AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehradun: ದಂಪತಿ ಆತ್ಮಹತ್ಯೆ: ಕೊಳೆತ ಶವಗಳ ನಡುವೆ, ಬದುಕಿದ್ದೂ ಶವದಂತಿತ್ತು 6 ದಿನಗಳ ಹಸುಗೂಸು

ಪೋಷಕರು ಸತ್ತು ಮೂರು ದಿನಗಳೇ ಕಳೆದಿವೆ, ದೇಹಗಳು ಕೊಳೆಯುತ್ತಿವೆ, ಕೆಟ್ಟ ವಾಸನೆ ಈ ಮೂರು ದಿನ 6 ದಿನಗಳ ಮಗು ಈ ಶವಗಳ ಮಧ್ಯೆಯೇ ಇತ್ತು. ಈಗಷ್ಟೇ ಕಣ್ಣು ತೆರೆದು ಪ್ರಪಂಚ ನೋಡಿದ್ದಷ್ಟೇ, ತಾಯಿಯ ಎದೆ ಹಾಲಿಲ್ಲ, ಅತ್ತಾಗ ಮುದ್ದಿಸುವ ಅಪ್ಪನೂ ಇಲ್ಲ.

Dehradun: ದಂಪತಿ ಆತ್ಮಹತ್ಯೆ: ಕೊಳೆತ ಶವಗಳ ನಡುವೆ, ಬದುಕಿದ್ದೂ ಶವದಂತಿತ್ತು 6 ದಿನಗಳ ಹಸುಗೂಸು
ಮಗು
ನಯನಾ ರಾಜೀವ್
|

Updated on: Jun 15, 2023 | 2:45 PM

Share

ಪೋಷಕರು ಸತ್ತು ಮೂರು ದಿನಗಳೇ ಕಳೆದಿವೆ, ದೇಹಗಳು ಕೊಳೆಯುತ್ತಿವೆ, ಕೆಟ್ಟ ವಾಸನೆ ಈ ಮೂರು ದಿನ 6 ದಿನಗಳ ಮಗು ಈ ಶವಗಳ ಮಧ್ಯೆಯೇ ಇತ್ತು. ಈಗಷ್ಟೇ ಕಣ್ಣು ತೆರೆದು ಪ್ರಪಂಚ ನೋಡಿದ್ದಷ್ಟೇ, ತಾಯಿಯ ಎದೆ ಹಾಲಿಲ್ಲ, ಅತ್ತಾಗ ಮುದ್ದಿಸುವ ಅಪ್ಪನೂ ಇಲ್ಲ. ಈ ಪ್ರಪಂಚದಲ್ಲಿ ಮನುಷ್ಯರೂ ಇರುತ್ತಾರೆ ಎಂದು ಮಗುವಿಗೆ ತಿಳಿದಂತಿಲ್ಲ. ಆ ಶವಗಳ ಮಧ್ಯೆ ಅನಾಥವಾಗಿ ಜೀವವಿದ್ದೂ ಶವದಂತೆ ಮಲಗಿತ್ತು ಮಗು. ಈ ಘಟನೆ ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆದಿದೆ, ಖಾಸಿಫ್(25), ಅಮನ್(22) ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿದ್ದರು.

ಅಮನ್ ಗೃಹಿಣಿಯಾಗಿದ್ದು ಜೂನ್ 8ರಂದು ಮಗುವಿಗೆ ಜನ್ಮ ನೀಡಿದ್ದಳು. ಅದೇನಾಯಿತೋ ಏನೋ ಮಗುವನ್ನು ಅನಾಥ ಮಾಡಿ ಹೋಗಿದ್ದಾರೆ. ಶವಗಳ ಪಕ್ಕ ನೀರು ಹಾಗೂ ಹಳಸಿದ ಆಹಾರವಿತ್ತು. ಮಗು ಹಾಲಿಲ್ಲದೇ ನಿತ್ರಾಣವಾಗಿತ್ತು ಆದರೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Ballari News: ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು

ದಂಪತಿ ಉತ್ತರ ಪ್ರದೇಶದ ಸಹರಾನ್​ಪುರದವರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದು ತಿಂಗಳ ಹಿಂದಷ್ಟೇ ಡೆಹ್ರಾಡೂನ್​ಗೆ ಬಂದಿದ್ದರು. ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು, ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳಲು ಇದ್ದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಖಾಸಿಪ್ ಕ್ರೇನ್ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದ, ಆರ್ಥಿಕ ಸಮಸ್ಯೆ ಇತ್ತು ಇದೇ ಸಾವಿಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ