ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್

ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್
ಸಾಂದರ್ಭಿಕ ಚಿತ್ರ

Updated on: Aug 24, 2023 | 5:18 PM

ದೆಹಲಿ, ಆ.24: ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ (delhi) ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದರ ಜತೆಗೆ ಆಕೆಯ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದು, ಆಕೆಯನ್ನು ಬ್ಲಾಕ್​ಮೇಲ್​​ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆ ಡಿಟಿಸಿಯಲ್ಲಿ (Delhi Transport Corporation) 2010 ರಿಂದ 2017 ರವರೆಗೆ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದಿದರು ಎಂದು ಹೇಳಲಾಗಿದೆ. ಆದರೆ ಆಕೆಗೆ ಮಗುವಾದ ನಂತರ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ.

ಒಂದು ದಿನ ಆರೋಪಿಯು ದೇವರ ಪ್ರಸಾದ್ ನೀಡಲು ಎಂಬ ನೆಪವನ್ನು ಹೇಳಿ ಮಹಿಳೆಯ ಮನೆಗೆ ಬಂದಿದ್ದಾನೆ. ಈ ಹಿಂದೆ ಆರೋಪಿ ಆಕೆಗೆ ಡಿಟಿಸಿಯಲ್ಲಿ ಕೆಲಸ ಕೊಡಿಸಲು ಸಹಾಯ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆಗೆ ಬಂದ ಆತನಿಗೆ ತಂಪು ಪಾನೀಯ ನೀಡಿ ಕೆಲವು ದಾಖಲೆಗಳನ್ನು ತರಲು ರೂಮಿನೊಳಗೆ ಹೋಗಿದ್ದಾಳೆ. ಈ ಸಮಯವನ್ನು ನೋಡಿದ ಆರೋಪಿ ಆಕೆಯ ತಂದ ತಂಪು ಪಾನೀಯ ಮತ್ತು ಪ್ರಸಾದಕ್ಕೆ ಪ್ರಜ್ಞೆ ತಪ್ಪುವ ಪುಡಿಯನ್ನು ಹಾಕಿ, ನಂತರ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದರ ಜತೆಗೆ ಅಶ್ಲೀಲ ಫೋಟೋಗಳನ್ನು ತೆಗೆದು ವೀಡಿಯೋ ಕೂಡ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಇದನ್ನೂ ಓದಿ: ಎಂಟು ಮಂದಿಯ ತಂಡ ಮನೆಗೆ ನುಗ್ಗಿ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ತೆಲಂಗಾಣ ಪೊಲೀಸರು

ಇನ್ನು ಈ ಫೋಟೋ, ವಿಡಿಯೋವನ್ನು ಇಟ್ಟುಕೊಂಡು, ಆಕೆಗೆ ಬ್ಲಾಕ್​​ಮೇಲ್​​ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾನೆ. ಈ ಘಟನೆಯ ಬಗ್ಗೆ ಮಹಿಳೆ ಆರೋಪಿಯ ಸ್ನೇಹಿತರೊಬ್ಬರಿಗೆ ತಿಳಿಸಿದಾಗ, ಅವನು ಫೋಟೋಗಳನ್ನು ಡಿಲಿಟ್​​ ಮಾಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ನಾಲ್ಕೈದು ಮಂದಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್​​ ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Thu, 24 August 23

Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow Us