AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTuber: 300 ಕಿಮೀ ವೇಗದಲ್ಲಿ ಬೈಕ್ ಸವಾರಿ, ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು

ಗಂಟೆಗೆ 300 ಕಿ.ಮೀ. ವೇಗದಲ್ಲಿ ಸಾಗುತ್ತಿದ್ದ ಅಗಸ್ತ್ಯರ ಬೈಕ್ ಉತ್ತರ ಪ್ರದೇಶದ ಉಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್ ಪ್ರೆಸ್ ಹೈವೇ ಬಳಿ ಬಂದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

YouTuber: 300 ಕಿಮೀ ವೇಗದಲ್ಲಿ ಬೈಕ್ ಸವಾರಿ, ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು
ಬೈಕ್ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು
ಸಾಧು ಶ್ರೀನಾಥ್​
|

Updated on:May 04, 2023 | 9:49 AM

Share

ಜನಪ್ರಿಯ ಯೂಟ್ಯೂಬರ್ (YouTuber) ಮತ್ತು ವೃತ್ತಿಪರ ಬೈಕರ್ ಅಗಸ್ತ್ಯ ಚೌಹಾಣ್ (Agastya Chauhan) ನಿನ್ನೆ (ಮೇ 3) ರಸ್ತೆ ಅಪಘಾತದಲ್ಲಿ (road accident) ಮೃತಪಟ್ಟಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ (Dehradun, Uttarakhand) ನಿವಾಸಿ ಅಗಸ್ತ್ಯ ಚೌಹಾಣ್, ವೃತ್ತಿಯಲ್ಲಿ ಬೈಕ್ ಸವಾರ. ಅವರ YouTube ಚಾನಲ್ ‘PRO RIDER 1000’ 1.2 ಮಿಲಿಯನ್ ಚಂದಾದಾರರನ್ನು ಹೊಂದಿದೆ. ಅಪಘಾತಕ್ಕೆ 16 ಗಂಟೆಗಳ ಮೊದಲು ಅವರು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ವೇಗವಾಗಿ ಬೈಕ್ ಸ್ಟಂಟ್ ಮಾಡುವ ವಿಡಿಯೋಗಳನ್ನು ತನ್ನ ಚಾನೆಲ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ವೇಗದ ಚಾಲನೆ ಅಪಾಯಕಾರಿ ಎಂಬ ಎಚ್ಚರಿಕೆಯನ್ನೂ ತಮ್ಮ ಪ್ರತಿ ವಿಡಿಯೋದಲ್ಲಿ ನೀಡುತ್ತಿದ್ದರು. ಕೊನೆಗೆ ಅದೇ ವೇಗದಲ್ಲಿ ಪ್ರಾಣ ಕಳೆದುಕೊಂಡರು.

ಈ ಹಿನ್ನೆಲೆಯಲ್ಲಿ ಬುಧವಾರ ಆಗ್ರಾದಿಂದ ಜಾನ್ ಎಕ್ಸ್ 10ಆರ್ ನಿಂಜಾ ಸೂಪರ್ ಬೈಕ್ ನಲ್ಲಿ ದೆಹಲಿಯಲ್ಲಿ ಮೋಟಾರ್ ಬೈಕ್ ರೇಸಿಂಗ್ ನಲ್ಲಿ ಭಾಗವಹಿಸಲು ಹೊರಟಿದ್ದರು. ಗಂಟೆಗೆ 300 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದ ಅಗಸ್ತ್ಯರ ಬೈಕ್ ಉತ್ತರ ಪ್ರದೇಶದ ಉಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್ ಪ್ರೆಸ್ ಹೈವೇ (Yamuna Express Highway) ಬಳಿ ಬಂದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

Also Read: 

ಬೊಲೆರೊಗೆ ಲಾರಿ ಡಿಕ್ಕಿ, ಛತ್ತೀಸ್​ಗಢದಲ್ಲೊಂದು ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಸಾವು

ಈ ಅಪಘಾತದಲ್ಲಿ ಅಗಸ್ತ್ಯ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಅವರು ಧರಿಸಿದ್ದ ಹೆಲ್ಮೆಟ್ ತುಂಡಾಗಿದೆ. ಮೊನ್ನೆಯಷ್ಟೇ ಈ ಸಾಹಸಕ್ಕೆ ಕೈಹಾಕಿದ್ದ ಅಗಸ್ತ್ಯನ ಸಾವು ಅವರ ಅಭಿಮಾನಿಗಳನ್ನು ದುಃಖದಲ್ಲಿ ಮುಳುಗಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Thu, 4 May 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ