AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್

ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 24, 2023 | 5:18 PM

Share

ದೆಹಲಿ, ಆ.24: ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ (delhi) ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದರ ಜತೆಗೆ ಆಕೆಯ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದು, ಆಕೆಯನ್ನು ಬ್ಲಾಕ್​ಮೇಲ್​​ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆ ಡಿಟಿಸಿಯಲ್ಲಿ (Delhi Transport Corporation) 2010 ರಿಂದ 2017 ರವರೆಗೆ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದಿದರು ಎಂದು ಹೇಳಲಾಗಿದೆ. ಆದರೆ ಆಕೆಗೆ ಮಗುವಾದ ನಂತರ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ.

ಒಂದು ದಿನ ಆರೋಪಿಯು ದೇವರ ಪ್ರಸಾದ್ ನೀಡಲು ಎಂಬ ನೆಪವನ್ನು ಹೇಳಿ ಮಹಿಳೆಯ ಮನೆಗೆ ಬಂದಿದ್ದಾನೆ. ಈ ಹಿಂದೆ ಆರೋಪಿ ಆಕೆಗೆ ಡಿಟಿಸಿಯಲ್ಲಿ ಕೆಲಸ ಕೊಡಿಸಲು ಸಹಾಯ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆಗೆ ಬಂದ ಆತನಿಗೆ ತಂಪು ಪಾನೀಯ ನೀಡಿ ಕೆಲವು ದಾಖಲೆಗಳನ್ನು ತರಲು ರೂಮಿನೊಳಗೆ ಹೋಗಿದ್ದಾಳೆ. ಈ ಸಮಯವನ್ನು ನೋಡಿದ ಆರೋಪಿ ಆಕೆಯ ತಂದ ತಂಪು ಪಾನೀಯ ಮತ್ತು ಪ್ರಸಾದಕ್ಕೆ ಪ್ರಜ್ಞೆ ತಪ್ಪುವ ಪುಡಿಯನ್ನು ಹಾಕಿ, ನಂತರ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದರ ಜತೆಗೆ ಅಶ್ಲೀಲ ಫೋಟೋಗಳನ್ನು ತೆಗೆದು ವೀಡಿಯೋ ಕೂಡ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಇದನ್ನೂ ಓದಿ: ಎಂಟು ಮಂದಿಯ ತಂಡ ಮನೆಗೆ ನುಗ್ಗಿ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ತೆಲಂಗಾಣ ಪೊಲೀಸರು

ಇನ್ನು ಈ ಫೋಟೋ, ವಿಡಿಯೋವನ್ನು ಇಟ್ಟುಕೊಂಡು, ಆಕೆಗೆ ಬ್ಲಾಕ್​​ಮೇಲ್​​ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾನೆ. ಈ ಘಟನೆಯ ಬಗ್ಗೆ ಮಹಿಳೆ ಆರೋಪಿಯ ಸ್ನೇಹಿತರೊಬ್ಬರಿಗೆ ತಿಳಿಸಿದಾಗ, ಅವನು ಫೋಟೋಗಳನ್ನು ಡಿಲಿಟ್​​ ಮಾಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ನಾಲ್ಕೈದು ಮಂದಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್​​ ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Thu, 24 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ