AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್

ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 24, 2023 | 5:18 PM

ದೆಹಲಿ, ಆ.24: ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ (delhi) ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದರ ಜತೆಗೆ ಆಕೆಯ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದು, ಆಕೆಯನ್ನು ಬ್ಲಾಕ್​ಮೇಲ್​​ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆ ಡಿಟಿಸಿಯಲ್ಲಿ (Delhi Transport Corporation) 2010 ರಿಂದ 2017 ರವರೆಗೆ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದಿದರು ಎಂದು ಹೇಳಲಾಗಿದೆ. ಆದರೆ ಆಕೆಗೆ ಮಗುವಾದ ನಂತರ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ.

ಒಂದು ದಿನ ಆರೋಪಿಯು ದೇವರ ಪ್ರಸಾದ್ ನೀಡಲು ಎಂಬ ನೆಪವನ್ನು ಹೇಳಿ ಮಹಿಳೆಯ ಮನೆಗೆ ಬಂದಿದ್ದಾನೆ. ಈ ಹಿಂದೆ ಆರೋಪಿ ಆಕೆಗೆ ಡಿಟಿಸಿಯಲ್ಲಿ ಕೆಲಸ ಕೊಡಿಸಲು ಸಹಾಯ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆಗೆ ಬಂದ ಆತನಿಗೆ ತಂಪು ಪಾನೀಯ ನೀಡಿ ಕೆಲವು ದಾಖಲೆಗಳನ್ನು ತರಲು ರೂಮಿನೊಳಗೆ ಹೋಗಿದ್ದಾಳೆ. ಈ ಸಮಯವನ್ನು ನೋಡಿದ ಆರೋಪಿ ಆಕೆಯ ತಂದ ತಂಪು ಪಾನೀಯ ಮತ್ತು ಪ್ರಸಾದಕ್ಕೆ ಪ್ರಜ್ಞೆ ತಪ್ಪುವ ಪುಡಿಯನ್ನು ಹಾಕಿ, ನಂತರ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದರ ಜತೆಗೆ ಅಶ್ಲೀಲ ಫೋಟೋಗಳನ್ನು ತೆಗೆದು ವೀಡಿಯೋ ಕೂಡ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಇದನ್ನೂ ಓದಿ: ಎಂಟು ಮಂದಿಯ ತಂಡ ಮನೆಗೆ ನುಗ್ಗಿ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ತೆಲಂಗಾಣ ಪೊಲೀಸರು

ಇನ್ನು ಈ ಫೋಟೋ, ವಿಡಿಯೋವನ್ನು ಇಟ್ಟುಕೊಂಡು, ಆಕೆಗೆ ಬ್ಲಾಕ್​​ಮೇಲ್​​ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾನೆ. ಈ ಘಟನೆಯ ಬಗ್ಗೆ ಮಹಿಳೆ ಆರೋಪಿಯ ಸ್ನೇಹಿತರೊಬ್ಬರಿಗೆ ತಿಳಿಸಿದಾಗ, ಅವನು ಫೋಟೋಗಳನ್ನು ಡಿಲಿಟ್​​ ಮಾಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ನಾಲ್ಕೈದು ಮಂದಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್​​ ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Thu, 24 August 23

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ