AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬದರ್‌ಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ, 3 ಮಂದಿ ಸಾವು

ದೆಹಲಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಬಪ್ಪಿದ್ದಾರೆ. ಫರಿದಾಬಾದ್‌ನಿಂದ ದೆಹಲಿಗೆ ಹಿಂತಿರುಗುತ್ತಿದ್ದ ಕಾರಿನಲ್ಲಿ ಏಳು ಮಂದಿ ಇದ್ದರು. ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ದೆಹಲಿಯ ಬದರ್‌ಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ, 3 ಮಂದಿ ಸಾವು
ಅಪಘಾತImage Credit source: India Today
ನಯನಾ ರಾಜೀವ್
|

Updated on:Mar 03, 2024 | 11:08 AM

Share

ದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿ 12.48 ಕ್ಕೆ ಈ ಘಟನೆ ನಡೆದಿದೆ. ಆಲ್ಟೊದಲ್ಲಿದ್ದ ಏಳು ಮಂದಿ ಫರಿದಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ದೆಹಲಿಗೆ ಹಿಂತಿರುಗುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಕರೆ ಬಂದ ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಯಿತು

ಬೀದರ್​​ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು ಇಂದು ಮುಂಜಾನೆ ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.

ಮತ್ತಷ್ಟು ಓದಿ: ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮೂವರ ಸಾವು; ಓರ್ವ ಮಗುವಿನ‌‌ ಸ್ಥಿತಿ ಗಂಭೀರ

ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Sun, 3 March 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್