AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಿರಿಕ್‌ ನಡುವೆಯೇ ಭಾರತದಿಂದ ಪಿನಾಕಾ ಮಲ್ಟಿ ರಾಕೆಟ್‌ ಲಾಂಚರ್ಸ್‌ಗೆ ಆರ್ಡರ್‌

ನವದೆಹಲಿ: ಮೊದಲೇ ಪಾಕಿಸ್ತಾನದ ಭಯೋತ್ಪಾದನೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಭಾರತ ಈಗ ಚೀನಾದೊಂದಿಗಿನ ಗಡಿ ತಂಟೆಯಿಂದಾಗಿ ಎಚ್ಚೆತ್ತುಕೊಂಡಿದೆ. ಮುಂದಿನ ದಿನಗಳಲ್ಲಿ ಇಂಥದ್ದಕ್ಕೆಲ್ಲಾ ಅವಕಾಶ ಮಾಡಿಕೊಡದಿರಲು ಪ್ಲಾನ್‌ ಮಾಡಿದ್ದು, ಇದರಂಗವಾಗಿ ಈಗ ಪಿನಾಕಾ ರಾಕೆಟ್‌ ಲಾಂಚರ್‌ನ್ನು ಸೇನೆಗೆ ಸೇರಿಸಲು ಸಜ್ಜಾಗಿದೆ. ಸಂಪೂರ್ಣವಾಗಿ ದೇಸಿಯವಾಗಿಯೇ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್‌ ಏಕ ಕಾಲದಲ್ಲಿ ಹಲವಾರು ರಾಕೆಟ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕಾಗಿ BEL ಅಂದ್ರೆ ಭಾರತ್‌ ಅರ್ಥ್‌ ಮೂವರ್ಸ್‌, ಲಾರ್ಸನ್‌ ಌಂಡ್‌ ಟರ್ಬೋ ಮತ್ತು ಟಾಟಾ ಪವರ್‌ ಕಂಪನಿಗಳಿಗೆ ಗುತ್ತಿಗೆ […]

ಚೀನಾ ಕಿರಿಕ್‌ ನಡುವೆಯೇ ಭಾರತದಿಂದ ಪಿನಾಕಾ ಮಲ್ಟಿ ರಾಕೆಟ್‌ ಲಾಂಚರ್ಸ್‌ಗೆ ಆರ್ಡರ್‌
Guru
Guru|

Updated on:Sep 01, 2020 | 2:36 PM

Share

ನವದೆಹಲಿ: ಮೊದಲೇ ಪಾಕಿಸ್ತಾನದ ಭಯೋತ್ಪಾದನೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಭಾರತ ಈಗ ಚೀನಾದೊಂದಿಗಿನ ಗಡಿ ತಂಟೆಯಿಂದಾಗಿ ಎಚ್ಚೆತ್ತುಕೊಂಡಿದೆ. ಮುಂದಿನ ದಿನಗಳಲ್ಲಿ ಇಂಥದ್ದಕ್ಕೆಲ್ಲಾ ಅವಕಾಶ ಮಾಡಿಕೊಡದಿರಲು ಪ್ಲಾನ್‌ ಮಾಡಿದ್ದು, ಇದರಂಗವಾಗಿ ಈಗ ಪಿನಾಕಾ ರಾಕೆಟ್‌ ಲಾಂಚರ್‌ನ್ನು ಸೇನೆಗೆ ಸೇರಿಸಲು ಸಜ್ಜಾಗಿದೆ.

ಸಂಪೂರ್ಣವಾಗಿ ದೇಸಿಯವಾಗಿಯೇ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್‌ ಏಕ ಕಾಲದಲ್ಲಿ ಹಲವಾರು ರಾಕೆಟ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕಾಗಿ BEL ಅಂದ್ರೆ ಭಾರತ್‌ ಅರ್ಥ್‌ ಮೂವರ್ಸ್‌, ಲಾರ್ಸನ್‌ ಌಂಡ್‌ ಟರ್ಬೋ ಮತ್ತು ಟಾಟಾ ಪವರ್‌ ಕಂಪನಿಗಳಿಗೆ ಗುತ್ತಿಗೆ ನೀಡಿದೆ.

ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್ಸ್‌ಗಳಿಗಾಗಿ ಭಾರತ 2,580 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಈ ಸಂಬಂಧ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಗತ್ಯ ಮಂಜೂರಾತಿ ನೀಡಿದ್ದಾರೆ.

ಎಲ್ಲವೂ ಅಂದು ಕೊಂಡಂತೆ ನಡೆದ್ರೆ 2024ಕ್ಕೆ ಈ ಪಿನಾಕಾ ಮಲ್ಟಿಪಲ್‌ ರಾಕೆಟ್‌ ಲಾಂಚರ್ಸ್‌ ಭಾರತೀಯ ಸೇನೆ ಸೇರಿಕೊಳ್ಳಲಿವೆ. ಶತೃಗಳ ಚಲನವಲನಗಳನ್ನು ಮತ್ತು ಅವರ ಸೈನ್ಯದ ಗತಿಯನ್ನು ಗುರಿಯಾಗಿಟ್ಟುಕೊಂಡು ರಾಕೆಟ್‌ ದಾಳಿ ನಡೆಸಲು ಈ ಪಿನಾಕಾ ಬಹು ಉಪಯೋಗಿಯಾಗಲಿದೆ.

ಹೀಗಾಗಿ ಇನ್ನು ಮುಂದೆ ಭಾರತದೊಂದಿಗೆ ತಗಾದೆ ತೆಗೆಯುವುದಕ್ಕಿಂತ ಮೊದಲು ಶತ್ರಗಳು ಹತ್ತು ಬಾರಿ ಯೋಚಿಸುವ ಕಾಲ ಸನ್ನಿಹಿತವಾಗುತ್ತಿದೆ.

Published On - 2:05 pm, Tue, 1 September 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ