆಗಳಿದ್ದು, ಹಡಗುಗಳು ನೀರಿನಲ್ಲಿ ಹೆಚ್ಚು ಕಾಲ ಉಳಿಯಲು ಮತ್ತು ಅವುಗಳ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

2020ರ ಜನವರಿಯಲ್ಲಿ ರಕ್ಷಣಾ ಸಚಿವಾಲಯವು ಎರಡು ಭಾರತೀಯ ಮತ್ತು ಐದು ವಿದೇಶಿ ಹಡಗು ನಿರ್ಮಾಣಗಾರರನ್ನು ದೇಶದಲ್ಲಿ ಹೈಟೆಕ್ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಯೋಜನೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತು. ಇದು ಮಿಲಿಟರಿ ವಲಯದ ಅತಿದೊಡ್ಡ ಮೇಕ್ ಇನ್ ಇಂಡಿಯಾ ಯೋಜನೆಗಳಲ್ಲಿ ಒಂದಾಗಿದೆ.

ವಿದೇಶಿ ಒಇಎಂಗಳೊಂದಿಗೆ ಸಹಕರಿಸಲು ಭಾರತೀಯ ಕಾರ್ಯತಂತ್ರದ ಪಾಲುದಾರರು ಮಜಾಗನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಮತ್ತು ಎಲ್ ಅಂಡ್ ಟಿ ಆಗಿದೆ. ಫ್ರೆಂಚ್ ನೇವಲ್ ಗ್ರೂಪ್, ಜರ್ಮನ್ ಸಂಘಟಿತ ಥೈಸೆನ್‌ಕ್ರುಪ್ ಮೆರೈನ್ ಸಿಸ್ಟಮ್ಸ್, ರಷ್ಯಾದ ರೂಬಿನ್ ಡಿಸೈನ್ ಬ್ಯೂರೋ, ಸ್ಪೇನ್‌ನ ನವಾಂಟಿಯಾ ಮತ್ತು ದಕ್ಷಿಣ ಕೊರಿಯಾದ ಡೇವೂ ಶಿಪ್‌ಬಿಲ್ಡಿಂಗ್ ಮತ್ತು ಮೆರೈನ್ ಎಂಜಿನಿಯರಿಂಗ್ ಕಂಪನಿ ಈ ಯೋಜನೆಯಲ್ಲಿ ಸೇರುವ ಸಾಧ್ಯತೆ ಇದೆ.

ಶಾರ್ಟ್‌ಲಿಸ್ಟ್ ಮಾಡಿದ ಭಾರತೀಯ ಕಾರ್ಯತಂತ್ರದ ಪಾಲುದಾರರಿಗೆ ಆರ್‌ಎಫ್‌ಪಿಗಳನ್ನು ನೀಡುವ ಮೂಲಕ ಸಚಿವಾಲಯವು ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ನಂತರ ಅವರು ಶಾರ್ಟ್‌ಲಿಸ್ಟ್ ಮಾಡಿದ ಒಇಎಂಗಳ ಸಹಯೋಗದೊಂದಿಗೆ ಟೆಕ್ನೋ-ಕಮರ್ಷಿಯಲ್ ಕೊಡುಗೆಗಳೊಂದಿಗೆ ಪ್ರತಿಕ್ರಿಯಿಸುತ್ತಾರೆ. ಅಸಾಧಾರಣ ಸಂದರ್ಭಗಳಲ್ಲಿ, ನಿಯಮಗಳು ಭಾರತೀಯ ಕಾರ್ಯತಂತ್ರದ ಪಾಲುದಾರರಿಗೆ ಎರಡು ಒಇಎಂಗಳ ಸಹಯೋಗದೊಂದಿಗೆ ಟೆಕ್ನೋ-ಕಮರ್ಷಿಯಲ್ ಕೊಡುಗೆಗಳನ್ನು ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ದೀರ್ಘ ಪ್ರಕ್ರಿಯೆಯ ಮುಂದಿನ ಹಂತಗಳಲ್ಲಿ ತಾಂತ್ರಿಕ ಕೊಡುಗೆಗಳು, ಪ್ರಯೋಗಗಳು, ಸಿಬ್ಬಂದಿ ಮೌಲ್ಯಮಾಪನ, ಆರ್‌ಎಫ್‌ಪಿಗೆ ತಾಂತ್ರಿಕವಾಗಿ ಒಪ್ಪತಕ್ಕ ಕಂಪನಿಗಳ ವಾಣಿಜ್ಯ ಕೊಡುಗೆಗಳ ತೆರೆಯುವಿಕೆ ಮತ್ತು ಮೌಲ್ಯಮಾಪನ ಮತ್ತು ಅಂತಿಮವಾಗಿ, ಕಡಿಮೆ ಬಿಡ್‌ನೊಂದಿಗೆ ಕಾರ್ಯತಂತ್ರದ ಪಾಲುದಾರರ ಆಯ್ಕೆ ಇರುತ್ತದೆ. ಆಗಸ್ಟ್ 2018 ರಲ್ಲಿ, ಡಿಎಸಿ ಕಾರ್ಯತಂತ್ರದ ಮಾದರಿಯಲ್ಲಿ 111 ನೇವಲ್ ಯುಟಿಲಿಟಿ ಹೆಲಿಕಾಪ್ಟರ್‌ಗಳನ್ನು (ಎನ್‌ಯುಹೆಚ್) ನಿರ್ಮಿಸುವ ಯೋಜನೆಯನ್ನು ಅನುಮೋದಿಸಿತ್ತು. ಆದರೆ ರೂ 21,738 ಕೋಟಿ ಮೌಲ್ಯದ ಎನ್‌ಯುಹೆಚ್ ಯೋಜನೆಯಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ.

ಇದನ್ನೂ ಓದಿ:  ಮಹಿಳೆಯರ ಪಾಲಿಗೆ ಸಿಹಿಸುದ್ದಿ ನೀಡಿದ ಸುಪ್ರೀಂಕೋರ್ಟ್; ದೈಹಿಕ ಸಾಮರ್ಥ್ಯ ಆಧರಿತ ಕೆಲಸಗಳಲ್ಲಿ ನಿವೃತ್ತಿ ವಯಸ್ಸಿನವರೆಗೂ ಮುಂದುವರೆಯಲು ಅವಕಾಶ

Published On - 6:59 pm, Fri, 4 June 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?