Dehradun: ದಂಪತಿ ಆತ್ಮಹತ್ಯೆ: ಕೊಳೆತ ಶವಗಳ ನಡುವೆ, ಬದುಕಿದ್ದೂ ಶವದಂತಿತ್ತು 6 ದಿನಗಳ ಹಸುಗೂಸು

ಪೋಷಕರು ಸತ್ತು ಮೂರು ದಿನಗಳೇ ಕಳೆದಿವೆ, ದೇಹಗಳು ಕೊಳೆಯುತ್ತಿವೆ, ಕೆಟ್ಟ ವಾಸನೆ ಈ ಮೂರು ದಿನ 6 ದಿನಗಳ ಮಗು ಈ ಶವಗಳ ಮಧ್ಯೆಯೇ ಇತ್ತು. ಈಗಷ್ಟೇ ಕಣ್ಣು ತೆರೆದು ಪ್ರಪಂಚ ನೋಡಿದ್ದಷ್ಟೇ, ತಾಯಿಯ ಎದೆ ಹಾಲಿಲ್ಲ, ಅತ್ತಾಗ ಮುದ್ದಿಸುವ ಅಪ್ಪನೂ ಇಲ್ಲ.

Dehradun: ದಂಪತಿ ಆತ್ಮಹತ್ಯೆ: ಕೊಳೆತ ಶವಗಳ ನಡುವೆ, ಬದುಕಿದ್ದೂ ಶವದಂತಿತ್ತು 6 ದಿನಗಳ ಹಸುಗೂಸು
ಮಗು

Updated on: Jun 15, 2023 | 2:45 PM

ಪೋಷಕರು ಸತ್ತು ಮೂರು ದಿನಗಳೇ ಕಳೆದಿವೆ, ದೇಹಗಳು ಕೊಳೆಯುತ್ತಿವೆ, ಕೆಟ್ಟ ವಾಸನೆ ಈ ಮೂರು ದಿನ 6 ದಿನಗಳ ಮಗು ಈ ಶವಗಳ ಮಧ್ಯೆಯೇ ಇತ್ತು. ಈಗಷ್ಟೇ ಕಣ್ಣು ತೆರೆದು ಪ್ರಪಂಚ ನೋಡಿದ್ದಷ್ಟೇ, ತಾಯಿಯ ಎದೆ ಹಾಲಿಲ್ಲ, ಅತ್ತಾಗ ಮುದ್ದಿಸುವ ಅಪ್ಪನೂ ಇಲ್ಲ. ಈ ಪ್ರಪಂಚದಲ್ಲಿ ಮನುಷ್ಯರೂ ಇರುತ್ತಾರೆ ಎಂದು ಮಗುವಿಗೆ ತಿಳಿದಂತಿಲ್ಲ. ಆ ಶವಗಳ ಮಧ್ಯೆ ಅನಾಥವಾಗಿ ಜೀವವಿದ್ದೂ ಶವದಂತೆ ಮಲಗಿತ್ತು ಮಗು. ಈ ಘಟನೆ ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆದಿದೆ, ಖಾಸಿಫ್(25), ಅಮನ್(22) ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿದ್ದರು.

ಅಮನ್ ಗೃಹಿಣಿಯಾಗಿದ್ದು ಜೂನ್ 8ರಂದು ಮಗುವಿಗೆ ಜನ್ಮ ನೀಡಿದ್ದಳು. ಅದೇನಾಯಿತೋ ಏನೋ ಮಗುವನ್ನು ಅನಾಥ ಮಾಡಿ ಹೋಗಿದ್ದಾರೆ.
ಶವಗಳ ಪಕ್ಕ ನೀರು ಹಾಗೂ ಹಳಸಿದ ಆಹಾರವಿತ್ತು. ಮಗು ಹಾಲಿಲ್ಲದೇ ನಿತ್ರಾಣವಾಗಿತ್ತು ಆದರೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Ballari News: ಬಳ್ಳಾರಿ; ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು

ದಂಪತಿ ಉತ್ತರ ಪ್ರದೇಶದ ಸಹರಾನ್​ಪುರದವರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದು ತಿಂಗಳ ಹಿಂದಷ್ಟೇ ಡೆಹ್ರಾಡೂನ್​ಗೆ ಬಂದಿದ್ದರು. ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು, ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳಲು ಇದ್ದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಖಾಸಿಪ್ ಕ್ರೇನ್ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದ, ಆರ್ಥಿಕ ಸಮಸ್ಯೆ ಇತ್ತು ಇದೇ ಸಾವಿಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us