Sign In

By signing in or creating an account, you agree with Associated Broadcasting Company's Terms & Conditions and Privacy Policy.

Jama Masjid: ದೆಹಲಿಯ ಜಾಮಾ ಮಸೀದಿ ಬಳಿ ಗುಂಡಿಕ್ಕಿ ಯುವಕನ ಹತ್ಯೆ

ದೆಹಲಿಯ ಜಾಮಾ ಮಸೀದಿ(Jama Masjid) ಬಳಿ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಜಾಮಾ ಮಸೀದಿ ಬಳಿ ಮೃತಪಟ್ಟವರನ್ನು ಸಮೀರ್ ಎಂದು ಗುರುತಿಸಲಾಗಿದೆ ಅವರು ಚಾವ್ರಿ ಬಜಾರ್ ನಿವಾಸಿಯಾಗಿದ್ದಾರೆ.

Jama Masjid: ದೆಹಲಿಯ ಜಾಮಾ ಮಸೀದಿ ಬಳಿ ಗುಂಡಿಕ್ಕಿ ಯುವಕನ ಹತ್ಯೆ
ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: May 18, 2023 | 11:09 AM

ದೆಹಲಿಯ ಜಾಮಾ ಮಸೀದಿ(Jama Masjid) ಬಳಿ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಜಾಮಾ ಮಸೀದಿ ಬಳಿ ಮೃತಪಟ್ಟವರನ್ನು ಸಮೀರ್ ಎಂದು ಗುರುತಿಸಲಾಗಿದೆ ಅವರು ಚಾವ್ರಿ ಬಜಾರ್ ನಿವಾಸಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮಸೀದಿಯ ಗೇಟ್​ ನಂಬರ್ 1ರ ಬಳಿ ಹಲವು ಸುತ್ತು ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಸಮೀರ್​ಗೆ ಗುಂಡು ತಗುಲಿದೆ. ಸಮೀರ್ ಆ ಪ್ರದೇಶದ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕೆಲವು ಕಿಡಿಗೇಡಿಗಳು ಹೋಟೆಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಜಗಳದ ವೇಳೆ ಸಮೀರ್ ಮಧ್ಯ ಪ್ರವೇಶಿಸಿದ್ದರು, ಆದರೆ ದುಷ್ಕರ್ಮಿಗಳು ಅಲ್ಲಿಯೇ ಗುಂಡು ಹಾರಿಸಲು ಶುರು ಮಾಡಿದ್ದರು. ಗಾಯಗೊಂಡಿದ್ದ ಸಮೀರ್​ನನ್ನು ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಹಲವು ಸುತ್ತುಗಳ ಗುಂಡು ಹಾರಿಸಿ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಪೊಲೀಸರ ಪ್ರಕಾರ ಮಧ್ಯರಾತ್ರಿ 1.40ರ ಸುಮಾರಿಗೆ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಮೀರ್ ತಲೆಗೆ ಗುಂಡು ತಗುಲಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಕೊಡಗು: ವ್ಯಾಪಾರಿ ಮೇಲೆ ಗುಂಡಿನ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು

ಮೃತ ಸಮೀರ್​ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ದುಷ್ಕರ್ಮಿಗಳು ಯಾರೆಂದು ಇದುವರೆಗೂ ತಿಳಿದುಬಂದಿಲ್ಲ. ಜಾಮಾ ಮಸೀದಿ ಬಳಿ ಗುಂಡಿನ ದಾಳಿ ನಡೆದಿರುವುದು ಎರಡನೇ ಬಾರಿ.

ಇದಕ್ಕೂ ಮೊದಲು ಮೇ 16 ರಂದು ಥಾನಾ ಚಾಂದಿನಿ ಮಹಲ್‌ನ ಚಿಟ್ಲಿ ಕಬ್ರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿತ್ತು. ಮೇ 14 ರಂದು ಪಶ್ಚಿಮ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ 58 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಯೊಬ್ಬರು ಗುಂಡಿಕ್ಕಿ ಕೊಂದಿದ್ದರು.

ಘಟನೆ ನಡೆದಾಗ ಮೃತರು ಕಸ ಎಸೆಯಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ಮೃತರು ತಮ್ಮ ಮಗಳೊಂದಿಗೆ ಮಾತನಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕರೆ ಮಾಡುವಾಗ ಗುಂಡಿನ ಸದ್ದು ಕೇಳಿದೆ ಎಂದು ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ